ರಾಜ್ಯದಲ್ಲಿ ಸರ್ಕಾರಿ ಭೂಮಿ ಸಂರಕ್ಷಣೆ ಹಾಗೂ ಒತ್ತುವರಿ ತೆರವು ಮಾಡುವ ನಿಟ್ಟಿನಲ್ಲಿ ಕಂದಾಯ ಇಲಾಖೆ ದೇಶದಲ್ಲಿಯೇ ನೂತನವಾಗಿ ಲ್ಯಾಂಡ್ ಬೀಟ್ ವ್ಯವಸ್ಥೆಯನ್ನು ಅಳವಡಿಸಿದ್ದು, ಮೊಬೈಲ್ ಆ್ಯಪ್ ಮೂಲಕ ಗ್ರಾಮಗಳ ಹಾಗೂ ಸರ್ವೆ ಸಂಖ್ಯೆಗಳ ಪ್ರಕಾರದಂತೆ ದಾಖಲೀಕರಣ ಮಾಡಲಾಗುತ್ತಿದೆ. ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೆ 14 ಲಕ್ಷ ಸರ್ಕಾರಿ ಜಾಗಗಳನ್ನು ಅಪ್ಲೋ ಡ್ ಮಾಡಲಾಗಿದ್ದು, ಇದರಲ್ಲಿ 5.9 ಲಕ್ಷ ಜಾಗಗಳನ್ನು ಮೊಹಜರು ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಗ್ರಾಮಗಳಿಗೆ ಭೇಟಿ ನೀಡಿ, ಕಂದಾಯ ಅಧಿಕಾರಿಗಳೊಂದಿಗೆ ಲ್ಯಾಂಡ್ ಬೀಟ್ ಹಾಗೂ ಆಧಾರ್ ಸೀಡಿಂಗ್ ವ್ಯವಸ್ಥೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಸರ್ಕಾರಿ ಭೂಮಿ ಭದ್ರತೆ ತಳಹಂತದಿಂದಲೇ ಭದ್ರಪಡಿಸಬೇಕು ಎನ್ನುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದರು.
ಯಾವ ಸರ್ವೇ ನಂಬರ್ ಒತ್ತುವರಿಯಾಗಿದೆ ಎಂದು ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲಿಸಿ, ಜಿಪಿಎಸ್ ಮುಖಾಂತರ ವರದಿ ನೀಡಲಿದ್ದಾರೆ. ಕೆರೆ, ಸ್ಮಶಾನ ಇತರೆ ಸರ್ಕಾರಿ ಭೂಮಿಯ ಬಳಿ ಸುತ್ತಾಡುವ ಮೂಲಕ ಒತ್ತುವರಿಯನ್ನು ಗುರುತಿಸಬಹುದಾಗಿದೆ. ಒತ್ತವರಿ ಗುರುತಿಸಿರುವ ಕುರಿತು ಆನ್ ಲೈನ್ ಮೂಲಕವೇ ಜಿಲ್ಲಾಧಿಕಾರಿಗಳಿಗೆ ಹೋಗಲಿದೆ. ಈ ಮಾಗಹಿತಿ ಆಧಾರದ ಮೇಲೆ ಜಿಲ್ಲಾಧಿಕಾರಿಗಳು ಸರ್ವೇ ಇಲಾಖೆಯಿಂದ ಸ್ಥಳ ನಕ್ಷೆ ತಯಾರಿಸಿ ಒತ್ತುವರಿ ತೆರವು ಮಾಡಿಸಲಿದ್ದಾರೆ. ಪ್ರತಿ ಮೂರು ತಿಂಗಳಿಗೊಮ್ಮೆ ಈ ಪ್ರಕ್ರಿಯೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು.
ಆರ್.ಟಿ.ಸಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಅಭಿಯಾನ
ಆರ್.ಟಿ.ಸಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ದೃಢೀಕರಣ ನೀಡುವ ಅಭಿಯಾನ ಸಹ ಚಾಲನೆಯಲ್ಲಿದ್ದು, ಈ ಮೂಲಕ ಕೃಷಿ ಆಸ್ತಿಗಳಿಗೆ ಭದ್ರತೆ ನೀಡಲಾಗುತ್ತಿದೆ. ಇದರಿಂದ ಜಮೀನುಗಳ ದಾಖಲೆಗಳಲ್ಲಿ ಆಗಬಹುದಾದ ವಂಚನೆಗಳನ್ನು ತಡೆಗಟ್ಟಬಹುದಾಗಿದೆ. ರಾಜ್ಯದಲ್ಲಿನ 4ಕೋಟಿ 30 ಲಕ್ಷ ಕೃಷಿ ಆಸ್ತಿಗಳ ಮಾಲೀಕತ್ವಕ್ಕೆ 1ಕೋಟಿ 40 ಲಕ್ಷ ಆಸ್ತಿಗಳ ಆರ್.ಟಿ.ಸಿಗೆ ಆಧಾರ್ ಸಂಖ್ಯೆಯನ್ನು ದೃಢೀಕರಿಸಿ ಜೋಡಣೆ ಮಾಡಲಾಗಿದೆ. ಈ ವ್ಯವಸ್ಥೆಯಿಂದ ಜನರು ಕಚೇರಿಗಳಿಗೆ ಅಲೆಯುವುದು ತಪ್ಪುತ್ತದೆ ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಜಿಲ್ಲಾಧಿಕಾರಿ ಎನ್.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ಎಂ.ಶ್ರೀನಿವಾಸ್, ತಹಶೀಲ್ದಾರ್ ವಿಭಾವಿದ್ಯಾರಾಥೋಡ್, ಶಾಸಕ ಧೀರಜ್ ಮುನಿರಾಜ್, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಭೂಮಿ ಉಸ್ತುವಾರಿ ಯೋಜನಾ ವ್ಯವಸ್ಥಾಪಕ ಸುರೇಶ್ ನಾಯರ್, ತಹಶೀಲ್ದಾರ್ ವಿಶ್ವೇಶ್ವರರೆಡ್ಡಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ ಇದ್ದರು.
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…