ಸರ್ಕಾರಿ ಶಾಲಾ ಶಿಕ್ಷಕಿ ನೇಣಿಗೆ ಶರಣು: ನಗರದ ಸೋಮೇಶ್ವರ ಬಡಾವಣೆಯಲ್ಲಿ ಘಟನೆ

ಸರ್ಕಾರಿ ಶಾಲೆ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ.

ತುರುವನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಟಿ.ಜ್ಯೋತಿ ಆತ್ಮಹತ್ಯೆ‌ ಮಾಡಿಕೊಂಡ ದುರ್ದೈವಿ.

ಮಕ್ಕಳಿಲ್ಲದ ಕೊರಗು ಹಾಗೂ ವರ್ಗಾವಣೆ ಮಾಡದ ಹಿನ್ನೆಲೆಯಲ್ಲಿ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಮೂಲತಃ ಚಿತ್ರದುರ್ಗ ತಾಲೂಕಿ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಕೆ.ಯು. ವಿರೂಪಾಕ್ಷ ಹಾಗೂ ಹೊಳಲ್ಕೆರೆ ತಾಲೂಕಿನ ನಲ್ಲಿಕಟ್ಟೆ ಗ್ರಾಮದ ಎನ್.ಟಿ.ಜ್ಯೋತಿ ಅವರನ್ನು 13 ವರ್ಷದ ಹಿಂದೆ‌ ವಿವಾಹವಾಗಿದ್ದರು.

ಕಳೆದ 12 ವರ್ಷಗಳಿಂದ‌ ದೊಡ್ಡಬಳ್ಳಾಪುರ ತಾಲೂಕಿನ‌ ಬನವತಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಿದ್ದ ಜ್ಯೋತಿ ಅವರು 9 ತಿಂಗಳ ಹಿಂದೆ ತುರುವನಹಳ್ಳಿ ಸರ್ಕಾರಿ ಶಾಲೆಗೆ ವರ್ಗಾವಣೆಯಾಗಿ ಬಂದಿದ್ದರು.

ಅಂದಿನಿಂದ ಸೋಮೇಶ್ವರ ಬಡಾವಣೆಯಲ್ಲಿ ಮನೆ ಮಾಡಿಕೊಂಡು ವಾಸವಿದ್ದರು. ಪ್ರೌಢಶಾಲೆಗೆ ವರ್ಗಾವಣೆ ಮಾಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಎಲ್ಲಿಯೂ ಖಾಲಿ ಜಾಗ ಇರದ ಕಾರಣ ವರ್ಗಾವಣೆ ಆಗಿರಲಿಲ್ಲ. ಈ ವಿಚಾರದಲ್ಲಿ ಮನನೊಂದಿದ್ದರು ಎನ್ನಲಾಗಿದೆ.

ಜು.14ರಂದು ಬೆಳಿಗ್ಗೆ ಕೆಲಸದ ನಿಮಿತ್ತ ಯಲಹಂಕದ ದೊಡ್ಡಬೆಟ್ಟಹಳ್ಳಿಗೆ ಹೋಗಿದ್ದಾಗ ಮನೆಯಲ್ಲಿ ನನ್ನ ಪತ್ನಿ ಒಬ್ಬರೇ ಇದ್ದರು. ಶುಕ್ರವಾರ ರಾತ್ರಿ 8.30 ಗಂಟೆಯಲ್ಲಿ ಮನೆಗೆ ವಾಪಸ್ ಬಂದು ನೋಡಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಬೇಜಾರಿನಲ್ಲಿ ಮಲಗಿರಬಹುದು ಎಂದು ತಿಳಿದು ನಾನು ಮನೆಯ ಮೇಲಿನ ಕೊಠಡಿಯಲ್ಲಿ ಮಲಗಿದ್ದೆ ಎಂದು ಪತಿ ಕೆ.ಯು. ವಿರೂಪಾಕ್ಷ ತಿಳಿಸಿದ್ದಾರೆ.

ಇಂದು (ಶನಿವಾರ ) ಬೆಳಿಗ್ಗೆ ಸುಮಾರು 6 ಗಂಟೆಗೆ ಕೆಳಗಿಳಿದು ಬಂದು ಬಾಗಿಲು ತಟ್ಟಿದಾಗ ತೆಗೆಯಲಿಲ್ಲ. ಹೊರಗಿನಿಂದ ಬೆಡ್ ರೂಮಿನ ಕಿಟಕಿ ತೆಗೆದು ನೋಡಿದಾಗ ಸೀರೆಯಿಂದ ನೇಣು ಹಾಕಿಕೊಂಡಿದ್ದರು ಎಂದು ಪತಿ ಕೆ.ಯು.ವಿರೂಪಾಕ್ಷ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ನಗರ ಠಾಣೆ ಪೊಲೀಸರು ಪರಿಶೀಲನೆ‌ ನಡೆಸಿದ್ದಾರೆ.

Ramesh Babu

Journalist

Recent Posts

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

2 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

13 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

13 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

16 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

19 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

21 hours ago