ಸರ್ಕಾರಿ ಸೇವೆಯಲ್ಲಿರುವವರು ಸಾಮಾಜಿಕ ಜವಾಬ್ದಾರಿಯನ್ನರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ನ್ಯಾ.ಕೆ.ಎನ್.ಫಣೀಂದ್ರ

ಸರ್ಕಾರಿ ಹಾಗೂ ಸಾರ್ವಜನಿಕ ಸೇವೆಯಲ್ಲಿರುವವರು ಕೇವಲ ಸಂಬಳಕ್ಕಾಗಿ ಕಾರ್ಯನಿರ್ವಹಿಸದೇ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಾಮಾಜಿಕ ಜವಾಬ್ದಾರಿಯನ್ನರಿತು, ತತ್ವ, ಮೌಲ್ಯಗಳನ್ನು ಅಳವಡಿಸಿಕೊಂಡು, ನಿಷ್ಠೆಯಿಂದ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಲ್ಕು ದಿನ ಪ್ರವಾಸ ಕಾರ್ಯಕ್ರಮ ನಡೆಯಲಿದ್ದು, ಮೊದಲ ದಿನವಾದ ಇಂದು ಸಾರ್ವಜನಿಕರಿಂದ ದೂರಗಳ ಅಹವಾಲು ಸ್ವೀಕರಿಸಿ, ಸಂಬಂಧ ಪಟ್ಟ‌ ಅಧಿಕಾರಿಗಳಿಂದ ಸಮಸ್ಯೆ ಬಗೆಹರಿಸಲು ತಿಳಿಸಲಾಗುತ್ತದೆ. ನಂತರ ಇಂದು ಸಂಜೆ 5 ಗಂಟೆಯಿಂದ ರಿಂದ 6 ಗಂಟೆಯವರೆಗೆ ಅಧಿಕಾರಿಗಳಿಗೆ ಕಾನೂನು ಅರಿವು‌ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎರಡನೇ ‌ದಿನ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯ ನ್ಯಾಯಮೂರ್ತಿಗಳು ಸಭೆ ನಡೆಯಲಿದೆ. ಇದರ ಜತೆಗೆ

ವಿವಿಧ ಇಲಾಖೆ, ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತದೆ ಎಂದರಲ್ಲದೆ ಲೋಕಾಯುಕ್ತದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 400 ಪ್ರಕರಣಗಳಿದ್ದು, 150 ಪ್ರಕರಣಗಳನ್ನು ವಿಲೇವಾರಿಗೊಳಿಸಲಾಗುತ್ತದೆ. ಎಂದು ಮಾಹಿತಿ ನೀಡಿದರು.

ಸರ್ಕಾರಿ ಕೆಲಸಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಮಾಡದೆ ಇದ್ದಾಗ ಅಥವಾ ಕರ್ತವ್ಯ ಲೋಪ ಕಂಡುಬಂದರೆ ಜನರು‌ ಲೋಕಾಯುಕ್ತಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವಾಗ ಲೋಕಾಯುಕ್ತ ವೆಬ್‌ಸೈಟ್ ನಲ್ಲಿ‌ ಸಿಗುವ ಅರ್ಜಿಯ ಫಾರ್ಮ್ಯಾಟ್ ಪಡೆದು ಕ್ರಮಬದ್ದವಾಗಿ ಅರ್ಜಿ ಸಲ್ಲಿಸಿದರೆ, ಶೀಘ್ರವಾಗಿ ಅರ್ಜಿ ವಿಲೇವಾರಿಗೆ ಕ್ರಮವಹಿಸಲಾಗುತ್ತದೆ ಎಂದರು.

