ದೊಡ್ಡಬಳ್ಳಾಪುರ: ತಹಶೀಲ್ದಾರ್ ನೀಡಿದ ವರದಿಯ ಆಧಾರದ ಮೇಲೆ ವಿಚಾರಣೆ ನಡೆಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಆಹಾರ ಧಾನ್ಯ ಉತ್ಪಾದನೆ ಸಲುವಾಗಿ ರೈತರಿಗೆ ಜಿಎಂಎಫ್ ಯೋಜನೆಯಡಿ ಹಂಗಾಮಿಯಾಗಿ ಸಾಗುವಳಿ ಚೀಟಿ ನೀಡಲಾಗಿದ್ದ ಸುಮಾರು 38 ಎಕರೆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಜೂನ್ 18 ರಂದು ಆದೇಶ ಮಾಡಿದ್ದಾರೆ.
ಜಿಎಂಎಫ್ ಯೋಜನೆಯಲ್ಲಿ ರೈತರಿಗೆ ಸರ್ಕಾರದಿಂದ ಮಂಜೂರಾಗಿರುವ ಜಮೀನುಗಳು ಕಾನೂನಾತ್ಮಕವಾಗಿ ವಹಿವಾಟು ಆಗದೇ ಇರುವುದರಿಂದ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವುದು ಅವಶ್ಯಕವಾಗಿದೆ. ಹಾಗಾಗಿ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ಪಡೆಯಲು ದೊಡ್ಡಬಳ್ಳಾಪುರ ತಹಶೀಲ್ದಾರ್ ಅವರಿಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ ಎಂದು ರೈತ ಅಂಬರೀಶ್ ತಿಳಿಸಿದ್ದಾರೆ.
ಸರ್ಕಾರದ ವಶಕ್ಕೆ ಪಡೆಯಲಾಗುತ್ತಿರುವ ಈ ಜಮೀನು ಈಗಿನ ಮಾರುಕಟ್ಟೆ ಬೆಲೆಯಲ್ಲಿ ಸುಮಾರು ₹150 ಕೋಟಿ ಬೆಲೆ ಬಾಳಬಹುದು ಎಂದು ಅಂದಾಜಿಸಲಾಗಿದೆ. ಹುಲಿಕುಂಟೆ ಸಮೀಪ ಸರ್ಕಾರ ವಶಕ್ಕೆ ಪಡೆಯುತ್ತಿರುವ ಈ ಜಮೀನಿನ ಸುತ್ತಲು ಈಗಾಗಲೇ ಕೆಎಐಡಿಬಿ ಕ್ವಿನ್ ಸಿಟಿ ಹಾಗೂ ಹೈಟೆಕ್ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗಾಗಿ ಸುಮಾರು 2 ಸಾವಿರ ಎಕರೆ ಭೂಸ್ವಾಧೀನ ಮಾಡಿಕೊಂಡಿದೆ. ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ಕ್ಕೆ ಸಂಬಂಧಿಸಿದಂತೆ ನಡೆದಿರಬಹುದಾದ ಅಕ್ರಮ ವಹಿವಾಟಿನ ಕುರಿತು ತನಿಖೆ ನಡೆಸಿ 15 ದಿನಗಳ ಒಳಗೆ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರು ಜನರ ಸಮಿತಿ ರಚಿಸಿ ಜೂನ್ 13 ರಂದು ಕಂದಾಯ ಇಲಾಖೆಯ(ವಿಶೇಷ ಕೋಶ) ಅಧೀನ ಕಾರ್ಯದರ್ಶಿ ಕೆ.ಎಸ್.ಶೈಲಶ್ರೀ ಅವರು ಸಹ ಆದೇಶ ಹೊರಡಿಸಿದ್ದಾರೆ ಎಂದರು.
ಇನ್ನು ತಾಲೂಕಿನಲ್ಲಿ ಇಂತಹ ಸರ್ಕಾರಿ ಜಾಗಗಳನ್ನು ಭೂಗಳ್ಳರು ಕಬಳಿಸಿದ್ದಾರೆ. ಅವುಗಳನ್ನು ಕೂಡಲೇ ಪತ್ತೆಹಚ್ಚಿ ಸರ್ಕಾರ ವಶಕ್ಕೆ ಪಡೆಯಬೇಕು. ರಿಯಲ್ ಎಸ್ಟೇಟ್ ದಂಧೆಗೆ ಕಡಿವಾಣ ಹಾಕಬೇಕು. ಸರ್ಕಾರಿ ಉದ್ದೇಶಕ್ಕೋಸ್ಕರ ಸರ್ಕಾರಿ ಜಾಗವನ್ನು ಉಪಯೋಗಿಸಬೇಕು ಎಂದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…