ಸರ್ಕಾರಿ ಭೂಮಿ ಸಂರಕ್ಷಣೆ ಹಾಗೂ ಒತ್ತುವರಿ ತೆರವುಗೊಳಿಸಲು ‘ಲ್ಯಾಂಡ್‍ ಬೀಟ್’ ವ್ಯವಸ್ಥೆ ಅಳವಡಿಕೆ-ಕಂದಾಯ ಸಚಿವ ಕೃಷ್ಣಬೈರೇಗೌಡ

ರಾಜ್ಯದಲ್ಲಿ ಸರ್ಕಾರಿ ಭೂಮಿ ಸಂರಕ್ಷಣೆ ಹಾಗೂ ಒತ್ತುವರಿ ತೆರವು ಮಾಡುವ ನಿಟ್ಟಿನಲ್ಲಿ ಕಂದಾಯ ಇಲಾಖೆ ದೇಶದಲ್ಲಿಯೇ ನೂತನವಾಗಿ ಲ್ಯಾಂಡ್‍ ಬೀಟ್ ವ್ಯವಸ್ಥೆಯನ್ನು ಅಳವಡಿಸಿದ್ದು, ಮೊಬೈಲ್‍ ಆ್ಯಪ್‍ ಮೂಲಕ ಗ್ರಾಮಗಳ ಹಾಗೂ ಸರ್ವೆ‍ ಸಂಖ್ಯೆಗಳ ಪ್ರಕಾರದಂತೆ ದಾಖಲೀಕರಣ ಮಾಡಲಾಗುತ್ತಿದೆ. ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೆ 14 ಲಕ್ಷ ಸರ್ಕಾರಿ ಜಾಗಗಳನ್ನು  ಅಪ್ಲೋ ಡ್‍ ಮಾಡಲಾಗಿದ್ದು, ಇದರಲ್ಲಿ 5.9 ಲಕ್ಷ ಜಾಗಗಳನ್ನು ಮೊಹಜರು ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಗ್ರಾಮಗಳಿಗೆ ಭೇಟಿ ನೀಡಿ, ಕಂದಾಯ ಅಧಿಕಾರಿಗಳೊಂದಿಗೆ ಲ್ಯಾಂಡ್‍ ಬೀಟ್ ಹಾಗೂ ಆಧಾರ್‍ ಸೀಡಿಂಗ್‍ ವ್ಯವಸ್ಥೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಸರ್ಕಾರಿ ಭೂಮಿ ಭದ್ರತೆ ತಳಹಂತದಿಂದಲೇ  ಭದ್ರಪಡಿಸಬೇಕು ಎನ್ನುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದರು.

ಯಾವ ಸರ್ವೇ ನಂಬರ್‍ ಒತ್ತುವರಿಯಾಗಿದೆ ಎಂದು ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲಿಸಿ, ಜಿಪಿಎಸ್‍ ಮುಖಾಂತರ ವರದಿ ನೀಡಲಿದ್ದಾರೆ. ಕೆರೆ, ಸ್ಮಶಾನ ಇತರೆ ಸರ್ಕಾರಿ ಭೂಮಿಯ ಬಳಿ ಸುತ್ತಾಡುವ ಮೂಲಕ ಒತ್ತುವರಿಯನ್ನು ಗುರುತಿಸಬಹುದಾಗಿದೆ. ಒತ್ತವರಿ ಗುರುತಿಸಿರುವ ಕುರಿತು ಆನ್ ಲೈನ್ ಮೂಲಕವೇ ಜಿಲ್ಲಾಧಿಕಾರಿಗಳಿಗೆ ಹೋಗಲಿದೆ. ಈ ಮಾಗಹಿತಿ ಆಧಾರದ ಮೇಲೆ ಜಿಲ್ಲಾಧಿಕಾರಿಗಳು ಸರ್ವೇ ಇಲಾಖೆಯಿಂದ ಸ್ಥಳ ನಕ್ಷೆ ತಯಾರಿಸಿ ಒತ್ತುವರಿ ತೆರವು ಮಾಡಿಸಲಿದ್ದಾರೆ. ಪ್ರತಿ ಮೂರು ತಿಂಗಳಿಗೊಮ್ಮೆ ಈ ಪ್ರಕ್ರಿಯೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು.

ಆರ್‍.ಟಿ.ಸಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಅಭಿಯಾನ

ಆರ್‍.ಟಿ.ಸಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ದೃಢೀಕರಣ ನೀಡುವ ಅಭಿಯಾನ ಸಹ ಚಾಲನೆಯಲ್ಲಿದ್ದು, ಈ ಮೂಲಕ ಕೃಷಿ ಆಸ್ತಿಗಳಿಗೆ ಭದ್ರತೆ ನೀಡಲಾಗುತ್ತಿದೆ. ಇದರಿಂದ ಜಮೀನುಗಳ ದಾಖಲೆಗಳಲ್ಲಿ ಆಗಬಹುದಾದ  ವಂಚನೆಗಳನ್ನು ತಡೆಗಟ್ಟಬಹುದಾಗಿದೆ. ರಾಜ್ಯದಲ್ಲಿನ 4ಕೋಟಿ 30 ಲಕ್ಷ ಕೃಷಿ ಆಸ್ತಿಗಳ ಮಾಲೀಕತ್ವಕ್ಕೆ 1ಕೋಟಿ 40 ಲಕ್ಷ ಆಸ್ತಿಗಳ  ಆರ್‍.ಟಿ.ಸಿಗೆ ಆಧಾರ್‍ ಸಂಖ್ಯೆಯನ್ನು ದೃಢೀಕರಿಸಿ ಜೋಡಣೆ ಮಾಡಲಾಗಿದೆ. ಈ ವ್ಯವಸ್ಥೆಯಿಂದ ಜನರು ಕಚೇರಿಗಳಿಗೆ ಅಲೆಯುವುದು ತಪ್ಪುತ್ತದೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಜಿಲ್ಲಾಧಿಕಾರಿ ಎನ್.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ಎಂ.ಶ್ರೀನಿವಾಸ್, ತಹಶೀಲ್ದಾರ್ ವಿಭಾವಿದ್ಯಾರಾಥೋಡ್, ಶಾಸಕ ಧೀರಜ್ ಮುನಿರಾಜ್, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಭೂಮಿ ಉಸ್ತುವಾರಿ ಯೋಜನಾ ವ್ಯವಸ್ಥಾಪಕ ಸುರೇಶ್ ನಾಯರ್, ತಹಶೀಲ್ದಾರ್ ವಿಶ್ವೇಶ್ವರರೆಡ್ಡಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ ಇದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago