ಮುಳಬಾಗಿಲು ತಾಲ್ಲೂಕಿನ ಯಳಚೇಪಲ್ಲಿ ಗ್ರಾಮಕ್ಕೆ ಹೋಗುತ್ತಿರುವ ಬಸ್ ಅನ್ನು ನಿಲ್ಲಿಸಿರುವುದು ವಿರೋಧಿಸಿ, ಈ ಕೂಡಲೇ ಸರ್ಕಾರಿ ಬಸ್ ಸೇವೆ ಕಲ್ಪಿಸಕೊಡಬೇಕೆಂದು ಘಟಕ ವ್ಯವಸ್ಥಾಪಕರಿಗೆ ಮನವಿ ಪತ್ರ ನೀಡಲಾಯಿತು.
ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಮುಳಬಾಗಿಲು ತಾಲ್ಲೂಕು ಸಮಿತಿ ವತಿಯಿಂದ ಹಲವು ವರ್ಷಗಳಿಂದ ಸಮರ್ಪಕವಾಗಿ ಸರ್ಕಾರಿ ಬಸ್ ಸೌಲಭ್ಯಕ್ಕಾಗಿ ಹೋರಾಟಗಳು ನಡೆಸಿಕೊಂಡು ಬರುತ್ತಿದೆ. ಆದರೂ, ಮುಳಬಾಗಿಲು ತಾಲ್ಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಂದ ಸುಮಾರು. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಪಟ್ಟಣಕ್ಕೆ ಬರುತ್ತಿದ್ದು, ಸರಿಯಾದ ಸಮಯಕ್ಕೆ ಸರ್ಕಾರಿ ಬಸ್ಗಳ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಬಸ್ ಪಾಸ್ ಇದ್ದರೂ ಗ್ರಾಮೀಣ ಪ್ರದೇಶದಿಂದ ವಿದ್ಯಾಭ್ಯಾಸಕ್ಕಾಗಿ ಶಾಲಾ ಕಾಲೇಜಿಗೆ ಸರಿಯಾದ ಸಮಯ್ಯಕೆ ನಗರಕ್ಕೆ ಬರಲು ವಿದ್ಯಾರ್ಥಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲ್ಲೂಕು ಕಾರ್ಯದರ್ಶಿಯಾದ ಸುದರ್ಶನ್ ಮಾತನಾಡಿ, ತಾಯಲೂರು ವ್ಯಾಪ್ತಿಯಲ್ಲಿರುವ ಯಳಚೇಪಲ್ಲಿಗೆ ಕರೋನಾ ಸಮಯದ ಮುಂಚೆ ಬೆಳಿಗ್ಗೆ ಸಂಜೆ ಸರ್ಕಾರಿ ಬಸ್ ಸೌಲಭ್ಯವಿತ್ತು. ಆದರೆ, ಈಗ ಆ ಬಸ್ ಅನ್ನು ಕಳುಹಿಸುತ್ತಿಲ್ಲ, ವಿದ್ಯಾರ್ಥಿಗಳು ಸುಮಾರು 3-4 ಕಿ.ಮೀ. ನಡೆದುಕೊಂಡು ಬಂದು ಅಗರ ಗ್ರಾಮದ ಬಸ್ ತಂಗುದಾಣದಲ್ಲಿ ಬಸ್ ಹತ್ತುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ಬೆಳಿಗ್ಗೆ ಮತ್ತು ಸಾಯಂಕಾಲ ಯಳಚೇಪಲ್ಲಿ ಗ್ರಾಮಕ್ಕೆ ಹಿಂದಿನಂತೆಯೇ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಿಕೊಡಬೇಕು ಇಲ್ಲವೇ ತಾಲ್ಲೂಕು ಸರ್ಕಾರಿ ಬಸ್ ನಿಲ್ದಾನದಿಂದ ತಾಲ್ಲೂಕು ಕೆ ಎಸ್ ಆರ್ ಟಿ ಸಿ ಘಟಕದವರೆಗೂ ಬೃಹತ್ ಪಾದಯಾತ್ರೆಯ ಮೂಲಕ ಡಿಪೋ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಸಿದರು.
ಮನವಿ ಸ್ವೀಕರಿಸಿದ ವ್ಯವಸ್ಥಾಪಕರು, ಮಧ್ಯಾಹ್ನದ ಬಸ್ ಸೌಲಭ್ಯವನ್ನು ಕಲ್ಪಿಸಿಕೊಡುತ್ತೇವೆ ಹಾಗೂ ಬೆಳಿಗ್ಗೆ 8 ಗಂಟೆಗೆ ಕಳುಹಿಸುವ ಬಸ್ ಅನ್ನು 1 ವಾರದ ಒಳಗೆ ಕಲ್ಪಿಸಿಕೊಡುತ್ತೇವೆ ಎಂದು ತಿಳಿಸಿದ್ದಾರೆ .
ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲ್ಲೂಕು ಅಧ್ಯಕ್ಷರಾದ ಅರ್ಚನಾ ಜಿಲ್ಲಾ ಸಮಿತಿ ಸದಸ್ಯರಾದ ಅಜಯ್ ಕುಮಾರ್ ತಾಲ್ಲೂಕು ಸಮಿತಿ ಸದಸ್ಯರಾದ ರಾಕೇಷ್ ಹಾಗೂ ನಾಗೇಷ್ ಮತ್ತು ಎಸ್ ಎಫ್ ಐ ಮುಖಂಡರು ಹಾಗೂ ಯಳಚೇಪಲ್ಲಿ ವಿದ್ಯಾರ್ಥಿಗಳು ಹಾಜರಿದ್ದರು.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…