ಸರ್ಕಾರಿ ಸೇವೆಯಲ್ಲಿರುವವರು ಪ್ರಾಮಾಣಿಕವಾಗಿ ಕೆಲಸ ಮಾಡಿ- ಉಪಲೋಕಾಯುಕ್ತ ಬಿ. ವೀರಪ್ಪ

ಸರ್ಕಾರಿ ಕೆಲಸ ಎಲ್ಲರಿಗೂ ಸಿಗುವುದಿಲ್ಲ, ಸಿಕ್ಕಂತ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಉಪಲೋಕಾಯುಕ್ತರಾದ ನ್ಯಾ. ಬಿ ವೀರಪ್ಪ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ನಡೆದ ಲೋಕಾಯುಕ್ತ ಸಂಸ್ಥೆಯಲ್ಲಿ ಬಾಕಿ ಇರುವ ದೊಡ್ಡಬಳ್ಳಾಪುರ ತಾಲ್ಲೂಕಿನ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಅವರು ಮಾತನಾಡಿದರು.

ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳದೆ ಪ್ರಾಮಾಣಿಕವಾಗಿ ಕಾನೂನು ಅಡಿಯಲ್ಲಿ ಕೆಲಸ ಮಾಡಿ. ಸರ್ಕಾರಿ ಕೆಲಸದಲ್ಲಿ ಇದ್ದವರು ತಪ್ಪು ಕೆಲಸ ಮಾಡಿ ಪಶ್ಚಾತ್ತಾಪ ಪಡುವುದಕ್ಕಿಂತ ಪ್ರಾಮಾಣಿಕವಾಗಿ ಕೆಲಸ ಮಾಡಿ ನೆಮ್ಮದಿ ಜೀವನ ನಡೆಸುವುದು ಮುಖ್ಯ ಎಂದರು.

ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದ್ದರೆ ಅಥವಾ ಕೇಸ್ ದಾಖಲಿಸಿದ್ದರೆ ಲೋಕಾಯುಕ್ತದಲ್ಲಿ ಕೇಸ್ ದಾಖಲಿಸಲು ಸಾಧ್ಯವಿಲ್ಲ. ಸುಳ್ಳು ಕೇಸ್ ಗಳಿಂದ ನಿಜ ಕೇಸ್ಗಳು ವಿಳಂಬವಾಗುತ್ತಿವೆ. ಇದರಿಂದ ನಿಷ್ಠಾವಂತ ಅಧಿಕಾರಿಗಳು ಕೆಲಸ ಕಾರ್ಯಗಳಿಗೆ ತೊಂದರೆ ಆಗುತ್ತಿವೆ. ಸುಳ್ಳು ಕೇಸ್ ಹಾಕಿದವರಿಗೆ ನಿರ್ದಾಕ್ಷಿಣ್ಯವಾಗಿ ಶಿಕ್ಷೆ ನೀಡಲಾಗುತ್ತದೆ. ಸುಳ್ಳು ಕೇಸ್ ಹಾಕಿದವರಿಗೆ ಆರು ತಿಂಗಳು ಮೂರು ವರ್ಷ ಅಥವಾ ಐದು ವರ್ಷದವರೆಗೆ ದಂಡ ವಿಧಿಸುವ ಸಾಧ್ಯತೆಗಳಿರುತ್ತದೆ ಎಂದರು. ಕಾನೂನು ಯಾರನ್ನು ಬಿಡುವುದಿಲ್ಲ ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದರು.

ಸರ್ಕಾರಿ ಆಸ್ತಿಯನ್ನು ಸಬ್ ರಿಜಿಸ್ಟರ್ ಅಧಿಕಾರಿಗಳು ಬೇರೊಬ್ಬರಿಗೆ ಜಿಪಿಎ (ಜನರಲ್ ಪವರ್ ಆಫ್ ಅಟಾರ್ನಿ) ಅಥವಾ ರಿಜಿಸ್ಟರ್ ಮಾಡಿಕೊಟ್ಟಿರುವುದು ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿದ್ದು ಸಂಬಂಧಪಟ್ಟ ತಹಶೀಲ್ದಾರ್ ಅವರು ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ತಿಯನ್ನು ಜಿಪಿಎ ಮಾಡಿರುವ ಆಸ್ತಿಯನ್ನು ಸರ್ವೇ ಮಾಡಿ ವರದಿ ನೀಡುವಂತೆ ಮತ್ತು ಅಧಿಕಾರಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

ಚಿಕ್ಕ ತುಮಕೂರು ಕೆರೆಗೆ ಕಾರ್ಖಾನೆಗಳಿಂದ ತ್ಯಾಜ್ಯ ಸುರಿಯುತ್ತಿರುವುದರ ಬಗ್ಗೆ ಕ್ರಮವಾಗಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪಿಡಿಒ ಕಾರ್ಖಾನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ತಿಳಿಸಿದರು.

