ರಾಜ್ಯದಲ್ಲಿ ಸರ್ಕಾರಿ ಭೂಮಿ ಸಂರಕ್ಷಣೆ ಹಾಗೂ ಒತ್ತುವರಿ ತೆರವು ಮಾಡುವ ನಿಟ್ಟಿನಲ್ಲಿ ಕಂದಾಯ ಇಲಾಖೆ ದೇಶದಲ್ಲಿಯೇ ನೂತನವಾಗಿ ಲ್ಯಾಂಡ್ ಬೀಟ್ ವ್ಯವಸ್ಥೆಯನ್ನು ಅಳವಡಿಸಿದ್ದು, ಮೊಬೈಲ್ ಆ್ಯಪ್ ಮೂಲಕ ಗ್ರಾಮಗಳ ಹಾಗೂ ಸರ್ವೆ ಸಂಖ್ಯೆಗಳ ಪ್ರಕಾರದಂತೆ ದಾಖಲೀಕರಣ ಮಾಡಲಾಗುತ್ತಿದೆ. ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೆ 14 ಲಕ್ಷ ಸರ್ಕಾರಿ ಜಾಗಗಳನ್ನು ಅಪ್ಲೋ ಡ್ ಮಾಡಲಾಗಿದ್ದು, ಇದರಲ್ಲಿ 5.9 ಲಕ್ಷ ಜಾಗಗಳನ್ನು ಮೊಹಜರು ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಗ್ರಾಮಗಳಿಗೆ ಭೇಟಿ ನೀಡಿ, ಕಂದಾಯ ಅಧಿಕಾರಿಗಳೊಂದಿಗೆ ಲ್ಯಾಂಡ್ ಬೀಟ್ ಹಾಗೂ ಆಧಾರ್ ಸೀಡಿಂಗ್ ವ್ಯವಸ್ಥೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಸರ್ಕಾರಿ ಭೂಮಿ ಭದ್ರತೆ ತಳಹಂತದಿಂದಲೇ ಭದ್ರಪಡಿಸಬೇಕು ಎನ್ನುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದರು.
ಯಾವ ಸರ್ವೇ ನಂಬರ್ ಒತ್ತುವರಿಯಾಗಿದೆ ಎಂದು ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲಿಸಿ, ಜಿಪಿಎಸ್ ಮುಖಾಂತರ ವರದಿ ನೀಡಲಿದ್ದಾರೆ. ಕೆರೆ, ಸ್ಮಶಾನ ಇತರೆ ಸರ್ಕಾರಿ ಭೂಮಿಯ ಬಳಿ ಸುತ್ತಾಡುವ ಮೂಲಕ ಒತ್ತುವರಿಯನ್ನು ಗುರುತಿಸಬಹುದಾಗಿದೆ. ಒತ್ತವರಿ ಗುರುತಿಸಿರುವ ಕುರಿತು ಆನ್ ಲೈನ್ ಮೂಲಕವೇ ಜಿಲ್ಲಾಧಿಕಾರಿಗಳಿಗೆ ಹೋಗಲಿದೆ. ಈ ಮಾಗಹಿತಿ ಆಧಾರದ ಮೇಲೆ ಜಿಲ್ಲಾಧಿಕಾರಿಗಳು ಸರ್ವೇ ಇಲಾಖೆಯಿಂದ ಸ್ಥಳ ನಕ್ಷೆ ತಯಾರಿಸಿ ಒತ್ತುವರಿ ತೆರವು ಮಾಡಿಸಲಿದ್ದಾರೆ. ಪ್ರತಿ ಮೂರು ತಿಂಗಳಿಗೊಮ್ಮೆ ಈ ಪ್ರಕ್ರಿಯೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು.
ಆರ್.ಟಿ.ಸಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಅಭಿಯಾನ
ಆರ್.ಟಿ.ಸಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ದೃಢೀಕರಣ ನೀಡುವ ಅಭಿಯಾನ ಸಹ ಚಾಲನೆಯಲ್ಲಿದ್ದು, ಈ ಮೂಲಕ ಕೃಷಿ ಆಸ್ತಿಗಳಿಗೆ ಭದ್ರತೆ ನೀಡಲಾಗುತ್ತಿದೆ. ಇದರಿಂದ ಜಮೀನುಗಳ ದಾಖಲೆಗಳಲ್ಲಿ ಆಗಬಹುದಾದ ವಂಚನೆಗಳನ್ನು ತಡೆಗಟ್ಟಬಹುದಾಗಿದೆ. ರಾಜ್ಯದಲ್ಲಿನ 4ಕೋಟಿ 30 ಲಕ್ಷ ಕೃಷಿ ಆಸ್ತಿಗಳ ಮಾಲೀಕತ್ವಕ್ಕೆ 1ಕೋಟಿ 40 ಲಕ್ಷ ಆಸ್ತಿಗಳ ಆರ್.ಟಿ.ಸಿಗೆ ಆಧಾರ್ ಸಂಖ್ಯೆಯನ್ನು ದೃಢೀಕರಿಸಿ ಜೋಡಣೆ ಮಾಡಲಾಗಿದೆ. ಈ ವ್ಯವಸ್ಥೆಯಿಂದ ಜನರು ಕಚೇರಿಗಳಿಗೆ ಅಲೆಯುವುದು ತಪ್ಪುತ್ತದೆ ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಜಿಲ್ಲಾಧಿಕಾರಿ ಎನ್.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ಎಂ.ಶ್ರೀನಿವಾಸ್, ತಹಶೀಲ್ದಾರ್ ವಿಭಾವಿದ್ಯಾರಾಥೋಡ್, ಶಾಸಕ ಧೀರಜ್ ಮುನಿರಾಜ್, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಭೂಮಿ ಉಸ್ತುವಾರಿ ಯೋಜನಾ ವ್ಯವಸ್ಥಾಪಕ ಸುರೇಶ್ ನಾಯರ್, ತಹಶೀಲ್ದಾರ್ ವಿಶ್ವೇಶ್ವರರೆಡ್ಡಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ ಇದ್ದರು.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…