ಸರ್ಕಾರಿ ಭೂಮಿ ಸಂರಕ್ಷಣೆ ಹಾಗೂ ಒತ್ತುವರಿ ತೆರವುಗೊಳಿಸಲು ‘ಲ್ಯಾಂಡ್‍ ಬೀಟ್’ ವ್ಯವಸ್ಥೆ ಅಳವಡಿಕೆ-ಕಂದಾಯ ಸಚಿವ ಕೃಷ್ಣಬೈರೇಗೌಡ

ರಾಜ್ಯದಲ್ಲಿ ಸರ್ಕಾರಿ ಭೂಮಿ ಸಂರಕ್ಷಣೆ ಹಾಗೂ ಒತ್ತುವರಿ ತೆರವು ಮಾಡುವ ನಿಟ್ಟಿನಲ್ಲಿ ಕಂದಾಯ ಇಲಾಖೆ ದೇಶದಲ್ಲಿಯೇ ನೂತನವಾಗಿ ಲ್ಯಾಂಡ್‍ ಬೀಟ್ ವ್ಯವಸ್ಥೆಯನ್ನು ಅಳವಡಿಸಿದ್ದು, ಮೊಬೈಲ್‍ ಆ್ಯಪ್‍ ಮೂಲಕ ಗ್ರಾಮಗಳ ಹಾಗೂ ಸರ್ವೆ‍ ಸಂಖ್ಯೆಗಳ ಪ್ರಕಾರದಂತೆ ದಾಖಲೀಕರಣ ಮಾಡಲಾಗುತ್ತಿದೆ. ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೆ 14 ಲಕ್ಷ ಸರ್ಕಾರಿ ಜಾಗಗಳನ್ನು  ಅಪ್ಲೋ ಡ್‍ ಮಾಡಲಾಗಿದ್ದು, ಇದರಲ್ಲಿ 5.9 ಲಕ್ಷ ಜಾಗಗಳನ್ನು ಮೊಹಜರು ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಗ್ರಾಮಗಳಿಗೆ ಭೇಟಿ ನೀಡಿ, ಕಂದಾಯ ಅಧಿಕಾರಿಗಳೊಂದಿಗೆ ಲ್ಯಾಂಡ್‍ ಬೀಟ್ ಹಾಗೂ ಆಧಾರ್‍ ಸೀಡಿಂಗ್‍ ವ್ಯವಸ್ಥೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಸರ್ಕಾರಿ ಭೂಮಿ ಭದ್ರತೆ ತಳಹಂತದಿಂದಲೇ  ಭದ್ರಪಡಿಸಬೇಕು ಎನ್ನುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದರು.

ಯಾವ ಸರ್ವೇ ನಂಬರ್‍ ಒತ್ತುವರಿಯಾಗಿದೆ ಎಂದು ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲಿಸಿ, ಜಿಪಿಎಸ್‍ ಮುಖಾಂತರ ವರದಿ ನೀಡಲಿದ್ದಾರೆ. ಕೆರೆ, ಸ್ಮಶಾನ ಇತರೆ ಸರ್ಕಾರಿ ಭೂಮಿಯ ಬಳಿ ಸುತ್ತಾಡುವ ಮೂಲಕ ಒತ್ತುವರಿಯನ್ನು ಗುರುತಿಸಬಹುದಾಗಿದೆ. ಒತ್ತವರಿ ಗುರುತಿಸಿರುವ ಕುರಿತು ಆನ್ ಲೈನ್ ಮೂಲಕವೇ ಜಿಲ್ಲಾಧಿಕಾರಿಗಳಿಗೆ ಹೋಗಲಿದೆ. ಈ ಮಾಗಹಿತಿ ಆಧಾರದ ಮೇಲೆ ಜಿಲ್ಲಾಧಿಕಾರಿಗಳು ಸರ್ವೇ ಇಲಾಖೆಯಿಂದ ಸ್ಥಳ ನಕ್ಷೆ ತಯಾರಿಸಿ ಒತ್ತುವರಿ ತೆರವು ಮಾಡಿಸಲಿದ್ದಾರೆ. ಪ್ರತಿ ಮೂರು ತಿಂಗಳಿಗೊಮ್ಮೆ ಈ ಪ್ರಕ್ರಿಯೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು.

ಆರ್‍.ಟಿ.ಸಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಅಭಿಯಾನ

ಆರ್‍.ಟಿ.ಸಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ದೃಢೀಕರಣ ನೀಡುವ ಅಭಿಯಾನ ಸಹ ಚಾಲನೆಯಲ್ಲಿದ್ದು, ಈ ಮೂಲಕ ಕೃಷಿ ಆಸ್ತಿಗಳಿಗೆ ಭದ್ರತೆ ನೀಡಲಾಗುತ್ತಿದೆ. ಇದರಿಂದ ಜಮೀನುಗಳ ದಾಖಲೆಗಳಲ್ಲಿ ಆಗಬಹುದಾದ  ವಂಚನೆಗಳನ್ನು ತಡೆಗಟ್ಟಬಹುದಾಗಿದೆ. ರಾಜ್ಯದಲ್ಲಿನ 4ಕೋಟಿ 30 ಲಕ್ಷ ಕೃಷಿ ಆಸ್ತಿಗಳ ಮಾಲೀಕತ್ವಕ್ಕೆ 1ಕೋಟಿ 40 ಲಕ್ಷ ಆಸ್ತಿಗಳ  ಆರ್‍.ಟಿ.ಸಿಗೆ ಆಧಾರ್‍ ಸಂಖ್ಯೆಯನ್ನು ದೃಢೀಕರಿಸಿ ಜೋಡಣೆ ಮಾಡಲಾಗಿದೆ. ಈ ವ್ಯವಸ್ಥೆಯಿಂದ ಜನರು ಕಚೇರಿಗಳಿಗೆ ಅಲೆಯುವುದು ತಪ್ಪುತ್ತದೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಜಿಲ್ಲಾಧಿಕಾರಿ ಎನ್.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ಎಂ.ಶ್ರೀನಿವಾಸ್, ತಹಶೀಲ್ದಾರ್ ವಿಭಾವಿದ್ಯಾರಾಥೋಡ್, ಶಾಸಕ ಧೀರಜ್ ಮುನಿರಾಜ್, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಭೂಮಿ ಉಸ್ತುವಾರಿ ಯೋಜನಾ ವ್ಯವಸ್ಥಾಪಕ ಸುರೇಶ್ ನಾಯರ್, ತಹಶೀಲ್ದಾರ್ ವಿಶ್ವೇಶ್ವರರೆಡ್ಡಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ ಇದ್ದರು.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

8 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

8 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

9 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

12 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

23 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago