ದೊಡ್ಡಬಳ್ಳಾಪುರ: ತಹಶೀಲ್ದಾರ್ ನೀಡಿದ ವರದಿಯ ಆಧಾರದ ಮೇಲೆ ವಿಚಾರಣೆ ನಡೆಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಆಹಾರ ಧಾನ್ಯ ಉತ್ಪಾದನೆ ಸಲುವಾಗಿ ರೈತರಿಗೆ ಜಿಎಂಎಫ್ ಯೋಜನೆಯಡಿ ಹಂಗಾಮಿಯಾಗಿ ಸಾಗುವಳಿ ಚೀಟಿ ನೀಡಲಾಗಿದ್ದ ಸುಮಾರು 38 ಎಕರೆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಜೂನ್ 18 ರಂದು ಆದೇಶ ಮಾಡಿದ್ದಾರೆ.
ಜಿಎಂಎಫ್ ಯೋಜನೆಯಲ್ಲಿ ರೈತರಿಗೆ ಸರ್ಕಾರದಿಂದ ಮಂಜೂರಾಗಿರುವ ಜಮೀನುಗಳು ಕಾನೂನಾತ್ಮಕವಾಗಿ ವಹಿವಾಟು ಆಗದೇ ಇರುವುದರಿಂದ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವುದು ಅವಶ್ಯಕವಾಗಿದೆ. ಹಾಗಾಗಿ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ಪಡೆಯಲು ದೊಡ್ಡಬಳ್ಳಾಪುರ ತಹಶೀಲ್ದಾರ್ ಅವರಿಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ ಎಂದು ರೈತ ಅಂಬರೀಶ್ ತಿಳಿಸಿದ್ದಾರೆ.
ಸರ್ಕಾರದ ವಶಕ್ಕೆ ಪಡೆಯಲಾಗುತ್ತಿರುವ ಈ ಜಮೀನು ಈಗಿನ ಮಾರುಕಟ್ಟೆ ಬೆಲೆಯಲ್ಲಿ ಸುಮಾರು ₹150 ಕೋಟಿ ಬೆಲೆ ಬಾಳಬಹುದು ಎಂದು ಅಂದಾಜಿಸಲಾಗಿದೆ. ಹುಲಿಕುಂಟೆ ಸಮೀಪ ಸರ್ಕಾರ ವಶಕ್ಕೆ ಪಡೆಯುತ್ತಿರುವ ಈ ಜಮೀನಿನ ಸುತ್ತಲು ಈಗಾಗಲೇ ಕೆಎಐಡಿಬಿ ಕ್ವಿನ್ ಸಿಟಿ ಹಾಗೂ ಹೈಟೆಕ್ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗಾಗಿ ಸುಮಾರು 2 ಸಾವಿರ ಎಕರೆ ಭೂಸ್ವಾಧೀನ ಮಾಡಿಕೊಂಡಿದೆ. ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ಕ್ಕೆ ಸಂಬಂಧಿಸಿದಂತೆ ನಡೆದಿರಬಹುದಾದ ಅಕ್ರಮ ವಹಿವಾಟಿನ ಕುರಿತು ತನಿಖೆ ನಡೆಸಿ 15 ದಿನಗಳ ಒಳಗೆ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರು ಜನರ ಸಮಿತಿ ರಚಿಸಿ ಜೂನ್ 13 ರಂದು ಕಂದಾಯ ಇಲಾಖೆಯ(ವಿಶೇಷ ಕೋಶ) ಅಧೀನ ಕಾರ್ಯದರ್ಶಿ ಕೆ.ಎಸ್.ಶೈಲಶ್ರೀ ಅವರು ಸಹ ಆದೇಶ ಹೊರಡಿಸಿದ್ದಾರೆ ಎಂದರು.
ಇನ್ನು ತಾಲೂಕಿನಲ್ಲಿ ಇಂತಹ ಸರ್ಕಾರಿ ಜಾಗಗಳನ್ನು ಭೂಗಳ್ಳರು ಕಬಳಿಸಿದ್ದಾರೆ. ಅವುಗಳನ್ನು ಕೂಡಲೇ ಪತ್ತೆಹಚ್ಚಿ ಸರ್ಕಾರ ವಶಕ್ಕೆ ಪಡೆಯಬೇಕು. ರಿಯಲ್ ಎಸ್ಟೇಟ್ ದಂಧೆಗೆ ಕಡಿವಾಣ ಹಾಕಬೇಕು. ಸರ್ಕಾರಿ ಉದ್ದೇಶಕ್ಕೋಸ್ಕರ ಸರ್ಕಾರಿ ಜಾಗವನ್ನು ಉಪಯೋಗಿಸಬೇಕು ಎಂದರು.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…