ಸರ್ಕಾರಿ ಸೇವೆಯಲ್ಲಿರುವವರು ಸಾಮಾಜಿಕ ಜವಾಬ್ದಾರಿಯನ್ನರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ನ್ಯಾ.ಕೆ.ಎನ್.ಫಣೀಂದ್ರ

ಸರ್ಕಾರಿ ಹಾಗೂ ಸಾರ್ವಜನಿಕ ಸೇವೆಯಲ್ಲಿರುವವರು ಕೇವಲ ಸಂಬಳಕ್ಕಾಗಿ ಕಾರ್ಯನಿರ್ವಹಿಸದೇ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಾಮಾಜಿಕ ಜವಾಬ್ದಾರಿಯನ್ನರಿತು, ತತ್ವ, ಮೌಲ್ಯಗಳನ್ನು ಅಳವಡಿಸಿಕೊಂಡು, ನಿಷ್ಠೆಯಿಂದ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಲ್ಕು ದಿನ ಪ್ರವಾಸ ಕಾರ್ಯಕ್ರಮ ನಡೆಯಲಿದ್ದು, ಮೊದಲ ದಿನವಾದ ಇಂದು ಸಾರ್ವಜನಿಕರಿಂದ ದೂರಗಳ ಅಹವಾಲು ಸ್ವೀಕರಿಸಿ, ಸಂಬಂಧ ಪಟ್ಟ‌ ಅಧಿಕಾರಿಗಳಿಂದ ಸಮಸ್ಯೆ ಬಗೆಹರಿಸಲು ತಿಳಿಸಲಾಗುತ್ತದೆ. ನಂತರ ಇಂದು ಸಂಜೆ 5 ಗಂಟೆಯಿಂದ ರಿಂದ 6 ಗಂಟೆಯವರೆಗೆ ಅಧಿಕಾರಿಗಳಿಗೆ ಕಾನೂನು ಅರಿವು‌ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎರಡನೇ ‌ದಿನ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯ ನ್ಯಾಯಮೂರ್ತಿಗಳು ಸಭೆ ನಡೆಯಲಿದೆ. ಇದರ ಜತೆಗೆ

ವಿವಿಧ ಇಲಾಖೆ, ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತದೆ ಎಂದರಲ್ಲದೆ ಲೋಕಾಯುಕ್ತದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 400 ಪ್ರಕರಣಗಳಿದ್ದು, 150 ಪ್ರಕರಣಗಳನ್ನು ವಿಲೇವಾರಿಗೊಳಿಸಲಾಗುತ್ತದೆ. ಎಂದು ಮಾಹಿತಿ ನೀಡಿದರು.

ಸರ್ಕಾರಿ ಕೆಲಸಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಮಾಡದೆ ಇದ್ದಾಗ ಅಥವಾ ಕರ್ತವ್ಯ ಲೋಪ ಕಂಡುಬಂದರೆ ಜನರು‌ ಲೋಕಾಯುಕ್ತಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವಾಗ ಲೋಕಾಯುಕ್ತ ವೆಬ್‌ಸೈಟ್ ನಲ್ಲಿ‌ ಸಿಗುವ ಅರ್ಜಿಯ ಫಾರ್ಮ್ಯಾಟ್ ಪಡೆದು ಕ್ರಮಬದ್ದವಾಗಿ ಅರ್ಜಿ ಸಲ್ಲಿಸಿದರೆ, ಶೀಘ್ರವಾಗಿ ಅರ್ಜಿ ವಿಲೇವಾರಿಗೆ ಕ್ರಮವಹಿಸಲಾಗುತ್ತದೆ ಎಂದರು.

