ಸರ್ಕಾರ ದ್ವೇಷ, ಟಾರ್ಗೆಟ್ ರಾಜಕಾರಣ ಮಾಡ್ತಿದೆ: ಇದು ಒಳ್ಳೆದಲ್ಲ- ಯುವ ಶಾಸಕನಿಗೆ ದ್ವೇಷದ ರಾಜಕಾರಣ ಮಾಡೋದು ಹೇಗೆ ಎಂದು ಕಾಂಗ್ರೆಸ್ ಕಲಿಸಿಕೊಡುತ್ತಿದೆ…- ಕಾಂಗ್ರೆಸ್ ವಿರುದ್ಧ ಶಾಸಕ ಧೀರಜ್ ಮುನಿರಾಜ್ ವಾಗ್ದಾಳಿ

ದೊಡ್ಡಬಳ್ಳಾಪುರ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮೇಲೆ ಸಚಿವೆ ಲಕ್ಷೀ ಹೆಬ್ಬಾಳ್ಕರ್ ಮಾಡಿರುವ ಆರೋಪಕ್ಕೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು ತಿರುಗೇಟು ಕೊಟ್ಟಿದ್ದಾರೆ.

ರವಿ ಅಣ್ಣ ಅಲ್ಲಿ ಆ ಮಾತು ಹೇಳಿದ್ದಾರೋ ಬಿಟ್ಟಿದ್ದಾರೋ ಅದನ್ನ ನ್ಯಾಯಾಂಗ ತನಿಖೆ ಮಾಡುತ್ತದೆ. ಅವರು ಅವಹೇಳನಕಾರಿ ಮಾತು ಆಡಿದ್ದರೆ ಅವರಿಗೆ ಶಿಕ್ಷೆ ಆಗುತ್ತದೆ. ಇಲ್ಲ ಸುಳ್ಳು ಆಪಾದನೆ ಮಾಡಿರೋದಿಕ್ಕೆ ಇವರಿಗೆ ಶಿಕ್ಷೆ ಆಗುತ್ತದೆ ಎಂದು ಹೇಳಿದರು.

ಒಂದು ಅವರ ಆರೋಪದ ಮಾತಿನಿಂದ ಅವರನ್ನ ಕಾನೂನಾತ್ಮಕವಾಗಿ ನಡೆಸಿಕೊಂಡರೇ..? ಅಲ್ಲಿ ಇದ್ದಂತಹ ಐಪಿಎಸ್ ಆಫಿಸರ್ ಗೆ ಗೊತ್ತಿಲ್ವಾ..? ಒಬ್ಬ ಎಂಎಲ್ಸಿನಾ ಜನ ಪ್ರತಿನಿಧಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಬೇಕು ಎಂದು..? ಏಕೆ ಅವರು ಬೆಳಗಾಂ ಕೋರ್ಟ್ ಗೆ ಕರೆದುಕೊಂಡು ಹೋದರು…? ಸಂಜೆ 5ರನಂತರ ಕೋರ್ಟ್ ಜಾಮೀನು ಕೊಡುದಿಲ್ಲ ಎಂದು ತೀರ್ಮಾನಿಸಿ ಮೂರು ದಿನ ಜೈಲಿನಲ್ಲಿ ಕೂರಿಸಿಬಿಡೋಣ ಎಂದು, ಬೆಂಗಳೂರಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿ, ಬೆಳಗಾವಿ ಸುತ್ತಾಮುತ್ತಾ ಸುಮಾರು 12ತಾಸು 480ಕಿಮೀ ಸುತ್ತಿ ಸಮಯ ವ್ಯರ್ಥ ಮಾಡಿದ್ದಾರೆ.. ಇದಕ್ಕೆ ಜನ ಹಾಗೂ ಬಿಜೆಪಿ ಕಾರ್ಯಕರ್ತರ ಆಕ್ರೋಶವ್ಯಕ್ತಪಡಿಸಲಾಗುತ್ತಿದೆ. ಘಟನೆಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ದುರುಪಯೋಗಪಡಿಸಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ನವರು ದ್ವೇಷದ ರಾಜಕಾರಣ ಪ್ರಾರಂಭ ಮಾಡಿದ್ದಾರೆ. ನಾನೊಬ್ಬ ಶಾಸಕ ನನ್ನ ಮೇಲೆ ಏಳು ಕೇಸ್ ಹಾಕ್ತಿರಾ. ಕಾಂಗ್ರೆಸ್ ನಾ ಎಂಎಲ್ಎ ಮಗ ಯುವ ಘಟಕದ ಅಧ್ಯಕ್ಷ ಅವನೊಬ್ಬ ರೌಡಿ ಶೀಟರ್ ಅವರ ಮೇಲೆ ಯಾವದೇ ಕೇಸ್ ಬೀಳೋದಿಲ್ಲ ಏಕೆ…? ಈ ಎಲ್ಲಾ ಬೆಳವಣಿಗೆಗಳನ್ನು ಜನ ಸೂಕ್ಷ್ಮವಾಗಿ ಗಮನ ಹರಿಸುತ್ತಿದ್ದಾರೆ. ಇದಕ್ಕೆಲ್ಲಾ ಜನ ತಕ್ಕ ಪಾಠ ಕಲಿಸುತ್ತಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆ ಮಾಡಬಾರದೇ, ಪಿಎಸ್ಐ ಹಾಗೂ ಕೆಪಿಎಸ್ಸಿ ಪರೀಕ್ಷೆ ಒಂದೇ‌ ದಿನ‌ ನಡೆಸಿದರೆ ಉದ್ಯೋಗ‌ ಆಕಾಂಕ್ಷಿಗಳಿಗೆ ತೊಂದರೆ ಆಗೋದಿಲ್ಲವೇ ಇದರ ವಿರುದ್ಧ ಪ್ರತಿಭಟನೆ ಮಾಡಬಾರದೇ ಇದಕ್ಕೆ ನಮ್ಮ ಮೇಲೆ ಕೇಸ್ ಹಾಕ್ತೀರಾ ಎಂದು ಪ್ರಶ್ನೆ ಮಾಡಿದರು.

ರಾಜ್ಯದ ಅಭಿವೃದ್ಧಿ‌ ಕಡೆ ಗಮನ ಹರಿಸಬೇಕೆ ಹೊರೆತು ಅಧಿಕಾರಕ್ಕಾಗಿ ದ್ವೇಷದ ರಾಜಕಾರಣ ಮಾಡಬಾರದು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಿದ್ಧಾಂತವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಲ್ಲರೂ ಕಲಿಯಬೇಕು ಎಂದು ಹೇಳಿದರು.

ಅಧಿಕಾರವನ್ನು ಹೇಗೆ ದುರುಪಯೋಗಪಡಿಸಿಕೊಳ್ಳಬಹುದು ಎಂದು ನನಗೆ ಅಂದರೆ 32 ವರ್ಷದ ಯುವ ಶಾಸಕನಾದ ನನಗೆ ಕಾಂಗ್ರೆಸ್ ಕಲಿಸಿಕೊಡುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Ramesh Babu

Journalist

Recent Posts

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

2 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

14 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

14 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

15 hours ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

15 hours ago

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ  ಟಿ.ಎ. ಶರವಣ ವಾಗ್ದಾಳಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…

15 hours ago