ಸರ್ಕಾರಿ ಭೂಮಿ ಸರ್ಕಾರಕ್ಕೆ ಹೊರತು- ಭೂಗಳ್ಳರಿಗಲ್ಲ- ರೈತ ಅಂಬರೀಶ್

ದೊಡ್ಡಬಳ್ಳಾಪುರ: ತಹಶೀಲ್ದಾರ್ ನೀಡಿದ ವರದಿಯ ಆಧಾರದ ಮೇಲೆ ವಿಚಾರಣೆ ನಡೆಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಾಲ್ಲೂಕಿನ  ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಆಹಾರ ಧಾನ್ಯ ಉತ್ಪಾದನೆ ಸಲುವಾಗಿ ರೈತರಿಗೆ ಜಿಎಂಎಫ್ ಯೋಜನೆಯಡಿ ಹಂಗಾಮಿಯಾಗಿ ಸಾಗುವಳಿ ಚೀಟಿ ನೀಡಲಾಗಿದ್ದ ಸುಮಾರು 38 ಎಕರೆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಜೂನ್ 18 ರಂದು ಆದೇಶ ಮಾಡಿದ್ದಾರೆ.

ಜಿಎಂಎಫ್ ಯೋಜನೆಯಲ್ಲಿ ರೈತರಿಗೆ ಸರ್ಕಾರದಿಂದ ಮಂಜೂರಾಗಿರುವ ಜಮೀನುಗಳು ಕಾನೂನಾತ್ಮಕವಾಗಿ ವಹಿವಾಟು ಆಗದೇ ಇರುವುದರಿಂದ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವುದು ಅವಶ್ಯಕವಾಗಿದೆ. ಹಾಗಾಗಿ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ಪಡೆಯಲು ದೊಡ್ಡಬಳ್ಳಾಪುರ ತಹಶೀಲ್ದಾರ್ ಅವರಿಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ ಎಂದು ರೈತ ಅಂಬರೀಶ್ ತಿಳಿಸಿದ್ದಾರೆ.

ಸರ್ಕಾರದ ವಶಕ್ಕೆ ಪಡೆಯಲಾಗುತ್ತಿರುವ ಈ ಜಮೀನು ಈಗಿನ ಮಾರುಕಟ್ಟೆ ಬೆಲೆಯಲ್ಲಿ ಸುಮಾರು ₹150 ಕೋಟಿ ಬೆಲೆ ಬಾಳಬಹುದು ಎಂದು ಅಂದಾಜಿಸಲಾಗಿದೆ. ಹುಲಿಕುಂಟೆ ಸಮೀಪ ಸರ್ಕಾರ ವಶಕ್ಕೆ ಪಡೆಯುತ್ತಿರುವ ಈ ಜಮೀನಿನ ಸುತ್ತಲು ಈಗಾಗಲೇ ಕೆಎಐಡಿಬಿ ಕ್ವಿನ್ ಸಿಟಿ ಹಾಗೂ ಹೈಟೆಕ್ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗಾಗಿ ಸುಮಾರು 2 ಸಾವಿರ ಎಕರೆ ಭೂಸ್ವಾಧೀನ ಮಾಡಿಕೊಂಡಿದೆ. ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ಕ್ಕೆ ಸಂಬಂಧಿಸಿದಂತೆ ನಡೆದಿರಬಹುದಾದ ಅಕ್ರಮ ವಹಿವಾಟಿನ ಕುರಿತು ತನಿಖೆ ನಡೆಸಿ 15 ದಿನಗಳ ಒಳಗೆ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರು ಜನರ ಸಮಿತಿ ರಚಿಸಿ ಜೂನ್ 13 ರಂದು ಕಂದಾಯ ಇಲಾಖೆಯ(ವಿಶೇಷ ಕೋಶ) ಅಧೀನ ಕಾರ್ಯದರ್ಶಿ ಕೆ.ಎಸ್.ಶೈಲಶ್ರೀ ಅವರು ಸಹ ಆದೇಶ ಹೊರಡಿಸಿದ್ದಾರೆ ಎಂದರು.

ಇನ್ನು ತಾಲೂಕಿನಲ್ಲಿ ಇಂತಹ ಸರ್ಕಾರಿ ಜಾಗಗಳನ್ನು ಭೂಗಳ್ಳರು ಕಬಳಿಸಿದ್ದಾರೆ. ಅವುಗಳನ್ನು ಕೂಡಲೇ ಪತ್ತೆಹಚ್ಚಿ ಸರ್ಕಾರ ವಶಕ್ಕೆ ಪಡೆಯಬೇಕು. ರಿಯಲ್ ಎಸ್ಟೇಟ್ ದಂಧೆಗೆ ಕಡಿವಾಣ ಹಾಕಬೇಕು. ಸರ್ಕಾರಿ ಉದ್ದೇಶಕ್ಕೋಸ್ಕರ ಸರ್ಕಾರಿ ಜಾಗವನ್ನು ಉಪಯೋಗಿಸಬೇಕು ಎಂದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

8 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

12 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

12 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

20 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago