ಮುಳಬಾಗಿಲು ತಾಲ್ಲೂಕಿನ ಯಳಚೇಪಲ್ಲಿ ಗ್ರಾಮಕ್ಕೆ ಹೋಗುತ್ತಿರುವ ಬಸ್ ಅನ್ನು ನಿಲ್ಲಿಸಿರುವುದು ವಿರೋಧಿಸಿ, ಈ ಕೂಡಲೇ ಸರ್ಕಾರಿ ಬಸ್ ಸೇವೆ ಕಲ್ಪಿಸಕೊಡಬೇಕೆಂದು ಘಟಕ ವ್ಯವಸ್ಥಾಪಕರಿಗೆ ಮನವಿ ಪತ್ರ ನೀಡಲಾಯಿತು.
ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಮುಳಬಾಗಿಲು ತಾಲ್ಲೂಕು ಸಮಿತಿ ವತಿಯಿಂದ ಹಲವು ವರ್ಷಗಳಿಂದ ಸಮರ್ಪಕವಾಗಿ ಸರ್ಕಾರಿ ಬಸ್ ಸೌಲಭ್ಯಕ್ಕಾಗಿ ಹೋರಾಟಗಳು ನಡೆಸಿಕೊಂಡು ಬರುತ್ತಿದೆ. ಆದರೂ, ಮುಳಬಾಗಿಲು ತಾಲ್ಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಂದ ಸುಮಾರು. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಪಟ್ಟಣಕ್ಕೆ ಬರುತ್ತಿದ್ದು, ಸರಿಯಾದ ಸಮಯಕ್ಕೆ ಸರ್ಕಾರಿ ಬಸ್ಗಳ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಬಸ್ ಪಾಸ್ ಇದ್ದರೂ ಗ್ರಾಮೀಣ ಪ್ರದೇಶದಿಂದ ವಿದ್ಯಾಭ್ಯಾಸಕ್ಕಾಗಿ ಶಾಲಾ ಕಾಲೇಜಿಗೆ ಸರಿಯಾದ ಸಮಯ್ಯಕೆ ನಗರಕ್ಕೆ ಬರಲು ವಿದ್ಯಾರ್ಥಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲ್ಲೂಕು ಕಾರ್ಯದರ್ಶಿಯಾದ ಸುದರ್ಶನ್ ಮಾತನಾಡಿ, ತಾಯಲೂರು ವ್ಯಾಪ್ತಿಯಲ್ಲಿರುವ ಯಳಚೇಪಲ್ಲಿಗೆ ಕರೋನಾ ಸಮಯದ ಮುಂಚೆ ಬೆಳಿಗ್ಗೆ ಸಂಜೆ ಸರ್ಕಾರಿ ಬಸ್ ಸೌಲಭ್ಯವಿತ್ತು. ಆದರೆ, ಈಗ ಆ ಬಸ್ ಅನ್ನು ಕಳುಹಿಸುತ್ತಿಲ್ಲ, ವಿದ್ಯಾರ್ಥಿಗಳು ಸುಮಾರು 3-4 ಕಿ.ಮೀ. ನಡೆದುಕೊಂಡು ಬಂದು ಅಗರ ಗ್ರಾಮದ ಬಸ್ ತಂಗುದಾಣದಲ್ಲಿ ಬಸ್ ಹತ್ತುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ಬೆಳಿಗ್ಗೆ ಮತ್ತು ಸಾಯಂಕಾಲ ಯಳಚೇಪಲ್ಲಿ ಗ್ರಾಮಕ್ಕೆ ಹಿಂದಿನಂತೆಯೇ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಿಕೊಡಬೇಕು ಇಲ್ಲವೇ ತಾಲ್ಲೂಕು ಸರ್ಕಾರಿ ಬಸ್ ನಿಲ್ದಾನದಿಂದ ತಾಲ್ಲೂಕು ಕೆ ಎಸ್ ಆರ್ ಟಿ ಸಿ ಘಟಕದವರೆಗೂ ಬೃಹತ್ ಪಾದಯಾತ್ರೆಯ ಮೂಲಕ ಡಿಪೋ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಸಿದರು.
ಮನವಿ ಸ್ವೀಕರಿಸಿದ ವ್ಯವಸ್ಥಾಪಕರು, ಮಧ್ಯಾಹ್ನದ ಬಸ್ ಸೌಲಭ್ಯವನ್ನು ಕಲ್ಪಿಸಿಕೊಡುತ್ತೇವೆ ಹಾಗೂ ಬೆಳಿಗ್ಗೆ 8 ಗಂಟೆಗೆ ಕಳುಹಿಸುವ ಬಸ್ ಅನ್ನು 1 ವಾರದ ಒಳಗೆ ಕಲ್ಪಿಸಿಕೊಡುತ್ತೇವೆ ಎಂದು ತಿಳಿಸಿದ್ದಾರೆ .
ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲ್ಲೂಕು ಅಧ್ಯಕ್ಷರಾದ ಅರ್ಚನಾ ಜಿಲ್ಲಾ ಸಮಿತಿ ಸದಸ್ಯರಾದ ಅಜಯ್ ಕುಮಾರ್ ತಾಲ್ಲೂಕು ಸಮಿತಿ ಸದಸ್ಯರಾದ ರಾಕೇಷ್ ಹಾಗೂ ನಾಗೇಷ್ ಮತ್ತು ಎಸ್ ಎಫ್ ಐ ಮುಖಂಡರು ಹಾಗೂ ಯಳಚೇಪಲ್ಲಿ ವಿದ್ಯಾರ್ಥಿಗಳು ಹಾಜರಿದ್ದರು.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…