ದೇವನಹಳ್ಳಿ ಕ್ಷೇತ್ರದ ವ್ಯಾಪ್ತಿಯಲ್ಲಿನ ಕೈಗಾರಿಕೆಗಳಿಂದ ಉದ್ದಿಮೆಗಳ ಸಾಮಾಜಿಕ ಹೊಣೆಗಾರಿಕೆಯಡಿ ಬರುವ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಗುಣಾತ್ಮಕ ಶಿಕ್ಷಣ ನೀಡುವ ಸಂಬಂಧ ದೇವನಹಳ್ಳಿ ಕ್ಷೇತ್ರದ ಐದು ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ರೂಪಿಸುವ ಯೋಜನೆಗೆ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಚಾಲನೆ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
ಇಂದು ದೇವನಹಳ್ಳಿಯಲ್ಲಿ ನಡೆದ ಸಾರ್ವಜನಿಕ ಸಂಪರ್ಕ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಮುಂಬರುವ ದಿನಗಳಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸುವುದು. ದೇವನಹಳ್ಳಿ ಕ್ಷೇತ್ರದ ಸಮಗ್ರ ಅಭಿವೃದ್ಧಿ (ಮುನ್ನೋಟ) ಕುರಿತು ಕ್ರಿಯಾಯೋಜನೆ ರೂಪಿಸಿ ಹಂತ ಹಂತವಾಗಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವುದು.
ಆಶ್ರಯ ಯೋಜನೆಯಡಿ 4549 ನಿವೇಶನ ರಹಿತರನ್ನು ಮತ್ತು 2555 ವಸತಿ ರಹಿತರನ್ನು ಗುರ್ತಿಸಿದ್ದು ಲಭ್ಯವಿರುವ ಜಮೀನುಗನುಗುಣವಾಗಿ ಅರ್ಹ ಫಲಾನುಭವಿಗಳಿಗೆ ನಿವೇಶನಗಳನ್ನು ಹಂಚಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.
ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಸಭೆಗಳನ್ನು ಆಯೋಜಿಸಿ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆ, ಕುಂದು ಕೊರತೆಗಳನ್ನು ಗ್ರಾಮ ಪಂಚಾಯಿತಿ ಹಂತದಲ್ಲಿ ಬಗೆಹರಿಸುವುದು ಹಾಗೂ ಕ್ರಿಯಾಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.
ಎಸ್.ಸಿ/ಎಸ್.ಟಿ ಹಾಗೂ ಇತರೆ ಎಲ್ಲಾ ಸಮುದಾಯದವರಿಗೆ ಜಮೀನು ಲಭ್ಯತೆಗೆ ಅನುಗುಣವಾಗಿ ಸ್ಮಶಾನ ಭೂಮಿ ಮಂಜೂರು ಮಾಡಿ ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು.
ದೇವನಹಳ್ಳಿ / ವಿಜಯಪುರ ಪುರಸಭೆಗಳನ್ನು ಮೇಲ್ದರ್ಜೆಗೇರಿಸುವುದು ಸೇರಿದಂತೆ ಪ್ರತಿ ಬುಧವಾರ ಹಾಗೂ ತಿಂಗಳ ಮೊದಲ ಮತ್ತು ಮೂರನೆ ಶನಿವಾರ ತಾಲ್ಲೂಕು ಪಂಚಾಯಿತಿ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆ/ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸ್ಥಳೀಯ ಶಾಸಕರ ಕಚೇರಿ ದೂರವಾಣಿ ಸಂಖ್ಯೆಗೆ 080-22202099 ಕರೆಮಾಡಿ ದೂರು ನೀಡಬಹುದು ಎಂದು ಸಚಿವರು ತಿಳಿಸಿದ್ದಾರೆ.
ಕ್ಷೇತ್ರ ವ್ಯಾಪ್ತಿಯ ಕೆರೆಗಳು ಹಾಗೂ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿ ಪಡಿಸಿ, ಪ್ರವಾಸಿ ತಾಣಗಳನ್ನಾಗಿ ಮಾಡಲು ಯೋಜನೆಗಳನ್ನು ರೂಪಿಸಲಾಗುವುದು. ಕೃಷಿ – ರೇಷ್ಮೆ ಹೈನುಗಾರಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ರೈತಾಪಿ ಕುಟುಂಬಗಳನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ತಮ್ಮ ಆದ್ಯತೆ ಎಂದು ಅವರು ತಿಳಿಸಿದರಲ್ಲದೆ ಈ ತಿಂಗಳ ಸೆಪ್ಟೆಂಬರ್ 25ನೇ ತಾರೀಖು ಜಿಲ್ಲಾ ಹಂತದ ಜನತಾದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಅವರು ಹೇಳಿದರು.
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…