ಸರ್ಕಾರಿ ಭೂಮಿ ಸಂರಕ್ಷಣೆ ಹಾಗೂ ಒತ್ತುವರಿ ತೆರವುಗೊಳಿಸಲು ‘ಲ್ಯಾಂಡ್‍ ಬೀಟ್’ ವ್ಯವಸ್ಥೆ ಅಳವಡಿಕೆ-ಕಂದಾಯ ಸಚಿವ ಕೃಷ್ಣಬೈರೇಗೌಡ

ರಾಜ್ಯದಲ್ಲಿ ಸರ್ಕಾರಿ ಭೂಮಿ ಸಂರಕ್ಷಣೆ ಹಾಗೂ ಒತ್ತುವರಿ ತೆರವು ಮಾಡುವ ನಿಟ್ಟಿನಲ್ಲಿ ಕಂದಾಯ ಇಲಾಖೆ ದೇಶದಲ್ಲಿಯೇ ನೂತನವಾಗಿ ಲ್ಯಾಂಡ್‍ ಬೀಟ್ ವ್ಯವಸ್ಥೆಯನ್ನು ಅಳವಡಿಸಿದ್ದು, ಮೊಬೈಲ್‍ ಆ್ಯಪ್‍ ಮೂಲಕ ಗ್ರಾಮಗಳ ಹಾಗೂ ಸರ್ವೆ‍ ಸಂಖ್ಯೆಗಳ ಪ್ರಕಾರದಂತೆ ದಾಖಲೀಕರಣ ಮಾಡಲಾಗುತ್ತಿದೆ. ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೆ 14 ಲಕ್ಷ ಸರ್ಕಾರಿ ಜಾಗಗಳನ್ನು  ಅಪ್ಲೋ ಡ್‍ ಮಾಡಲಾಗಿದ್ದು, ಇದರಲ್ಲಿ 5.9 ಲಕ್ಷ ಜಾಗಗಳನ್ನು ಮೊಹಜರು ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಗ್ರಾಮಗಳಿಗೆ ಭೇಟಿ ನೀಡಿ, ಕಂದಾಯ ಅಧಿಕಾರಿಗಳೊಂದಿಗೆ ಲ್ಯಾಂಡ್‍ ಬೀಟ್ ಹಾಗೂ ಆಧಾರ್‍ ಸೀಡಿಂಗ್‍ ವ್ಯವಸ್ಥೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಸರ್ಕಾರಿ ಭೂಮಿ ಭದ್ರತೆ ತಳಹಂತದಿಂದಲೇ  ಭದ್ರಪಡಿಸಬೇಕು ಎನ್ನುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದರು.

ಯಾವ ಸರ್ವೇ ನಂಬರ್‍ ಒತ್ತುವರಿಯಾಗಿದೆ ಎಂದು ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲಿಸಿ, ಜಿಪಿಎಸ್‍ ಮುಖಾಂತರ ವರದಿ ನೀಡಲಿದ್ದಾರೆ. ಕೆರೆ, ಸ್ಮಶಾನ ಇತರೆ ಸರ್ಕಾರಿ ಭೂಮಿಯ ಬಳಿ ಸುತ್ತಾಡುವ ಮೂಲಕ ಒತ್ತುವರಿಯನ್ನು ಗುರುತಿಸಬಹುದಾಗಿದೆ. ಒತ್ತವರಿ ಗುರುತಿಸಿರುವ ಕುರಿತು ಆನ್ ಲೈನ್ ಮೂಲಕವೇ ಜಿಲ್ಲಾಧಿಕಾರಿಗಳಿಗೆ ಹೋಗಲಿದೆ. ಈ ಮಾಗಹಿತಿ ಆಧಾರದ ಮೇಲೆ ಜಿಲ್ಲಾಧಿಕಾರಿಗಳು ಸರ್ವೇ ಇಲಾಖೆಯಿಂದ ಸ್ಥಳ ನಕ್ಷೆ ತಯಾರಿಸಿ ಒತ್ತುವರಿ ತೆರವು ಮಾಡಿಸಲಿದ್ದಾರೆ. ಪ್ರತಿ ಮೂರು ತಿಂಗಳಿಗೊಮ್ಮೆ ಈ ಪ್ರಕ್ರಿಯೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು.

ಆರ್‍.ಟಿ.ಸಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಅಭಿಯಾನ

ಆರ್‍.ಟಿ.ಸಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ದೃಢೀಕರಣ ನೀಡುವ ಅಭಿಯಾನ ಸಹ ಚಾಲನೆಯಲ್ಲಿದ್ದು, ಈ ಮೂಲಕ ಕೃಷಿ ಆಸ್ತಿಗಳಿಗೆ ಭದ್ರತೆ ನೀಡಲಾಗುತ್ತಿದೆ. ಇದರಿಂದ ಜಮೀನುಗಳ ದಾಖಲೆಗಳಲ್ಲಿ ಆಗಬಹುದಾದ  ವಂಚನೆಗಳನ್ನು ತಡೆಗಟ್ಟಬಹುದಾಗಿದೆ. ರಾಜ್ಯದಲ್ಲಿನ 4ಕೋಟಿ 30 ಲಕ್ಷ ಕೃಷಿ ಆಸ್ತಿಗಳ ಮಾಲೀಕತ್ವಕ್ಕೆ 1ಕೋಟಿ 40 ಲಕ್ಷ ಆಸ್ತಿಗಳ  ಆರ್‍.ಟಿ.ಸಿಗೆ ಆಧಾರ್‍ ಸಂಖ್ಯೆಯನ್ನು ದೃಢೀಕರಿಸಿ ಜೋಡಣೆ ಮಾಡಲಾಗಿದೆ. ಈ ವ್ಯವಸ್ಥೆಯಿಂದ ಜನರು ಕಚೇರಿಗಳಿಗೆ ಅಲೆಯುವುದು ತಪ್ಪುತ್ತದೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಜಿಲ್ಲಾಧಿಕಾರಿ ಎನ್.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ಎಂ.ಶ್ರೀನಿವಾಸ್, ತಹಶೀಲ್ದಾರ್ ವಿಭಾವಿದ್ಯಾರಾಥೋಡ್, ಶಾಸಕ ಧೀರಜ್ ಮುನಿರಾಜ್, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಭೂಮಿ ಉಸ್ತುವಾರಿ ಯೋಜನಾ ವ್ಯವಸ್ಥಾಪಕ ಸುರೇಶ್ ನಾಯರ್, ತಹಶೀಲ್ದಾರ್ ವಿಶ್ವೇಶ್ವರರೆಡ್ಡಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ ಇದ್ದರು.

Ramesh Babu

Journalist

Recent Posts

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

46 minutes ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

15 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

15 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

16 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

17 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

20 hours ago