ಸರ್ಕಾರಿ ಶಾಲೆ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ.
ತುರುವನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಟಿ.ಜ್ಯೋತಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಮಕ್ಕಳಿಲ್ಲದ ಕೊರಗು ಹಾಗೂ ವರ್ಗಾವಣೆ ಮಾಡದ ಹಿನ್ನೆಲೆಯಲ್ಲಿ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮೂಲತಃ ಚಿತ್ರದುರ್ಗ ತಾಲೂಕಿ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಕೆ.ಯು. ವಿರೂಪಾಕ್ಷ ಹಾಗೂ ಹೊಳಲ್ಕೆರೆ ತಾಲೂಕಿನ ನಲ್ಲಿಕಟ್ಟೆ ಗ್ರಾಮದ ಎನ್.ಟಿ.ಜ್ಯೋತಿ ಅವರನ್ನು 13 ವರ್ಷದ ಹಿಂದೆ ವಿವಾಹವಾಗಿದ್ದರು.
ಕಳೆದ 12 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಬನವತಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಿದ್ದ ಜ್ಯೋತಿ ಅವರು 9 ತಿಂಗಳ ಹಿಂದೆ ತುರುವನಹಳ್ಳಿ ಸರ್ಕಾರಿ ಶಾಲೆಗೆ ವರ್ಗಾವಣೆಯಾಗಿ ಬಂದಿದ್ದರು.
ಅಂದಿನಿಂದ ಸೋಮೇಶ್ವರ ಬಡಾವಣೆಯಲ್ಲಿ ಮನೆ ಮಾಡಿಕೊಂಡು ವಾಸವಿದ್ದರು. ಪ್ರೌಢಶಾಲೆಗೆ ವರ್ಗಾವಣೆ ಮಾಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಎಲ್ಲಿಯೂ ಖಾಲಿ ಜಾಗ ಇರದ ಕಾರಣ ವರ್ಗಾವಣೆ ಆಗಿರಲಿಲ್ಲ. ಈ ವಿಚಾರದಲ್ಲಿ ಮನನೊಂದಿದ್ದರು ಎನ್ನಲಾಗಿದೆ.
ಜು.14ರಂದು ಬೆಳಿಗ್ಗೆ ಕೆಲಸದ ನಿಮಿತ್ತ ಯಲಹಂಕದ ದೊಡ್ಡಬೆಟ್ಟಹಳ್ಳಿಗೆ ಹೋಗಿದ್ದಾಗ ಮನೆಯಲ್ಲಿ ನನ್ನ ಪತ್ನಿ ಒಬ್ಬರೇ ಇದ್ದರು. ಶುಕ್ರವಾರ ರಾತ್ರಿ 8.30 ಗಂಟೆಯಲ್ಲಿ ಮನೆಗೆ ವಾಪಸ್ ಬಂದು ನೋಡಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಬೇಜಾರಿನಲ್ಲಿ ಮಲಗಿರಬಹುದು ಎಂದು ತಿಳಿದು ನಾನು ಮನೆಯ ಮೇಲಿನ ಕೊಠಡಿಯಲ್ಲಿ ಮಲಗಿದ್ದೆ ಎಂದು ಪತಿ ಕೆ.ಯು. ವಿರೂಪಾಕ್ಷ ತಿಳಿಸಿದ್ದಾರೆ.
ಇಂದು (ಶನಿವಾರ ) ಬೆಳಿಗ್ಗೆ ಸುಮಾರು 6 ಗಂಟೆಗೆ ಕೆಳಗಿಳಿದು ಬಂದು ಬಾಗಿಲು ತಟ್ಟಿದಾಗ ತೆಗೆಯಲಿಲ್ಲ. ಹೊರಗಿನಿಂದ ಬೆಡ್ ರೂಮಿನ ಕಿಟಕಿ ತೆಗೆದು ನೋಡಿದಾಗ ಸೀರೆಯಿಂದ ನೇಣು ಹಾಕಿಕೊಂಡಿದ್ದರು ಎಂದು ಪತಿ ಕೆ.ಯು.ವಿರೂಪಾಕ್ಷ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…