ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳ್ಳತನ: ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆ

 

ಭೌತಶಾಸ್ತ್ರ ಪ್ರಯೋಗಾಲಯದ ಬೀಗ ಮುರಿದು ಕಳತನ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ಮಾದಗೊಂಡನಹಳ್ಳಿ ರಸ್ತೆಯ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ವ್ಯಕ್ತಿಯೊಬ್ಬ ಭೌತಶಾಸ್ತ್ರ ಪ್ರಯೋಗಾಲಯದ ಬೀಗ ಮುರಿದು ಕಳ್ಳತನ ಮಾಡುತ್ತಿರುವ ದೃಶ್ಯ ಸಿ.ಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರಯೋಗಾಲಯದಲ್ಲಿ ಓಡಾಡಿರುವ ದುಷ್ಕರ್ಮಿ ವಿದ್ಯುತ್ ವೈರ್ ಮಾತ್ರ ಕಳುವು ಮಾಡಿದ್ದಾನೆ.

ಪ್ರಯೋಗಾಲಯದ ಬೀಗ ಮುರಿಯಲು ಹೋಗಿರುವುದರಿಂದ ಬಾಗಿಲಿಗೆ ಹಾನಿಯಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಸ್.ಜಂಬಗಿ ತಿಳಿಸಿದ್ದಾರೆ.

ಕಳತನ ನಡೆದಿರುವ ಘಟನೆ ಬಗ್ಗೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಘಟನೆಯ ವಿವರಗಳನ್ನು ಬರುವ ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಗಮನಕ್ಕೆ ತರಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಕಾಲೇಜಿಗೆ ಭದ್ರತೆ ಸಮಸ್ಯೆ :

ದೊಡ್ಡಬಳ್ಳಾಪುರ ನಗರದಿಂದ ದೂರವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಭದ್ರತೆ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳನ್ನು  ಹೊಂದಿದೆ. ಕಾಲೇಜಿನ ಸುತ್ತ ಕಾಂಪೌಂಡ್ ನಿರ್ಮಾಣವಾಗಿಲ್ಲ. ಇದರಿಂದಾಗಿ ಸಂಜೆಯ ನಂತರ ಕುಡುಕರ ಹಾವಳಿ ಇರುತ್ತದೆ. ಕಾಲೇಜಿನ ಮೈದಾನದಲ್ಲಿ ಖಾಲಿ ಬಾಟಲ್ ನಿತ್ಯ ಕಾಣುತ್ತವೆ. ಕಾಲೇಜಿನ ಹೊರಭಾಗದಲ್ಲಿರುವ ವಿದ್ಯುತ್ ಲೈಟ್ ಮತ್ತು ಸಂಪರ್ಕಗಳನ್ನು ಹಾಳು ಮಾಡುತ್ತಿದ್ದಾರೆ.  ಕಾಲೇಜಿಗೆ ಖಾಯಂ ಡಿ ಗ್ರೂಫ್ ನೌಕರರು ಮತ್ತು ರಾತ್ರಿ ಕಾವಲುಗಾರ ಇಲ್ಲ ಎಂದು ಪೋಷಕರು ದೂರಿದ್ದಾರೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

11 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

14 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago