ಭೌತಶಾಸ್ತ್ರ ಪ್ರಯೋಗಾಲಯದ ಬೀಗ ಮುರಿದು ಕಳತನ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ಮಾದಗೊಂಡನಹಳ್ಳಿ ರಸ್ತೆಯ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ವ್ಯಕ್ತಿಯೊಬ್ಬ ಭೌತಶಾಸ್ತ್ರ ಪ್ರಯೋಗಾಲಯದ ಬೀಗ ಮುರಿದು ಕಳ್ಳತನ ಮಾಡುತ್ತಿರುವ ದೃಶ್ಯ ಸಿ.ಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರಯೋಗಾಲಯದಲ್ಲಿ ಓಡಾಡಿರುವ ದುಷ್ಕರ್ಮಿ ವಿದ್ಯುತ್ ವೈರ್ ಮಾತ್ರ ಕಳುವು ಮಾಡಿದ್ದಾನೆ.
ಪ್ರಯೋಗಾಲಯದ ಬೀಗ ಮುರಿಯಲು ಹೋಗಿರುವುದರಿಂದ ಬಾಗಿಲಿಗೆ ಹಾನಿಯಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಸ್.ಜಂಬಗಿ ತಿಳಿಸಿದ್ದಾರೆ.
ಕಳತನ ನಡೆದಿರುವ ಘಟನೆ ಬಗ್ಗೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಘಟನೆಯ ವಿವರಗಳನ್ನು ಬರುವ ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಗಮನಕ್ಕೆ ತರಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಕಾಲೇಜಿಗೆ ಭದ್ರತೆ ಸಮಸ್ಯೆ :
ದೊಡ್ಡಬಳ್ಳಾಪುರ ನಗರದಿಂದ ದೂರವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಭದ್ರತೆ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಹೊಂದಿದೆ. ಕಾಲೇಜಿನ ಸುತ್ತ ಕಾಂಪೌಂಡ್ ನಿರ್ಮಾಣವಾಗಿಲ್ಲ. ಇದರಿಂದಾಗಿ ಸಂಜೆಯ ನಂತರ ಕುಡುಕರ ಹಾವಳಿ ಇರುತ್ತದೆ. ಕಾಲೇಜಿನ ಮೈದಾನದಲ್ಲಿ ಖಾಲಿ ಬಾಟಲ್ ನಿತ್ಯ ಕಾಣುತ್ತವೆ. ಕಾಲೇಜಿನ ಹೊರಭಾಗದಲ್ಲಿರುವ ವಿದ್ಯುತ್ ಲೈಟ್ ಮತ್ತು ಸಂಪರ್ಕಗಳನ್ನು ಹಾಳು ಮಾಡುತ್ತಿದ್ದಾರೆ. ಕಾಲೇಜಿಗೆ ಖಾಯಂ ಡಿ ಗ್ರೂಫ್ ನೌಕರರು ಮತ್ತು ರಾತ್ರಿ ಕಾವಲುಗಾರ ಇಲ್ಲ ಎಂದು ಪೋಷಕರು ದೂರಿದ್ದಾರೆ.
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…