ಸಮಾಜದಲ್ಲಿ ಜೀವನಕ್ಕೆ ಮೂರು ಹಕ್ಕುಗಳು ಅತ್ಯಂತ ಮುಖ್ಯವಾಗಿದೆ. ದೇಹದ ಸಂರಕ್ಷಣೆ, ಆಸ್ತಿ ಪಾಸ್ತಿ ಸಂರಕ್ಷಣೆ ಹಾಗೂ ಗೌರವ ರಕ್ಷಣೆ ಎಂಬ ಈ ಮೂರು ಹಕ್ಕುಗಳ ಸುತ್ತ ಕಾನೂನುಗಳಿವೆ. ಕಾನೂನುಗಳ ಮೂಲಕ ‌ಹಕ್ಕುಗಳನ್ನು ರಕ್ಷಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಅಧಿಕಾರಿಗಳು ಸಾರ್ವಜನಿಕ‌‌ರ ಕೆಲಸಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು. ಸಮಯಕ್ಕೆ ಸರಿಯಾಗಿ, ನಿಗದಿತ ಅವಧಿಯೊಳಗೆ ಕಾರ್ಯ ನಿರ್ವಹಿಸಬೇಕು. ಮಾಡಬಾರದಂತಹ‌ ಕೆಲಸ ಮಾಡುವುದು. ಮಾಡುವಂತಹ ಕೆಲಸವನ್ನು ‌ಸರಿಯಾದ ರೀತಿ, ಸಮಯದಲ್ಲಿ ‌ಮಾಡದಿರುವುದು. ಮಾಡಲೇಬೇಕಾದ ಕೆಲಸವನ್ನು ಮಾಡದೇ ಇರುವುದರಿಂದ ಜನರ ಸಾಮಾಜಿಕ ಜೀವನದ ಮೇಲೆ ಸಮಸ್ಯೆ ಉಂಟು‌ಮಾಡುತ್ತದೆ. ಇದರಿಂದಾಗಿ ಜನರು ಸಮಸ್ಯೆ ಬಗೆಹರಿಸಲು ಲೋಕಾಯುಕ್ತ ಸೇರಿದಂತೆ ನ್ಯಾಯಾಲಯಕ್ಕೆ ಅಲೆದಾಡುವಂತ ಪರಿಸ್ಥಿತಿ ಎದುರಾಗುತ್ತದೆ. ಆದ್ದರಿಂದ ಅಧಿಕಾರಿಗಳು ಜನರ ಅರ್ಜಿಗಳನ್ನು ಸಮಯಕ್ಕೆ ‌ಸರಿಯಾಗಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜನರ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತದೆ. ಸರ್ಕಾರಿ ಅಧಿಕಾರಿಗಳು ಜನರಿಗೆ ಯೋಜನೆಗಳನ್ನು, ಸೌಲಭ್ಯಗಳನ್ನು ಪ್ರಾಮಾಣಿಕ ಪ್ರಯತ್ನದಿಂದ ಪರಿಣಾಮಕಾರಿಯಾಗಿ ತಲುಪಿಸಬೇಕು. ರಸ್ತೆ, ಕೆರೆ, ಕುಂಟೆ, ಅರಣ್ಯ ಅಭಿವೃದ್ಧಿ ಸೇರಿದಂತೆ ನಾನಾ ಯೋಜನೆಗಳು‌ ಜನರ ಅನುಕೂಲಕ್ಕಾಗಿ ‌ಇರುವುದಾಗಿದೆ. ಅದನ್ನು ಜನರಿಗೆ ತಲುಪಿಸುವ ಕೆಲಸ ಅಧಿಕಾರಿಗಳು ಮಾಡುತ್ತಾರೆ. ಪ್ರತಿ ಶಾಸಕರು, ಅಧಿಕಾರಿಗಳು ಜಪ್ರತಿನಿಧಿಗಳು, ಜನರ ಸೇವಕರೇ ಆಗಿದ್ದಾರೆ. ಪ್ರಸ್ತುತ ಜನಸಂಖ್ಯೆಗೆ ಹೋಲಿಸಿದರೆ ಸರಕಾರಿ ‌ನೌಕರರ ಸಂಖ್ಯೆ ‌ಶೇಕಡಾ ಒಂದಕ್ಕಿಂತ ಕಡಿಮೆ ಇದೆ. ಜನರಿಗೆ ಸರಿಯಾದ ಸಮಯಕ್ಕೆ ಯೋಜನೆ ತಲುಪಬೇಕು. ಇದರಲ್ಲಿ ಏನಾದರೂ ಲೋಪಗಳು ಕಂಡುಬಂದರೆ ಅವರನ್ನು ಪ್ರಶ್ನಿಸಿ ಅವರಿಂದ ಸೂಕ್ತ ಉತ್ತರ ಬರದೆ ಇದ್ದಾಗ ಅವರ ಮೇಲೆ‌ ಕ್ರಮ ಕೈಗೊಳ್ಳುವ ಅಧಿಕಾರ ಲೋಕಾಯುಕ್ತ ಸಂಸ್ಥೆಗೆ ಇದೆ ಎಂದರು.

ಜನರಿಗೆ ವೈಯಕ್ತಿಕ ಹಾಗೂ ಸಾಮಾಜಿಕ ಎಂಬ ಎರಡು ರೀತಿಯ ಸಮಸ್ಯೆಗಳಿರುತ್ತವೆ. ಸಾರ್ವಜನಿಕ ಸೇವೆಯಲ್ಲಿರು ಅವರ ಸಮಸ್ಯೆಗಳನ್ನು ವಿಳಂಬ ಮಾಡದೇ ಶೀಘ್ರವಾಗಿ ಬಗೆಹರಿಸಬೇಕು. ಅಧಿಕಾರಿಗಳು ವಿವೇಕಾನಂದ, ಕುವೆಂಪು, ಡಿ.ವಿ.ಗುಂಡಪ್ಪ ಸೇರಿದಂತೆ ದಾರ್ಶನಿಕರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಉತ್ತಮ ಸಮಾಜ ನಿರ್ಮಾಣ ಮಾಡಲು ಮಾಧ್ಯಮ ಮಿತ್ರರು ಸೇರಿದಂತೆ ಎಲ್ಲರೂ ಕೈ ಜೋಡಿಸಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಈ ವೇಳೆ ಜಿಲ್ಲೆಯ ಸಾರ್ವಜನಿಕರು ಭಾಗವಹಿಸಿ ಅಹವಾಲು, ಕುಂದುಕೊರತೆ ಅರ್ಜಿಗಳನ್ನು ಲೋಕಾಯುಕ್ತ ನ್ಯಾಯಮೂರ್ತಿ ಅವರಿಗೆ ಸಲ್ಲಿಸಿದರು.

ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಶಶಿಕಾಂತ್.ಬಿ.ಭಾವಿಕಟ್ಟಿ, ಉಪ ನಿಬಂಧಕರಾದ ಎಂ.ವಿ.ಚನ್ನಕೇಶವರೆಡ್ಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಶ್ರೀನಾಥ್. ಎಂ.ಜೋಶಿ, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

7 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

10 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

14 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago