ಸರ್ಕಾರಿ ಸೇವೆಯಲ್ಲಿರುವವರು ಸಾಮಾಜಿಕ ಜವಾಬ್ದಾರಿಯನ್ನರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ನ್ಯಾ.ಕೆ.ಎನ್.ಫಣೀಂದ್ರ

ಸರ್ಕಾರಿ ಹಾಗೂ ಸಾರ್ವಜನಿಕ ಸೇವೆಯಲ್ಲಿರುವವರು ಕೇವಲ ಸಂಬಳಕ್ಕಾಗಿ ಕಾರ್ಯನಿರ್ವಹಿಸದೇ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಾಮಾಜಿಕ ಜವಾಬ್ದಾರಿಯನ್ನರಿತು, ತತ್ವ, ಮೌಲ್ಯಗಳನ್ನು ಅಳವಡಿಸಿಕೊಂಡು, ನಿಷ್ಠೆಯಿಂದ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಲ್ಕು ದಿನ ಪ್ರವಾಸ ಕಾರ್ಯಕ್ರಮ ನಡೆಯಲಿದ್ದು, ಮೊದಲ ದಿನವಾದ ಇಂದು ಸಾರ್ವಜನಿಕರಿಂದ ದೂರಗಳ ಅಹವಾಲು ಸ್ವೀಕರಿಸಿ, ಸಂಬಂಧ ಪಟ್ಟ‌ ಅಧಿಕಾರಿಗಳಿಂದ ಸಮಸ್ಯೆ ಬಗೆಹರಿಸಲು ತಿಳಿಸಲಾಗುತ್ತದೆ. ನಂತರ ಇಂದು ಸಂಜೆ 5 ಗಂಟೆಯಿಂದ ರಿಂದ 6 ಗಂಟೆಯವರೆಗೆ ಅಧಿಕಾರಿಗಳಿಗೆ ಕಾನೂನು ಅರಿವು‌ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎರಡನೇ ‌ದಿನ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯ ನ್ಯಾಯಮೂರ್ತಿಗಳು ಸಭೆ ನಡೆಯಲಿದೆ. ಇದರ ಜತೆಗೆ

ವಿವಿಧ ಇಲಾಖೆ, ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತದೆ ಎಂದರಲ್ಲದೆ ಲೋಕಾಯುಕ್ತದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 400 ಪ್ರಕರಣಗಳಿದ್ದು, 150 ಪ್ರಕರಣಗಳನ್ನು ವಿಲೇವಾರಿಗೊಳಿಸಲಾಗುತ್ತದೆ. ಎಂದು ಮಾಹಿತಿ ನೀಡಿದರು.

ಸರ್ಕಾರಿ ಕೆಲಸಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಮಾಡದೆ ಇದ್ದಾಗ ಅಥವಾ ಕರ್ತವ್ಯ ಲೋಪ ಕಂಡುಬಂದರೆ ಜನರು‌ ಲೋಕಾಯುಕ್ತಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವಾಗ ಲೋಕಾಯುಕ್ತ ವೆಬ್‌ಸೈಟ್ ನಲ್ಲಿ‌ ಸಿಗುವ ಅರ್ಜಿಯ ಫಾರ್ಮ್ಯಾಟ್ ಪಡೆದು ಕ್ರಮಬದ್ದವಾಗಿ ಅರ್ಜಿ ಸಲ್ಲಿಸಿದರೆ, ಶೀಘ್ರವಾಗಿ ಅರ್ಜಿ ವಿಲೇವಾರಿಗೆ ಕ್ರಮವಹಿಸಲಾಗುತ್ತದೆ ಎಂದರು.