ಸಮಾಜದಲ್ಲಿ ಜೀವನಕ್ಕೆ ಮೂರು ಹಕ್ಕುಗಳು ಅತ್ಯಂತ ಮುಖ್ಯವಾಗಿದೆ. ದೇಹದ ಸಂರಕ್ಷಣೆ, ಆಸ್ತಿ ಪಾಸ್ತಿ ಸಂರಕ್ಷಣೆ ಹಾಗೂ ಗೌರವ ರಕ್ಷಣೆ ಎಂಬ ಈ ಮೂರು ಹಕ್ಕುಗಳ ಸುತ್ತ ಕಾನೂನುಗಳಿವೆ. ಕಾನೂನುಗಳ ಮೂಲಕ ‌ಹಕ್ಕುಗಳನ್ನು ರಕ್ಷಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಅಧಿಕಾರಿಗಳು ಸಾರ್ವಜನಿಕ‌‌ರ ಕೆಲಸಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು. ಸಮಯಕ್ಕೆ ಸರಿಯಾಗಿ, ನಿಗದಿತ ಅವಧಿಯೊಳಗೆ ಕಾರ್ಯ ನಿರ್ವಹಿಸಬೇಕು. ಮಾಡಬಾರದಂತಹ‌ ಕೆಲಸ ಮಾಡುವುದು. ಮಾಡುವಂತಹ ಕೆಲಸವನ್ನು ‌ಸರಿಯಾದ ರೀತಿ, ಸಮಯದಲ್ಲಿ ‌ಮಾಡದಿರುವುದು. ಮಾಡಲೇಬೇಕಾದ ಕೆಲಸವನ್ನು ಮಾಡದೇ ಇರುವುದರಿಂದ ಜನರ ಸಾಮಾಜಿಕ ಜೀವನದ ಮೇಲೆ ಸಮಸ್ಯೆ ಉಂಟು‌ಮಾಡುತ್ತದೆ. ಇದರಿಂದಾಗಿ ಜನರು ಸಮಸ್ಯೆ ಬಗೆಹರಿಸಲು ಲೋಕಾಯುಕ್ತ ಸೇರಿದಂತೆ ನ್ಯಾಯಾಲಯಕ್ಕೆ ಅಲೆದಾಡುವಂತ ಪರಿಸ್ಥಿತಿ ಎದುರಾಗುತ್ತದೆ. ಆದ್ದರಿಂದ ಅಧಿಕಾರಿಗಳು ಜನರ ಅರ್ಜಿಗಳನ್ನು ಸಮಯಕ್ಕೆ ‌ಸರಿಯಾಗಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜನರ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತದೆ. ಸರ್ಕಾರಿ ಅಧಿಕಾರಿಗಳು ಜನರಿಗೆ ಯೋಜನೆಗಳನ್ನು, ಸೌಲಭ್ಯಗಳನ್ನು ಪ್ರಾಮಾಣಿಕ ಪ್ರಯತ್ನದಿಂದ ಪರಿಣಾಮಕಾರಿಯಾಗಿ ತಲುಪಿಸಬೇಕು. ರಸ್ತೆ, ಕೆರೆ, ಕುಂಟೆ, ಅರಣ್ಯ ಅಭಿವೃದ್ಧಿ ಸೇರಿದಂತೆ ನಾನಾ ಯೋಜನೆಗಳು‌ ಜನರ ಅನುಕೂಲಕ್ಕಾಗಿ ‌ಇರುವುದಾಗಿದೆ. ಅದನ್ನು ಜನರಿಗೆ ತಲುಪಿಸುವ ಕೆಲಸ ಅಧಿಕಾರಿಗಳು ಮಾಡುತ್ತಾರೆ. ಪ್ರತಿ ಶಾಸಕರು, ಅಧಿಕಾರಿಗಳು ಜಪ್ರತಿನಿಧಿಗಳು, ಜನರ ಸೇವಕರೇ ಆಗಿದ್ದಾರೆ. ಪ್ರಸ್ತುತ ಜನಸಂಖ್ಯೆಗೆ ಹೋಲಿಸಿದರೆ ಸರಕಾರಿ ‌ನೌಕರರ ಸಂಖ್ಯೆ ‌ಶೇಕಡಾ ಒಂದಕ್ಕಿಂತ ಕಡಿಮೆ ಇದೆ. ಜನರಿಗೆ ಸರಿಯಾದ ಸಮಯಕ್ಕೆ ಯೋಜನೆ ತಲುಪಬೇಕು. ಇದರಲ್ಲಿ ಏನಾದರೂ ಲೋಪಗಳು ಕಂಡುಬಂದರೆ ಅವರನ್ನು ಪ್ರಶ್ನಿಸಿ ಅವರಿಂದ ಸೂಕ್ತ ಉತ್ತರ ಬರದೆ ಇದ್ದಾಗ ಅವರ ಮೇಲೆ‌ ಕ್ರಮ ಕೈಗೊಳ್ಳುವ ಅಧಿಕಾರ ಲೋಕಾಯುಕ್ತ ಸಂಸ್ಥೆಗೆ ಇದೆ ಎಂದರು.

ಜನರಿಗೆ ವೈಯಕ್ತಿಕ ಹಾಗೂ ಸಾಮಾಜಿಕ ಎಂಬ ಎರಡು ರೀತಿಯ ಸಮಸ್ಯೆಗಳಿರುತ್ತವೆ. ಸಾರ್ವಜನಿಕ ಸೇವೆಯಲ್ಲಿರು ಅವರ ಸಮಸ್ಯೆಗಳನ್ನು ವಿಳಂಬ ಮಾಡದೇ ಶೀಘ್ರವಾಗಿ ಬಗೆಹರಿಸಬೇಕು. ಅಧಿಕಾರಿಗಳು ವಿವೇಕಾನಂದ, ಕುವೆಂಪು, ಡಿ.ವಿ.ಗುಂಡಪ್ಪ ಸೇರಿದಂತೆ ದಾರ್ಶನಿಕರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಉತ್ತಮ ಸಮಾಜ ನಿರ್ಮಾಣ ಮಾಡಲು ಮಾಧ್ಯಮ ಮಿತ್ರರು ಸೇರಿದಂತೆ ಎಲ್ಲರೂ ಕೈ ಜೋಡಿಸಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಈ ವೇಳೆ ಜಿಲ್ಲೆಯ ಸಾರ್ವಜನಿಕರು ಭಾಗವಹಿಸಿ ಅಹವಾಲು, ಕುಂದುಕೊರತೆ ಅರ್ಜಿಗಳನ್ನು ಲೋಕಾಯುಕ್ತ ನ್ಯಾಯಮೂರ್ತಿ ಅವರಿಗೆ ಸಲ್ಲಿಸಿದರು.

ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಶಶಿಕಾಂತ್.ಬಿ.ಭಾವಿಕಟ್ಟಿ, ಉಪ ನಿಬಂಧಕರಾದ ಎಂ.ವಿ.ಚನ್ನಕೇಶವರೆಡ್ಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಶ್ರೀನಾಥ್. ಎಂ.ಜೋಶಿ, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

4 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

6 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

8 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

11 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

22 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

22 hours ago