ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳಾಗಿ ರೂಪಿಸಲು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ದೇವನಹಳ್ಳಿ ಕ್ಷೇತ್ರದ ವ್ಯಾಪ್ತಿಯಲ್ಲಿನ ಕೈಗಾರಿಕೆಗಳಿಂದ ಉದ್ದಿಮೆಗಳ ಸಾಮಾಜಿಕ ಹೊಣೆಗಾರಿಕೆಯಡಿ ಬರುವ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಗುಣಾತ್ಮಕ ಶಿಕ್ಷಣ ನೀಡುವ ಸಂಬಂಧ ದೇವನಹಳ್ಳಿ ಕ್ಷೇತ್ರದ ಐದು ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ರೂಪಿಸುವ ಯೋಜನೆಗೆ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಚಾಲನೆ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.

ಇಂದು ದೇವನಹಳ್ಳಿಯಲ್ಲಿ ನಡೆದ ಸಾರ್ವಜನಿಕ ಸಂಪರ್ಕ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಮುಂಬರುವ ದಿನಗಳಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸುವುದು. ದೇವನಹಳ್ಳಿ ಕ್ಷೇತ್ರದ ಸಮಗ್ರ ಅಭಿವೃದ್ಧಿ (ಮುನ್ನೋಟ) ಕುರಿತು ಕ್ರಿಯಾಯೋಜನೆ ರೂಪಿಸಿ ಹಂತ ಹಂತವಾಗಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವುದು.

ಆಶ್ರಯ ಯೋಜನೆಯಡಿ 4549 ನಿವೇಶನ ರಹಿತರನ್ನು  ಮತ್ತು 2555 ವಸತಿ ರಹಿತರನ್ನು ಗುರ್ತಿಸಿದ್ದು ಲಭ್ಯವಿರುವ ಜಮೀನುಗನುಗುಣವಾಗಿ ಅರ್ಹ ಫಲಾನುಭವಿಗಳಿಗೆ ನಿವೇಶನಗಳನ್ನು ಹಂಚಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.

ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಸಭೆಗಳನ್ನು ಆಯೋಜಿಸಿ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆ, ಕುಂದು ಕೊರತೆಗಳನ್ನು ಗ್ರಾಮ ಪಂಚಾಯಿತಿ ಹಂತದಲ್ಲಿ ಬಗೆಹರಿಸುವುದು ಹಾಗೂ ಕ್ರಿಯಾಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.

ಎಸ್.ಸಿ/ಎಸ್.ಟಿ ಹಾಗೂ ಇತರೆ ಎಲ್ಲಾ ಸಮುದಾಯದವರಿಗೆ  ಜಮೀನು ಲಭ್ಯತೆಗೆ ಅನುಗುಣವಾಗಿ ಸ್ಮಶಾನ ಭೂಮಿ  ಮಂಜೂರು ಮಾಡಿ ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು.

 ದೇವನಹಳ್ಳಿ / ವಿಜಯಪುರ ಪುರಸಭೆಗಳನ್ನು ಮೇಲ್ದರ್ಜೆಗೇರಿಸುವುದು ಸೇರಿದಂತೆ ಪ್ರತಿ ಬುಧವಾರ ಹಾಗೂ ತಿಂಗಳ ಮೊದಲ ಮತ್ತು ಮೂರನೆ ಶನಿವಾರ ತಾಲ್ಲೂಕು ಪಂಚಾಯಿತಿ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆ/ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸ್ಥಳೀಯ ಶಾಸಕರ ಕಚೇರಿ ದೂರವಾಣಿ ಸಂಖ್ಯೆಗೆ 080-22202099 ಕರೆಮಾಡಿ ದೂರು ನೀಡಬಹುದು ಎಂದು ಸಚಿವರು ತಿಳಿಸಿದ್ದಾರೆ.

ಕ್ಷೇತ್ರ ವ್ಯಾಪ್ತಿಯ ಕೆರೆಗಳು ಹಾಗೂ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿ ಪಡಿಸಿ, ಪ್ರವಾಸಿ ತಾಣಗಳನ್ನಾಗಿ ಮಾಡಲು ಯೋಜನೆಗಳನ್ನು ರೂಪಿಸಲಾಗುವುದು. ಕೃಷಿ – ರೇಷ್ಮೆ ಹೈನುಗಾರಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ರೈತಾಪಿ ಕುಟುಂಬಗಳನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ತಮ್ಮ ಆದ್ಯತೆ ಎಂದು ಅವರು ತಿಳಿಸಿದರಲ್ಲದೆ ಈ ತಿಂಗಳ ಸೆಪ್ಟೆಂಬರ್ 25ನೇ ತಾರೀಖು ಜಿಲ್ಲಾ ಹಂತದ ಜನತಾದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಅವರು ಹೇಳಿದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

8 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

9 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

10 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

10 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

16 hours ago