ಸರ್ಕಾರಿ ಶಾಲಾ ಶಿಕ್ಷಕಿ ನೇಣಿಗೆ ಶರಣು: ನಗರದ ಸೋಮೇಶ್ವರ ಬಡಾವಣೆಯಲ್ಲಿ ಘಟನೆ

ಸರ್ಕಾರಿ ಶಾಲೆ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ.

ತುರುವನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಟಿ.ಜ್ಯೋತಿ ಆತ್ಮಹತ್ಯೆ‌ ಮಾಡಿಕೊಂಡ ದುರ್ದೈವಿ.

ಮಕ್ಕಳಿಲ್ಲದ ಕೊರಗು ಹಾಗೂ ವರ್ಗಾವಣೆ ಮಾಡದ ಹಿನ್ನೆಲೆಯಲ್ಲಿ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಮೂಲತಃ ಚಿತ್ರದುರ್ಗ ತಾಲೂಕಿ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಕೆ.ಯು. ವಿರೂಪಾಕ್ಷ ಹಾಗೂ ಹೊಳಲ್ಕೆರೆ ತಾಲೂಕಿನ ನಲ್ಲಿಕಟ್ಟೆ ಗ್ರಾಮದ ಎನ್.ಟಿ.ಜ್ಯೋತಿ ಅವರನ್ನು 13 ವರ್ಷದ ಹಿಂದೆ‌ ವಿವಾಹವಾಗಿದ್ದರು.

ಕಳೆದ 12 ವರ್ಷಗಳಿಂದ‌ ದೊಡ್ಡಬಳ್ಳಾಪುರ ತಾಲೂಕಿನ‌ ಬನವತಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಿದ್ದ ಜ್ಯೋತಿ ಅವರು 9 ತಿಂಗಳ ಹಿಂದೆ ತುರುವನಹಳ್ಳಿ ಸರ್ಕಾರಿ ಶಾಲೆಗೆ ವರ್ಗಾವಣೆಯಾಗಿ ಬಂದಿದ್ದರು.

ಅಂದಿನಿಂದ ಸೋಮೇಶ್ವರ ಬಡಾವಣೆಯಲ್ಲಿ ಮನೆ ಮಾಡಿಕೊಂಡು ವಾಸವಿದ್ದರು. ಪ್ರೌಢಶಾಲೆಗೆ ವರ್ಗಾವಣೆ ಮಾಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಎಲ್ಲಿಯೂ ಖಾಲಿ ಜಾಗ ಇರದ ಕಾರಣ ವರ್ಗಾವಣೆ ಆಗಿರಲಿಲ್ಲ. ಈ ವಿಚಾರದಲ್ಲಿ ಮನನೊಂದಿದ್ದರು ಎನ್ನಲಾಗಿದೆ.

ಜು.14ರಂದು ಬೆಳಿಗ್ಗೆ ಕೆಲಸದ ನಿಮಿತ್ತ ಯಲಹಂಕದ ದೊಡ್ಡಬೆಟ್ಟಹಳ್ಳಿಗೆ ಹೋಗಿದ್ದಾಗ ಮನೆಯಲ್ಲಿ ನನ್ನ ಪತ್ನಿ ಒಬ್ಬರೇ ಇದ್ದರು. ಶುಕ್ರವಾರ ರಾತ್ರಿ 8.30 ಗಂಟೆಯಲ್ಲಿ ಮನೆಗೆ ವಾಪಸ್ ಬಂದು ನೋಡಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಬೇಜಾರಿನಲ್ಲಿ ಮಲಗಿರಬಹುದು ಎಂದು ತಿಳಿದು ನಾನು ಮನೆಯ ಮೇಲಿನ ಕೊಠಡಿಯಲ್ಲಿ ಮಲಗಿದ್ದೆ ಎಂದು ಪತಿ ಕೆ.ಯು. ವಿರೂಪಾಕ್ಷ ತಿಳಿಸಿದ್ದಾರೆ.

ಇಂದು (ಶನಿವಾರ ) ಬೆಳಿಗ್ಗೆ ಸುಮಾರು 6 ಗಂಟೆಗೆ ಕೆಳಗಿಳಿದು ಬಂದು ಬಾಗಿಲು ತಟ್ಟಿದಾಗ ತೆಗೆಯಲಿಲ್ಲ. ಹೊರಗಿನಿಂದ ಬೆಡ್ ರೂಮಿನ ಕಿಟಕಿ ತೆಗೆದು ನೋಡಿದಾಗ ಸೀರೆಯಿಂದ ನೇಣು ಹಾಕಿಕೊಂಡಿದ್ದರು ಎಂದು ಪತಿ ಕೆ.ಯು.ವಿರೂಪಾಕ್ಷ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ನಗರ ಠಾಣೆ ಪೊಲೀಸರು ಪರಿಶೀಲನೆ‌ ನಡೆಸಿದ್ದಾರೆ.

Ramesh Babu

Journalist

Recent Posts

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

35 minutes ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

3 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

16 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

1 day ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

1 day ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

2 days ago