ಸಮಾಜದಲ್ಲಿ ಜೀವನಕ್ಕೆ ಮೂರು ಹಕ್ಕುಗಳು ಅತ್ಯಂತ ಮುಖ್ಯವಾಗಿದೆ. ದೇಹದ ಸಂರಕ್ಷಣೆ, ಆಸ್ತಿ ಪಾಸ್ತಿ ಸಂರಕ್ಷಣೆ ಹಾಗೂ ಗೌರವ ರಕ್ಷಣೆ ಎಂಬ ಈ ಮೂರು ಹಕ್ಕುಗಳ ಸುತ್ತ ಕಾನೂನುಗಳಿವೆ. ಕಾನೂನುಗಳ ಮೂಲಕ ‌ಹಕ್ಕುಗಳನ್ನು ರಕ್ಷಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಅಧಿಕಾರಿಗಳು ಸಾರ್ವಜನಿಕ‌‌ರ ಕೆಲಸಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು. ಸಮಯಕ್ಕೆ ಸರಿಯಾಗಿ, ನಿಗದಿತ ಅವಧಿಯೊಳಗೆ ಕಾರ್ಯ ನಿರ್ವಹಿಸಬೇಕು. ಮಾಡಬಾರದಂತಹ‌ ಕೆಲಸ ಮಾಡುವುದು. ಮಾಡುವಂತಹ ಕೆಲಸವನ್ನು ‌ಸರಿಯಾದ ರೀತಿ, ಸಮಯದಲ್ಲಿ ‌ಮಾಡದಿರುವುದು. ಮಾಡಲೇಬೇಕಾದ ಕೆಲಸವನ್ನು ಮಾಡದೇ ಇರುವುದರಿಂದ ಜನರ ಸಾಮಾಜಿಕ ಜೀವನದ ಮೇಲೆ ಸಮಸ್ಯೆ ಉಂಟು‌ಮಾಡುತ್ತದೆ. ಇದರಿಂದಾಗಿ ಜನರು ಸಮಸ್ಯೆ ಬಗೆಹರಿಸಲು ಲೋಕಾಯುಕ್ತ ಸೇರಿದಂತೆ ನ್ಯಾಯಾಲಯಕ್ಕೆ ಅಲೆದಾಡುವಂತ ಪರಿಸ್ಥಿತಿ ಎದುರಾಗುತ್ತದೆ. ಆದ್ದರಿಂದ ಅಧಿಕಾರಿಗಳು ಜನರ ಅರ್ಜಿಗಳನ್ನು ಸಮಯಕ್ಕೆ ‌ಸರಿಯಾಗಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜನರ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತದೆ. ಸರ್ಕಾರಿ ಅಧಿಕಾರಿಗಳು ಜನರಿಗೆ ಯೋಜನೆಗಳನ್ನು, ಸೌಲಭ್ಯಗಳನ್ನು ಪ್ರಾಮಾಣಿಕ ಪ್ರಯತ್ನದಿಂದ ಪರಿಣಾಮಕಾರಿಯಾಗಿ ತಲುಪಿಸಬೇಕು. ರಸ್ತೆ, ಕೆರೆ, ಕುಂಟೆ, ಅರಣ್ಯ ಅಭಿವೃದ್ಧಿ ಸೇರಿದಂತೆ ನಾನಾ ಯೋಜನೆಗಳು‌ ಜನರ ಅನುಕೂಲಕ್ಕಾಗಿ ‌ಇರುವುದಾಗಿದೆ. ಅದನ್ನು ಜನರಿಗೆ ತಲುಪಿಸುವ ಕೆಲಸ ಅಧಿಕಾರಿಗಳು ಮಾಡುತ್ತಾರೆ. ಪ್ರತಿ ಶಾಸಕರು, ಅಧಿಕಾರಿಗಳು ಜಪ್ರತಿನಿಧಿಗಳು, ಜನರ ಸೇವಕರೇ ಆಗಿದ್ದಾರೆ. ಪ್ರಸ್ತುತ ಜನಸಂಖ್ಯೆಗೆ ಹೋಲಿಸಿದರೆ ಸರಕಾರಿ ‌ನೌಕರರ ಸಂಖ್ಯೆ ‌ಶೇಕಡಾ ಒಂದಕ್ಕಿಂತ ಕಡಿಮೆ ಇದೆ. ಜನರಿಗೆ ಸರಿಯಾದ ಸಮಯಕ್ಕೆ ಯೋಜನೆ ತಲುಪಬೇಕು. ಇದರಲ್ಲಿ ಏನಾದರೂ ಲೋಪಗಳು ಕಂಡುಬಂದರೆ ಅವರನ್ನು ಪ್ರಶ್ನಿಸಿ ಅವರಿಂದ ಸೂಕ್ತ ಉತ್ತರ ಬರದೆ ಇದ್ದಾಗ ಅವರ ಮೇಲೆ‌ ಕ್ರಮ ಕೈಗೊಳ್ಳುವ ಅಧಿಕಾರ ಲೋಕಾಯುಕ್ತ ಸಂಸ್ಥೆಗೆ ಇದೆ ಎಂದರು.

ಜನರಿಗೆ ವೈಯಕ್ತಿಕ ಹಾಗೂ ಸಾಮಾಜಿಕ ಎಂಬ ಎರಡು ರೀತಿಯ ಸಮಸ್ಯೆಗಳಿರುತ್ತವೆ. ಸಾರ್ವಜನಿಕ ಸೇವೆಯಲ್ಲಿರು ಅವರ ಸಮಸ್ಯೆಗಳನ್ನು ವಿಳಂಬ ಮಾಡದೇ ಶೀಘ್ರವಾಗಿ ಬಗೆಹರಿಸಬೇಕು. ಅಧಿಕಾರಿಗಳು ವಿವೇಕಾನಂದ, ಕುವೆಂಪು, ಡಿ.ವಿ.ಗುಂಡಪ್ಪ ಸೇರಿದಂತೆ ದಾರ್ಶನಿಕರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಉತ್ತಮ ಸಮಾಜ ನಿರ್ಮಾಣ ಮಾಡಲು ಮಾಧ್ಯಮ ಮಿತ್ರರು ಸೇರಿದಂತೆ ಎಲ್ಲರೂ ಕೈ ಜೋಡಿಸಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಈ ವೇಳೆ ಜಿಲ್ಲೆಯ ಸಾರ್ವಜನಿಕರು ಭಾಗವಹಿಸಿ ಅಹವಾಲು, ಕುಂದುಕೊರತೆ ಅರ್ಜಿಗಳನ್ನು ಲೋಕಾಯುಕ್ತ ನ್ಯಾಯಮೂರ್ತಿ ಅವರಿಗೆ ಸಲ್ಲಿಸಿದರು.

ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಶಶಿಕಾಂತ್.ಬಿ.ಭಾವಿಕಟ್ಟಿ, ಉಪ ನಿಬಂಧಕರಾದ ಎಂ.ವಿ.ಚನ್ನಕೇಶವರೆಡ್ಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಶ್ರೀನಾಥ್. ಎಂ.ಜೋಶಿ, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

3 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

3 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

9 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

20 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

21 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

21 hours ago