ಸರ್ಕಾರಿ ಶಾಲೆ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ.
ತುರುವನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಟಿ.ಜ್ಯೋತಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಮಕ್ಕಳಿಲ್ಲದ ಕೊರಗು ಹಾಗೂ ವರ್ಗಾವಣೆ ಮಾಡದ ಹಿನ್ನೆಲೆಯಲ್ಲಿ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮೂಲತಃ ಚಿತ್ರದುರ್ಗ ತಾಲೂಕಿ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಕೆ.ಯು. ವಿರೂಪಾಕ್ಷ ಹಾಗೂ ಹೊಳಲ್ಕೆರೆ ತಾಲೂಕಿನ ನಲ್ಲಿಕಟ್ಟೆ ಗ್ರಾಮದ ಎನ್.ಟಿ.ಜ್ಯೋತಿ ಅವರನ್ನು 13 ವರ್ಷದ ಹಿಂದೆ ವಿವಾಹವಾಗಿದ್ದರು.
ಕಳೆದ 12 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಬನವತಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಿದ್ದ ಜ್ಯೋತಿ ಅವರು 9 ತಿಂಗಳ ಹಿಂದೆ ತುರುವನಹಳ್ಳಿ ಸರ್ಕಾರಿ ಶಾಲೆಗೆ ವರ್ಗಾವಣೆಯಾಗಿ ಬಂದಿದ್ದರು.
ಅಂದಿನಿಂದ ಸೋಮೇಶ್ವರ ಬಡಾವಣೆಯಲ್ಲಿ ಮನೆ ಮಾಡಿಕೊಂಡು ವಾಸವಿದ್ದರು. ಪ್ರೌಢಶಾಲೆಗೆ ವರ್ಗಾವಣೆ ಮಾಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಎಲ್ಲಿಯೂ ಖಾಲಿ ಜಾಗ ಇರದ ಕಾರಣ ವರ್ಗಾವಣೆ ಆಗಿರಲಿಲ್ಲ. ಈ ವಿಚಾರದಲ್ಲಿ ಮನನೊಂದಿದ್ದರು ಎನ್ನಲಾಗಿದೆ.
ಜು.14ರಂದು ಬೆಳಿಗ್ಗೆ ಕೆಲಸದ ನಿಮಿತ್ತ ಯಲಹಂಕದ ದೊಡ್ಡಬೆಟ್ಟಹಳ್ಳಿಗೆ ಹೋಗಿದ್ದಾಗ ಮನೆಯಲ್ಲಿ ನನ್ನ ಪತ್ನಿ ಒಬ್ಬರೇ ಇದ್ದರು. ಶುಕ್ರವಾರ ರಾತ್ರಿ 8.30 ಗಂಟೆಯಲ್ಲಿ ಮನೆಗೆ ವಾಪಸ್ ಬಂದು ನೋಡಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಬೇಜಾರಿನಲ್ಲಿ ಮಲಗಿರಬಹುದು ಎಂದು ತಿಳಿದು ನಾನು ಮನೆಯ ಮೇಲಿನ ಕೊಠಡಿಯಲ್ಲಿ ಮಲಗಿದ್ದೆ ಎಂದು ಪತಿ ಕೆ.ಯು. ವಿರೂಪಾಕ್ಷ ತಿಳಿಸಿದ್ದಾರೆ.
ಇಂದು (ಶನಿವಾರ ) ಬೆಳಿಗ್ಗೆ ಸುಮಾರು 6 ಗಂಟೆಗೆ ಕೆಳಗಿಳಿದು ಬಂದು ಬಾಗಿಲು ತಟ್ಟಿದಾಗ ತೆಗೆಯಲಿಲ್ಲ. ಹೊರಗಿನಿಂದ ಬೆಡ್ ರೂಮಿನ ಕಿಟಕಿ ತೆಗೆದು ನೋಡಿದಾಗ ಸೀರೆಯಿಂದ ನೇಣು ಹಾಕಿಕೊಂಡಿದ್ದರು ಎಂದು ಪತಿ ಕೆ.ಯು.ವಿರೂಪಾಕ್ಷ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…