ಮುರುಳಿ ಮೋಹನ್ ಅವರು ಬಾಶೆಟ್ಟಿಹಳ್ಳಿ ಸರ್ವೇ ನಂ 34/3 ಒಂದು ಎಕರೆ 3 ಕುಂಟೆ ಜಾಗದಲ್ಲಿ 5 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡುತ್ತಿದ್ದು ಪಕ್ಕದಲಿ ಪೆಟ್ರೋಲ್ ಬಂಕ್ ಇದ್ದು ಮತ್ತು ಕಟ್ಟಡವು ರಸ್ತೆಯ ಪಕ್ಕಕ್ಕೆ ನಿರ್ಮಾಣಗೊಳ್ಳುತ್ತಿದೆ ಅದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ಸಾರ್ವಜನಿಕ ಹಿತಾಸಕ್ತಿಯಿಂದ ಪ್ರಕರಣ ದಾಖಲಿಸಿದ್ದಾರೆ ಹಾಗಾಗಿ ಸಂಬಂಧಪಟ್ಟ ಮಾಲೀಕರು ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದಿದ್ದಾರೇ ಎಂಬುದನ್ನು ಪರಿಶೀಲಿಸಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಇದ್ದರೆ ಕಟ್ಟಡ ತೆರವುಗೊಳಿಸುವಂತೆ ಕ್ರಮ ವಹಿಸಿ ಎಂದರು.

ತಮಗೆ ಸಂಬಂಧವಿಲ್ಲದಿರುವ ಬೇರೆಯವರ ಪರ ಅರ್ಜಿ ಸಲ್ಲಿಸಿ ಪ್ರಕರಣ ದಾಖಲಿಸಿ ಬಂದಂತಹ ವ್ಯಕ್ತಿಗಳಿಗೆ ನೀವೇಕೆ ಬಂದಿದ್ದೀರಿ ಎಂದು ಪ್ರಶ್ನಿಸಿ, ನಿಮಗೆ ಏನಾದರೂ ಈ ಪ್ರಕ್ರಿಯೆ ನಡೆಸಲು ಅನುಮತಿ ಪತ್ರ ಕೊಟ್ಟಿದ್ದಾರೆ ತೋರಿಸಿ ಎಂದರು ಅನುಮತಿ ಪತ್ರ ನೀಡದವರನ್ನು ತರಾಟೆಗೆ ತೆಗೆದುಕೊಂಡು ಇದು ವೈಯಕ್ತಿಕ ವಿಚಾರ ಸಂಬಂಧಪಟ್ಟ ವ್ಯಕ್ತಿಯೇ ಕೇಸ್ ದಾಖಲಿಸಬೇಕು ಎಂದರು.

ಅಕ್ರಮ ಖಾತೆ ವರ್ಗಾವಣೆ, ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಿ ಭೂ ಒತ್ತುವರಿ, ಜಮೀನು ಸರ್ವೇ ಕಾರ್ಯ, ಸರ್ಕಾರಿ ರಸ್ತೆ, ಸ್ಮಶಾನ ಒತ್ತುವರಿ ಸೇರಿದಂತೆ ವಿವಿಧ ಪ್ರಕರಣಗಳ ವಿಚಾರಣೆ, ವಿಲೇವಾರಿ ನಡೆಸಲಾಯಿತು.

ದೊಡ್ಡಬಳ್ಳಾಪುರದ ಕೆಲವು ಕೆರೆಗಳಿಗೆ ಕಸ ತಂದು ಸುರಿಯುತ್ತಿರುವುದು ಮಾಲಿನ್ಯ ಉಂಟಾಗಿ ಸುತ್ತ ಮುತ್ತಲಿನ ಹಳ್ಳಿಗಳಿಗೆ, ಕೆರೆಗೆ, ಪರಿಸರಕ್ಕೆ ಹಾನಿ ಉಂಟಾಗಿದೆ. ಯಾಕೆ ಇದುವರೆಗೆ ಕ್ರಮ ಆಗಿಲ್ಲ. ಇದರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಕಸ ಸುರಿಯುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಪಂ ಸಿಇಒ ಡಾ.ಕೆ.ಎನ್ ಅನುರಾಧಾ, ಎಸ್ಪಿ ಸಿಕೆ ಬಾಬಾ, ಲೋಕಾಯುಕ್ತ ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕರಾದ ಡಾ.ಕೆ.ವಂಶಿಕೃಷ್ಣ, ಉಪ ನಿಬಂಧಕರಾದ ಅರವಿಂದ್ ಎನ್.ವಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ದೂರುದಾರರು ಹಾಜರಿದ್ದರು.

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

3 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

5 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

7 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

8 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

15 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

15 hours ago