ದೊಡ್ಡಬಳ್ಳಾಪುರ: ತಹಶೀಲ್ದಾರ್ ನೀಡಿದ ವರದಿಯ ಆಧಾರದ ಮೇಲೆ ವಿಚಾರಣೆ ನಡೆಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಆಹಾರ ಧಾನ್ಯ ಉತ್ಪಾದನೆ ಸಲುವಾಗಿ ರೈತರಿಗೆ ಜಿಎಂಎಫ್ ಯೋಜನೆಯಡಿ ಹಂಗಾಮಿಯಾಗಿ ಸಾಗುವಳಿ ಚೀಟಿ ನೀಡಲಾಗಿದ್ದ ಸುಮಾರು 38 ಎಕರೆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಜೂನ್ 18 ರಂದು ಆದೇಶ ಮಾಡಿದ್ದಾರೆ.
ಜಿಎಂಎಫ್ ಯೋಜನೆಯಲ್ಲಿ ರೈತರಿಗೆ ಸರ್ಕಾರದಿಂದ ಮಂಜೂರಾಗಿರುವ ಜಮೀನುಗಳು ಕಾನೂನಾತ್ಮಕವಾಗಿ ವಹಿವಾಟು ಆಗದೇ ಇರುವುದರಿಂದ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವುದು ಅವಶ್ಯಕವಾಗಿದೆ. ಹಾಗಾಗಿ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ಪಡೆಯಲು ದೊಡ್ಡಬಳ್ಳಾಪುರ ತಹಶೀಲ್ದಾರ್ ಅವರಿಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ ಎಂದು ರೈತ ಅಂಬರೀಶ್ ತಿಳಿಸಿದ್ದಾರೆ.
ಸರ್ಕಾರದ ವಶಕ್ಕೆ ಪಡೆಯಲಾಗುತ್ತಿರುವ ಈ ಜಮೀನು ಈಗಿನ ಮಾರುಕಟ್ಟೆ ಬೆಲೆಯಲ್ಲಿ ಸುಮಾರು ₹150 ಕೋಟಿ ಬೆಲೆ ಬಾಳಬಹುದು ಎಂದು ಅಂದಾಜಿಸಲಾಗಿದೆ. ಹುಲಿಕುಂಟೆ ಸಮೀಪ ಸರ್ಕಾರ ವಶಕ್ಕೆ ಪಡೆಯುತ್ತಿರುವ ಈ ಜಮೀನಿನ ಸುತ್ತಲು ಈಗಾಗಲೇ ಕೆಎಐಡಿಬಿ ಕ್ವಿನ್ ಸಿಟಿ ಹಾಗೂ ಹೈಟೆಕ್ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗಾಗಿ ಸುಮಾರು 2 ಸಾವಿರ ಎಕರೆ ಭೂಸ್ವಾಧೀನ ಮಾಡಿಕೊಂಡಿದೆ. ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ಕ್ಕೆ ಸಂಬಂಧಿಸಿದಂತೆ ನಡೆದಿರಬಹುದಾದ ಅಕ್ರಮ ವಹಿವಾಟಿನ ಕುರಿತು ತನಿಖೆ ನಡೆಸಿ 15 ದಿನಗಳ ಒಳಗೆ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರು ಜನರ ಸಮಿತಿ ರಚಿಸಿ ಜೂನ್ 13 ರಂದು ಕಂದಾಯ ಇಲಾಖೆಯ(ವಿಶೇಷ ಕೋಶ) ಅಧೀನ ಕಾರ್ಯದರ್ಶಿ ಕೆ.ಎಸ್.ಶೈಲಶ್ರೀ ಅವರು ಸಹ ಆದೇಶ ಹೊರಡಿಸಿದ್ದಾರೆ ಎಂದರು.
ಇನ್ನು ತಾಲೂಕಿನಲ್ಲಿ ಇಂತಹ ಸರ್ಕಾರಿ ಜಾಗಗಳನ್ನು ಭೂಗಳ್ಳರು ಕಬಳಿಸಿದ್ದಾರೆ. ಅವುಗಳನ್ನು ಕೂಡಲೇ ಪತ್ತೆಹಚ್ಚಿ ಸರ್ಕಾರ ವಶಕ್ಕೆ ಪಡೆಯಬೇಕು. ರಿಯಲ್ ಎಸ್ಟೇಟ್ ದಂಧೆಗೆ ಕಡಿವಾಣ ಹಾಕಬೇಕು. ಸರ್ಕಾರಿ ಉದ್ದೇಶಕ್ಕೋಸ್ಕರ ಸರ್ಕಾರಿ ಜಾಗವನ್ನು ಉಪಯೋಗಿಸಬೇಕು ಎಂದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…