ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳಾಗಿ ರೂಪಿಸಲು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ದೇವನಹಳ್ಳಿ ಕ್ಷೇತ್ರದ ವ್ಯಾಪ್ತಿಯಲ್ಲಿನ ಕೈಗಾರಿಕೆಗಳಿಂದ ಉದ್ದಿಮೆಗಳ ಸಾಮಾಜಿಕ ಹೊಣೆಗಾರಿಕೆಯಡಿ ಬರುವ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಗುಣಾತ್ಮಕ ಶಿಕ್ಷಣ ನೀಡುವ ಸಂಬಂಧ ದೇವನಹಳ್ಳಿ ಕ್ಷೇತ್ರದ ಐದು ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ರೂಪಿಸುವ ಯೋಜನೆಗೆ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಚಾಲನೆ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.

ಇಂದು ದೇವನಹಳ್ಳಿಯಲ್ಲಿ ನಡೆದ ಸಾರ್ವಜನಿಕ ಸಂಪರ್ಕ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಮುಂಬರುವ ದಿನಗಳಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸುವುದು. ದೇವನಹಳ್ಳಿ ಕ್ಷೇತ್ರದ ಸಮಗ್ರ ಅಭಿವೃದ್ಧಿ (ಮುನ್ನೋಟ) ಕುರಿತು ಕ್ರಿಯಾಯೋಜನೆ ರೂಪಿಸಿ ಹಂತ ಹಂತವಾಗಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವುದು.

ಆಶ್ರಯ ಯೋಜನೆಯಡಿ 4549 ನಿವೇಶನ ರಹಿತರನ್ನು  ಮತ್ತು 2555 ವಸತಿ ರಹಿತರನ್ನು ಗುರ್ತಿಸಿದ್ದು ಲಭ್ಯವಿರುವ ಜಮೀನುಗನುಗುಣವಾಗಿ ಅರ್ಹ ಫಲಾನುಭವಿಗಳಿಗೆ ನಿವೇಶನಗಳನ್ನು ಹಂಚಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.

ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಸಭೆಗಳನ್ನು ಆಯೋಜಿಸಿ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆ, ಕುಂದು ಕೊರತೆಗಳನ್ನು ಗ್ರಾಮ ಪಂಚಾಯಿತಿ ಹಂತದಲ್ಲಿ ಬಗೆಹರಿಸುವುದು ಹಾಗೂ ಕ್ರಿಯಾಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.

ಎಸ್.ಸಿ/ಎಸ್.ಟಿ ಹಾಗೂ ಇತರೆ ಎಲ್ಲಾ ಸಮುದಾಯದವರಿಗೆ  ಜಮೀನು ಲಭ್ಯತೆಗೆ ಅನುಗುಣವಾಗಿ ಸ್ಮಶಾನ ಭೂಮಿ  ಮಂಜೂರು ಮಾಡಿ ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು.

 ದೇವನಹಳ್ಳಿ / ವಿಜಯಪುರ ಪುರಸಭೆಗಳನ್ನು ಮೇಲ್ದರ್ಜೆಗೇರಿಸುವುದು ಸೇರಿದಂತೆ ಪ್ರತಿ ಬುಧವಾರ ಹಾಗೂ ತಿಂಗಳ ಮೊದಲ ಮತ್ತು ಮೂರನೆ ಶನಿವಾರ ತಾಲ್ಲೂಕು ಪಂಚಾಯಿತಿ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆ/ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸ್ಥಳೀಯ ಶಾಸಕರ ಕಚೇರಿ ದೂರವಾಣಿ ಸಂಖ್ಯೆಗೆ 080-22202099 ಕರೆಮಾಡಿ ದೂರು ನೀಡಬಹುದು ಎಂದು ಸಚಿವರು ತಿಳಿಸಿದ್ದಾರೆ.

ಕ್ಷೇತ್ರ ವ್ಯಾಪ್ತಿಯ ಕೆರೆಗಳು ಹಾಗೂ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿ ಪಡಿಸಿ, ಪ್ರವಾಸಿ ತಾಣಗಳನ್ನಾಗಿ ಮಾಡಲು ಯೋಜನೆಗಳನ್ನು ರೂಪಿಸಲಾಗುವುದು. ಕೃಷಿ – ರೇಷ್ಮೆ ಹೈನುಗಾರಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ರೈತಾಪಿ ಕುಟುಂಬಗಳನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ತಮ್ಮ ಆದ್ಯತೆ ಎಂದು ಅವರು ತಿಳಿಸಿದರಲ್ಲದೆ ಈ ತಿಂಗಳ ಸೆಪ್ಟೆಂಬರ್ 25ನೇ ತಾರೀಖು ಜಿಲ್ಲಾ ಹಂತದ ಜನತಾದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಅವರು ಹೇಳಿದರು.

Ramesh Babu

Journalist

Recent Posts

Instant Play Casino

Instant play casinos allow you to play casino games online without installing any software. These…

37 minutes ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

3 hours ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

5 hours ago

Facharbeit Schreiben_ Ein Leitfaden für Schüler und Studenten(2)

Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…

5 hours ago

Ideal Online Slot Machine Online Casinos: A Comprehensive Guide

Welcome to our thorough overview on the very best online slots online casinos. If you're…

10 hours ago

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿರ್ಧಾರ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ…

11 hours ago