ಭೌತಶಾಸ್ತ್ರ ಪ್ರಯೋಗಾಲಯದ ಬೀಗ ಮುರಿದು ಕಳತನ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ಮಾದಗೊಂಡನಹಳ್ಳಿ ರಸ್ತೆಯ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ವ್ಯಕ್ತಿಯೊಬ್ಬ ಭೌತಶಾಸ್ತ್ರ ಪ್ರಯೋಗಾಲಯದ ಬೀಗ ಮುರಿದು ಕಳ್ಳತನ ಮಾಡುತ್ತಿರುವ ದೃಶ್ಯ ಸಿ.ಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರಯೋಗಾಲಯದಲ್ಲಿ ಓಡಾಡಿರುವ ದುಷ್ಕರ್ಮಿ ವಿದ್ಯುತ್ ವೈರ್ ಮಾತ್ರ ಕಳುವು ಮಾಡಿದ್ದಾನೆ.
ಪ್ರಯೋಗಾಲಯದ ಬೀಗ ಮುರಿಯಲು ಹೋಗಿರುವುದರಿಂದ ಬಾಗಿಲಿಗೆ ಹಾನಿಯಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಸ್.ಜಂಬಗಿ ತಿಳಿಸಿದ್ದಾರೆ.
ಕಳತನ ನಡೆದಿರುವ ಘಟನೆ ಬಗ್ಗೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಘಟನೆಯ ವಿವರಗಳನ್ನು ಬರುವ ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಗಮನಕ್ಕೆ ತರಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಕಾಲೇಜಿಗೆ ಭದ್ರತೆ ಸಮಸ್ಯೆ :
ದೊಡ್ಡಬಳ್ಳಾಪುರ ನಗರದಿಂದ ದೂರವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಭದ್ರತೆ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಹೊಂದಿದೆ. ಕಾಲೇಜಿನ ಸುತ್ತ ಕಾಂಪೌಂಡ್ ನಿರ್ಮಾಣವಾಗಿಲ್ಲ. ಇದರಿಂದಾಗಿ ಸಂಜೆಯ ನಂತರ ಕುಡುಕರ ಹಾವಳಿ ಇರುತ್ತದೆ. ಕಾಲೇಜಿನ ಮೈದಾನದಲ್ಲಿ ಖಾಲಿ ಬಾಟಲ್ ನಿತ್ಯ ಕಾಣುತ್ತವೆ. ಕಾಲೇಜಿನ ಹೊರಭಾಗದಲ್ಲಿರುವ ವಿದ್ಯುತ್ ಲೈಟ್ ಮತ್ತು ಸಂಪರ್ಕಗಳನ್ನು ಹಾಳು ಮಾಡುತ್ತಿದ್ದಾರೆ. ಕಾಲೇಜಿಗೆ ಖಾಯಂ ಡಿ ಗ್ರೂಫ್ ನೌಕರರು ಮತ್ತು ರಾತ್ರಿ ಕಾವಲುಗಾರ ಇಲ್ಲ ಎಂದು ಪೋಷಕರು ದೂರಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…