ಭೌತಶಾಸ್ತ್ರ ಪ್ರಯೋಗಾಲಯದ ಬೀಗ ಮುರಿದು ಕಳತನ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ಮಾದಗೊಂಡನಹಳ್ಳಿ ರಸ್ತೆಯ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ವ್ಯಕ್ತಿಯೊಬ್ಬ ಭೌತಶಾಸ್ತ್ರ ಪ್ರಯೋಗಾಲಯದ ಬೀಗ ಮುರಿದು ಕಳ್ಳತನ ಮಾಡುತ್ತಿರುವ ದೃಶ್ಯ ಸಿ.ಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರಯೋಗಾಲಯದಲ್ಲಿ ಓಡಾಡಿರುವ ದುಷ್ಕರ್ಮಿ ವಿದ್ಯುತ್ ವೈರ್ ಮಾತ್ರ ಕಳುವು ಮಾಡಿದ್ದಾನೆ.
ಪ್ರಯೋಗಾಲಯದ ಬೀಗ ಮುರಿಯಲು ಹೋಗಿರುವುದರಿಂದ ಬಾಗಿಲಿಗೆ ಹಾನಿಯಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಸ್.ಜಂಬಗಿ ತಿಳಿಸಿದ್ದಾರೆ.
ಕಳತನ ನಡೆದಿರುವ ಘಟನೆ ಬಗ್ಗೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಘಟನೆಯ ವಿವರಗಳನ್ನು ಬರುವ ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಗಮನಕ್ಕೆ ತರಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಕಾಲೇಜಿಗೆ ಭದ್ರತೆ ಸಮಸ್ಯೆ :
ದೊಡ್ಡಬಳ್ಳಾಪುರ ನಗರದಿಂದ ದೂರವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಭದ್ರತೆ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಹೊಂದಿದೆ. ಕಾಲೇಜಿನ ಸುತ್ತ ಕಾಂಪೌಂಡ್ ನಿರ್ಮಾಣವಾಗಿಲ್ಲ. ಇದರಿಂದಾಗಿ ಸಂಜೆಯ ನಂತರ ಕುಡುಕರ ಹಾವಳಿ ಇರುತ್ತದೆ. ಕಾಲೇಜಿನ ಮೈದಾನದಲ್ಲಿ ಖಾಲಿ ಬಾಟಲ್ ನಿತ್ಯ ಕಾಣುತ್ತವೆ. ಕಾಲೇಜಿನ ಹೊರಭಾಗದಲ್ಲಿರುವ ವಿದ್ಯುತ್ ಲೈಟ್ ಮತ್ತು ಸಂಪರ್ಕಗಳನ್ನು ಹಾಳು ಮಾಡುತ್ತಿದ್ದಾರೆ. ಕಾಲೇಜಿಗೆ ಖಾಯಂ ಡಿ ಗ್ರೂಫ್ ನೌಕರರು ಮತ್ತು ರಾತ್ರಿ ಕಾವಲುಗಾರ ಇಲ್ಲ ಎಂದು ಪೋಷಕರು ದೂರಿದ್ದಾರೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…