ಸರ್ಕಾರಿ ಭೂಮಿ ಸರ್ಕಾರಕ್ಕೆ ಹೊರತು- ಭೂಗಳ್ಳರಿಗಲ್ಲ- ರೈತ ಅಂಬರೀಶ್

ದೊಡ್ಡಬಳ್ಳಾಪುರ: ತಹಶೀಲ್ದಾರ್ ನೀಡಿದ ವರದಿಯ ಆಧಾರದ ಮೇಲೆ ವಿಚಾರಣೆ ನಡೆಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಾಲ್ಲೂಕಿನ  ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಆಹಾರ ಧಾನ್ಯ ಉತ್ಪಾದನೆ ಸಲುವಾಗಿ ರೈತರಿಗೆ ಜಿಎಂಎಫ್ ಯೋಜನೆಯಡಿ ಹಂಗಾಮಿಯಾಗಿ ಸಾಗುವಳಿ ಚೀಟಿ ನೀಡಲಾಗಿದ್ದ ಸುಮಾರು 38 ಎಕರೆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಜೂನ್ 18 ರಂದು ಆದೇಶ ಮಾಡಿದ್ದಾರೆ.

ಜಿಎಂಎಫ್ ಯೋಜನೆಯಲ್ಲಿ ರೈತರಿಗೆ ಸರ್ಕಾರದಿಂದ ಮಂಜೂರಾಗಿರುವ ಜಮೀನುಗಳು ಕಾನೂನಾತ್ಮಕವಾಗಿ ವಹಿವಾಟು ಆಗದೇ ಇರುವುದರಿಂದ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವುದು ಅವಶ್ಯಕವಾಗಿದೆ. ಹಾಗಾಗಿ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ಪಡೆಯಲು ದೊಡ್ಡಬಳ್ಳಾಪುರ ತಹಶೀಲ್ದಾರ್ ಅವರಿಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ ಎಂದು ರೈತ ಅಂಬರೀಶ್ ತಿಳಿಸಿದ್ದಾರೆ.

ಸರ್ಕಾರದ ವಶಕ್ಕೆ ಪಡೆಯಲಾಗುತ್ತಿರುವ ಈ ಜಮೀನು ಈಗಿನ ಮಾರುಕಟ್ಟೆ ಬೆಲೆಯಲ್ಲಿ ಸುಮಾರು ₹150 ಕೋಟಿ ಬೆಲೆ ಬಾಳಬಹುದು ಎಂದು ಅಂದಾಜಿಸಲಾಗಿದೆ. ಹುಲಿಕುಂಟೆ ಸಮೀಪ ಸರ್ಕಾರ ವಶಕ್ಕೆ ಪಡೆಯುತ್ತಿರುವ ಈ ಜಮೀನಿನ ಸುತ್ತಲು ಈಗಾಗಲೇ ಕೆಎಐಡಿಬಿ ಕ್ವಿನ್ ಸಿಟಿ ಹಾಗೂ ಹೈಟೆಕ್ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗಾಗಿ ಸುಮಾರು 2 ಸಾವಿರ ಎಕರೆ ಭೂಸ್ವಾಧೀನ ಮಾಡಿಕೊಂಡಿದೆ. ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ಕ್ಕೆ ಸಂಬಂಧಿಸಿದಂತೆ ನಡೆದಿರಬಹುದಾದ ಅಕ್ರಮ ವಹಿವಾಟಿನ ಕುರಿತು ತನಿಖೆ ನಡೆಸಿ 15 ದಿನಗಳ ಒಳಗೆ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರು ಜನರ ಸಮಿತಿ ರಚಿಸಿ ಜೂನ್ 13 ರಂದು ಕಂದಾಯ ಇಲಾಖೆಯ(ವಿಶೇಷ ಕೋಶ) ಅಧೀನ ಕಾರ್ಯದರ್ಶಿ ಕೆ.ಎಸ್.ಶೈಲಶ್ರೀ ಅವರು ಸಹ ಆದೇಶ ಹೊರಡಿಸಿದ್ದಾರೆ ಎಂದರು.

ಇನ್ನು ತಾಲೂಕಿನಲ್ಲಿ ಇಂತಹ ಸರ್ಕಾರಿ ಜಾಗಗಳನ್ನು ಭೂಗಳ್ಳರು ಕಬಳಿಸಿದ್ದಾರೆ. ಅವುಗಳನ್ನು ಕೂಡಲೇ ಪತ್ತೆಹಚ್ಚಿ ಸರ್ಕಾರ ವಶಕ್ಕೆ ಪಡೆಯಬೇಕು. ರಿಯಲ್ ಎಸ್ಟೇಟ್ ದಂಧೆಗೆ ಕಡಿವಾಣ ಹಾಕಬೇಕು. ಸರ್ಕಾರಿ ಉದ್ದೇಶಕ್ಕೋಸ್ಕರ ಸರ್ಕಾರಿ ಜಾಗವನ್ನು ಉಪಯೋಗಿಸಬೇಕು ಎಂದರು.

Ramesh Babu

Journalist

Recent Posts

ಮೇ 20 ಇ-ಫಾರ್ಮಸಿ ವಿರೋಧಿ ಬಂದ್‌ಗೆ ಔಷಧ ವ್ಯಾಪಾರಿಗಳ ಬೆಂಬಲ

ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…

7 hours ago

ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…

8 hours ago

ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…

13 hours ago

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

14 hours ago

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

1 day ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

1 day ago