ಸರ್ಕಾರಿ ಶಾಲೆ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ.
ತುರುವನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಟಿ.ಜ್ಯೋತಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಮಕ್ಕಳಿಲ್ಲದ ಕೊರಗು ಹಾಗೂ ವರ್ಗಾವಣೆ ಮಾಡದ ಹಿನ್ನೆಲೆಯಲ್ಲಿ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮೂಲತಃ ಚಿತ್ರದುರ್ಗ ತಾಲೂಕಿ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಕೆ.ಯು. ವಿರೂಪಾಕ್ಷ ಹಾಗೂ ಹೊಳಲ್ಕೆರೆ ತಾಲೂಕಿನ ನಲ್ಲಿಕಟ್ಟೆ ಗ್ರಾಮದ ಎನ್.ಟಿ.ಜ್ಯೋತಿ ಅವರನ್ನು 13 ವರ್ಷದ ಹಿಂದೆ ವಿವಾಹವಾಗಿದ್ದರು.
ಕಳೆದ 12 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಬನವತಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಿದ್ದ ಜ್ಯೋತಿ ಅವರು 9 ತಿಂಗಳ ಹಿಂದೆ ತುರುವನಹಳ್ಳಿ ಸರ್ಕಾರಿ ಶಾಲೆಗೆ ವರ್ಗಾವಣೆಯಾಗಿ ಬಂದಿದ್ದರು.
ಅಂದಿನಿಂದ ಸೋಮೇಶ್ವರ ಬಡಾವಣೆಯಲ್ಲಿ ಮನೆ ಮಾಡಿಕೊಂಡು ವಾಸವಿದ್ದರು. ಪ್ರೌಢಶಾಲೆಗೆ ವರ್ಗಾವಣೆ ಮಾಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಎಲ್ಲಿಯೂ ಖಾಲಿ ಜಾಗ ಇರದ ಕಾರಣ ವರ್ಗಾವಣೆ ಆಗಿರಲಿಲ್ಲ. ಈ ವಿಚಾರದಲ್ಲಿ ಮನನೊಂದಿದ್ದರು ಎನ್ನಲಾಗಿದೆ.
ಜು.14ರಂದು ಬೆಳಿಗ್ಗೆ ಕೆಲಸದ ನಿಮಿತ್ತ ಯಲಹಂಕದ ದೊಡ್ಡಬೆಟ್ಟಹಳ್ಳಿಗೆ ಹೋಗಿದ್ದಾಗ ಮನೆಯಲ್ಲಿ ನನ್ನ ಪತ್ನಿ ಒಬ್ಬರೇ ಇದ್ದರು. ಶುಕ್ರವಾರ ರಾತ್ರಿ 8.30 ಗಂಟೆಯಲ್ಲಿ ಮನೆಗೆ ವಾಪಸ್ ಬಂದು ನೋಡಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಬೇಜಾರಿನಲ್ಲಿ ಮಲಗಿರಬಹುದು ಎಂದು ತಿಳಿದು ನಾನು ಮನೆಯ ಮೇಲಿನ ಕೊಠಡಿಯಲ್ಲಿ ಮಲಗಿದ್ದೆ ಎಂದು ಪತಿ ಕೆ.ಯು. ವಿರೂಪಾಕ್ಷ ತಿಳಿಸಿದ್ದಾರೆ.
ಇಂದು (ಶನಿವಾರ ) ಬೆಳಿಗ್ಗೆ ಸುಮಾರು 6 ಗಂಟೆಗೆ ಕೆಳಗಿಳಿದು ಬಂದು ಬಾಗಿಲು ತಟ್ಟಿದಾಗ ತೆಗೆಯಲಿಲ್ಲ. ಹೊರಗಿನಿಂದ ಬೆಡ್ ರೂಮಿನ ಕಿಟಕಿ ತೆಗೆದು ನೋಡಿದಾಗ ಸೀರೆಯಿಂದ ನೇಣು ಹಾಕಿಕೊಂಡಿದ್ದರು ಎಂದು ಪತಿ ಕೆ.ಯು.ವಿರೂಪಾಕ್ಷ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…