ಸರ್ಕಾರಿ ಶಾಲೆ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ.
ತುರುವನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಟಿ.ಜ್ಯೋತಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಮಕ್ಕಳಿಲ್ಲದ ಕೊರಗು ಹಾಗೂ ವರ್ಗಾವಣೆ ಮಾಡದ ಹಿನ್ನೆಲೆಯಲ್ಲಿ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮೂಲತಃ ಚಿತ್ರದುರ್ಗ ತಾಲೂಕಿ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಕೆ.ಯು. ವಿರೂಪಾಕ್ಷ ಹಾಗೂ ಹೊಳಲ್ಕೆರೆ ತಾಲೂಕಿನ ನಲ್ಲಿಕಟ್ಟೆ ಗ್ರಾಮದ ಎನ್.ಟಿ.ಜ್ಯೋತಿ ಅವರನ್ನು 13 ವರ್ಷದ ಹಿಂದೆ ವಿವಾಹವಾಗಿದ್ದರು.
ಕಳೆದ 12 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಬನವತಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಿದ್ದ ಜ್ಯೋತಿ ಅವರು 9 ತಿಂಗಳ ಹಿಂದೆ ತುರುವನಹಳ್ಳಿ ಸರ್ಕಾರಿ ಶಾಲೆಗೆ ವರ್ಗಾವಣೆಯಾಗಿ ಬಂದಿದ್ದರು.
ಅಂದಿನಿಂದ ಸೋಮೇಶ್ವರ ಬಡಾವಣೆಯಲ್ಲಿ ಮನೆ ಮಾಡಿಕೊಂಡು ವಾಸವಿದ್ದರು. ಪ್ರೌಢಶಾಲೆಗೆ ವರ್ಗಾವಣೆ ಮಾಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಎಲ್ಲಿಯೂ ಖಾಲಿ ಜಾಗ ಇರದ ಕಾರಣ ವರ್ಗಾವಣೆ ಆಗಿರಲಿಲ್ಲ. ಈ ವಿಚಾರದಲ್ಲಿ ಮನನೊಂದಿದ್ದರು ಎನ್ನಲಾಗಿದೆ.
ಜು.14ರಂದು ಬೆಳಿಗ್ಗೆ ಕೆಲಸದ ನಿಮಿತ್ತ ಯಲಹಂಕದ ದೊಡ್ಡಬೆಟ್ಟಹಳ್ಳಿಗೆ ಹೋಗಿದ್ದಾಗ ಮನೆಯಲ್ಲಿ ನನ್ನ ಪತ್ನಿ ಒಬ್ಬರೇ ಇದ್ದರು. ಶುಕ್ರವಾರ ರಾತ್ರಿ 8.30 ಗಂಟೆಯಲ್ಲಿ ಮನೆಗೆ ವಾಪಸ್ ಬಂದು ನೋಡಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಬೇಜಾರಿನಲ್ಲಿ ಮಲಗಿರಬಹುದು ಎಂದು ತಿಳಿದು ನಾನು ಮನೆಯ ಮೇಲಿನ ಕೊಠಡಿಯಲ್ಲಿ ಮಲಗಿದ್ದೆ ಎಂದು ಪತಿ ಕೆ.ಯು. ವಿರೂಪಾಕ್ಷ ತಿಳಿಸಿದ್ದಾರೆ.
ಇಂದು (ಶನಿವಾರ ) ಬೆಳಿಗ್ಗೆ ಸುಮಾರು 6 ಗಂಟೆಗೆ ಕೆಳಗಿಳಿದು ಬಂದು ಬಾಗಿಲು ತಟ್ಟಿದಾಗ ತೆಗೆಯಲಿಲ್ಲ. ಹೊರಗಿನಿಂದ ಬೆಡ್ ರೂಮಿನ ಕಿಟಕಿ ತೆಗೆದು ನೋಡಿದಾಗ ಸೀರೆಯಿಂದ ನೇಣು ಹಾಕಿಕೊಂಡಿದ್ದರು ಎಂದು ಪತಿ ಕೆ.ಯು.ವಿರೂಪಾಕ್ಷ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…