ಸರ್ಕಾರಿ ಭೂಮಿ ಸರ್ಕಾರಕ್ಕೆ ಹೊರತು- ಭೂಗಳ್ಳರಿಗಲ್ಲ- ರೈತ ಅಂಬರೀಶ್

ದೊಡ್ಡಬಳ್ಳಾಪುರ: ತಹಶೀಲ್ದಾರ್ ನೀಡಿದ ವರದಿಯ ಆಧಾರದ ಮೇಲೆ ವಿಚಾರಣೆ ನಡೆಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಾಲ್ಲೂಕಿನ  ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಆಹಾರ ಧಾನ್ಯ ಉತ್ಪಾದನೆ ಸಲುವಾಗಿ ರೈತರಿಗೆ ಜಿಎಂಎಫ್ ಯೋಜನೆಯಡಿ ಹಂಗಾಮಿಯಾಗಿ ಸಾಗುವಳಿ ಚೀಟಿ ನೀಡಲಾಗಿದ್ದ ಸುಮಾರು 38 ಎಕರೆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಜೂನ್ 18 ರಂದು ಆದೇಶ ಮಾಡಿದ್ದಾರೆ.

ಜಿಎಂಎಫ್ ಯೋಜನೆಯಲ್ಲಿ ರೈತರಿಗೆ ಸರ್ಕಾರದಿಂದ ಮಂಜೂರಾಗಿರುವ ಜಮೀನುಗಳು ಕಾನೂನಾತ್ಮಕವಾಗಿ ವಹಿವಾಟು ಆಗದೇ ಇರುವುದರಿಂದ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವುದು ಅವಶ್ಯಕವಾಗಿದೆ. ಹಾಗಾಗಿ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ಪಡೆಯಲು ದೊಡ್ಡಬಳ್ಳಾಪುರ ತಹಶೀಲ್ದಾರ್ ಅವರಿಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ ಎಂದು ರೈತ ಅಂಬರೀಶ್ ತಿಳಿಸಿದ್ದಾರೆ.

ಸರ್ಕಾರದ ವಶಕ್ಕೆ ಪಡೆಯಲಾಗುತ್ತಿರುವ ಈ ಜಮೀನು ಈಗಿನ ಮಾರುಕಟ್ಟೆ ಬೆಲೆಯಲ್ಲಿ ಸುಮಾರು ₹150 ಕೋಟಿ ಬೆಲೆ ಬಾಳಬಹುದು ಎಂದು ಅಂದಾಜಿಸಲಾಗಿದೆ. ಹುಲಿಕುಂಟೆ ಸಮೀಪ ಸರ್ಕಾರ ವಶಕ್ಕೆ ಪಡೆಯುತ್ತಿರುವ ಈ ಜಮೀನಿನ ಸುತ್ತಲು ಈಗಾಗಲೇ ಕೆಎಐಡಿಬಿ ಕ್ವಿನ್ ಸಿಟಿ ಹಾಗೂ ಹೈಟೆಕ್ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗಾಗಿ ಸುಮಾರು 2 ಸಾವಿರ ಎಕರೆ ಭೂಸ್ವಾಧೀನ ಮಾಡಿಕೊಂಡಿದೆ. ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ಕ್ಕೆ ಸಂಬಂಧಿಸಿದಂತೆ ನಡೆದಿರಬಹುದಾದ ಅಕ್ರಮ ವಹಿವಾಟಿನ ಕುರಿತು ತನಿಖೆ ನಡೆಸಿ 15 ದಿನಗಳ ಒಳಗೆ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರು ಜನರ ಸಮಿತಿ ರಚಿಸಿ ಜೂನ್ 13 ರಂದು ಕಂದಾಯ ಇಲಾಖೆಯ(ವಿಶೇಷ ಕೋಶ) ಅಧೀನ ಕಾರ್ಯದರ್ಶಿ ಕೆ.ಎಸ್.ಶೈಲಶ್ರೀ ಅವರು ಸಹ ಆದೇಶ ಹೊರಡಿಸಿದ್ದಾರೆ ಎಂದರು.

ಇನ್ನು ತಾಲೂಕಿನಲ್ಲಿ ಇಂತಹ ಸರ್ಕಾರಿ ಜಾಗಗಳನ್ನು ಭೂಗಳ್ಳರು ಕಬಳಿಸಿದ್ದಾರೆ. ಅವುಗಳನ್ನು ಕೂಡಲೇ ಪತ್ತೆಹಚ್ಚಿ ಸರ್ಕಾರ ವಶಕ್ಕೆ ಪಡೆಯಬೇಕು. ರಿಯಲ್ ಎಸ್ಟೇಟ್ ದಂಧೆಗೆ ಕಡಿವಾಣ ಹಾಕಬೇಕು. ಸರ್ಕಾರಿ ಉದ್ದೇಶಕ್ಕೋಸ್ಕರ ಸರ್ಕಾರಿ ಜಾಗವನ್ನು ಉಪಯೋಗಿಸಬೇಕು ಎಂದರು.

Ramesh Babu

Journalist

Recent Posts

The Ultimate Overview to Free Online Live Roulette Game

Are you a fan of gambling enterprise video games? Do you appreciate the excitement of…

8 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

18 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

21 hours ago

Instant Play Casino

Instant play casinos allow you to play casino games online without installing any software. These…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

2 days ago