ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ

ಇಂದು ವಿಶ್ವ‌ಜನಸಂಖ್ಯಾ ದಿನಾಚರಣೆ ಹಿನ್ನೆಲೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಆರೋಗ್ಯ ಇಲಾಖೆ ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಜಿಲ್ಲಾ ಮಲೇರಿಯಾ ವೈದ್ಯಾಧಿಕಾರಿಗಳಾದ ಡಾ. ಧರ್ಮೇಂದ್ರ ಅವರು ಉದ್ಘಾಟನೆ ಮಾಡಿ ಜನಸಂಖ್ಯಾ ನಿಯಂತ್ರಣ ಹಾಗೂ ಪೌಷ್ಟಿಕಾಂಶದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ನಂತರ ತಾಲೂಕು ಆರೋಗ್ಯ ಅಧಿಕಾರಿ ಡಾ.ಟಿ.ಎಚ್. ಪರಮೇಶ್ವರ್ ಮಾತನಾಡಿ, ಭಾರತದಲ್ಲಿ ಹಿಂದಿನಿಂದ ನಾವು ಜನಸಂಖ್ಯೆ ನಿಯಂತ್ರಣದ ಬಗ್ಗೆ ನಿರ್ಲಕ್ಷ ಮಾಡಿಕೊಂಡು ಬಂದಿದ್ದೇವೆ, ಈ ತಲೆಮಾರಿನ ಜನ ಆ ತಪ್ಪನ್ನು ಮಾಡಬಾರದೆಂದು ತಿಳಿಸಿದರು.

ಈ ವೇಳೆ ಇತಿಹಾಸ ವಿಭಾಗದ ಮುಖ್ಯಸ್ಥರಾದ ನೀರಜಾದೇವಿ, ಡಾ. ನಾಗರಾಜ, ಪ್ರಕಾಶ್ ಸೇರಿದಂತೆ ತಾಲೂಕಿನ ಎಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು

Leave a Reply

Your email address will not be published. Required fields are marked *