ಸರ್ಕಾರಿ ಶಾಲಾ ಶಿಕ್ಷಕಿ ನೇಣಿಗೆ ಶರಣು: ನಗರದ ಸೋಮೇಶ್ವರ ಬಡಾವಣೆಯಲ್ಲಿ ಘಟನೆ

ಸರ್ಕಾರಿ ಶಾಲೆ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ.

ತುರುವನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಟಿ.ಜ್ಯೋತಿ ಆತ್ಮಹತ್ಯೆ‌ ಮಾಡಿಕೊಂಡ ದುರ್ದೈವಿ.

ಮಕ್ಕಳಿಲ್ಲದ ಕೊರಗು ಹಾಗೂ ವರ್ಗಾವಣೆ ಮಾಡದ ಹಿನ್ನೆಲೆಯಲ್ಲಿ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಮೂಲತಃ ಚಿತ್ರದುರ್ಗ ತಾಲೂಕಿ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಕೆ.ಯು. ವಿರೂಪಾಕ್ಷ ಹಾಗೂ ಹೊಳಲ್ಕೆರೆ ತಾಲೂಕಿನ ನಲ್ಲಿಕಟ್ಟೆ ಗ್ರಾಮದ ಎನ್.ಟಿ.ಜ್ಯೋತಿ ಅವರನ್ನು 13 ವರ್ಷದ ಹಿಂದೆ‌ ವಿವಾಹವಾಗಿದ್ದರು.

ಕಳೆದ 12 ವರ್ಷಗಳಿಂದ‌ ದೊಡ್ಡಬಳ್ಳಾಪುರ ತಾಲೂಕಿನ‌ ಬನವತಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಿದ್ದ ಜ್ಯೋತಿ ಅವರು 9 ತಿಂಗಳ ಹಿಂದೆ ತುರುವನಹಳ್ಳಿ ಸರ್ಕಾರಿ ಶಾಲೆಗೆ ವರ್ಗಾವಣೆಯಾಗಿ ಬಂದಿದ್ದರು.

ಅಂದಿನಿಂದ ಸೋಮೇಶ್ವರ ಬಡಾವಣೆಯಲ್ಲಿ ಮನೆ ಮಾಡಿಕೊಂಡು ವಾಸವಿದ್ದರು. ಪ್ರೌಢಶಾಲೆಗೆ ವರ್ಗಾವಣೆ ಮಾಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಎಲ್ಲಿಯೂ ಖಾಲಿ ಜಾಗ ಇರದ ಕಾರಣ ವರ್ಗಾವಣೆ ಆಗಿರಲಿಲ್ಲ. ಈ ವಿಚಾರದಲ್ಲಿ ಮನನೊಂದಿದ್ದರು ಎನ್ನಲಾಗಿದೆ.

ಜು.14ರಂದು ಬೆಳಿಗ್ಗೆ ಕೆಲಸದ ನಿಮಿತ್ತ ಯಲಹಂಕದ ದೊಡ್ಡಬೆಟ್ಟಹಳ್ಳಿಗೆ ಹೋಗಿದ್ದಾಗ ಮನೆಯಲ್ಲಿ ನನ್ನ ಪತ್ನಿ ಒಬ್ಬರೇ ಇದ್ದರು. ಶುಕ್ರವಾರ ರಾತ್ರಿ 8.30 ಗಂಟೆಯಲ್ಲಿ ಮನೆಗೆ ವಾಪಸ್ ಬಂದು ನೋಡಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಬೇಜಾರಿನಲ್ಲಿ ಮಲಗಿರಬಹುದು ಎಂದು ತಿಳಿದು ನಾನು ಮನೆಯ ಮೇಲಿನ ಕೊಠಡಿಯಲ್ಲಿ ಮಲಗಿದ್ದೆ ಎಂದು ಪತಿ ಕೆ.ಯು. ವಿರೂಪಾಕ್ಷ ತಿಳಿಸಿದ್ದಾರೆ.

ಇಂದು (ಶನಿವಾರ ) ಬೆಳಿಗ್ಗೆ ಸುಮಾರು 6 ಗಂಟೆಗೆ ಕೆಳಗಿಳಿದು ಬಂದು ಬಾಗಿಲು ತಟ್ಟಿದಾಗ ತೆಗೆಯಲಿಲ್ಲ. ಹೊರಗಿನಿಂದ ಬೆಡ್ ರೂಮಿನ ಕಿಟಕಿ ತೆಗೆದು ನೋಡಿದಾಗ ಸೀರೆಯಿಂದ ನೇಣು ಹಾಕಿಕೊಂಡಿದ್ದರು ಎಂದು ಪತಿ ಕೆ.ಯು.ವಿರೂಪಾಕ್ಷ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ನಗರ ಠಾಣೆ ಪೊಲೀಸರು ಪರಿಶೀಲನೆ‌ ನಡೆಸಿದ್ದಾರೆ.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

10 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

1 day ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago