ದೊಡ್ಡಬಳ್ಳಾಪುರ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮೇಲೆ ಸಚಿವೆ ಲಕ್ಷೀ ಹೆಬ್ಬಾಳ್ಕರ್ ಮಾಡಿರುವ ಆರೋಪಕ್ಕೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು ತಿರುಗೇಟು ಕೊಟ್ಟಿದ್ದಾರೆ.
ರವಿ ಅಣ್ಣ ಅಲ್ಲಿ ಆ ಮಾತು ಹೇಳಿದ್ದಾರೋ ಬಿಟ್ಟಿದ್ದಾರೋ ಅದನ್ನ ನ್ಯಾಯಾಂಗ ತನಿಖೆ ಮಾಡುತ್ತದೆ. ಅವರು ಅವಹೇಳನಕಾರಿ ಮಾತು ಆಡಿದ್ದರೆ ಅವರಿಗೆ ಶಿಕ್ಷೆ ಆಗುತ್ತದೆ. ಇಲ್ಲ ಸುಳ್ಳು ಆಪಾದನೆ ಮಾಡಿರೋದಿಕ್ಕೆ ಇವರಿಗೆ ಶಿಕ್ಷೆ ಆಗುತ್ತದೆ ಎಂದು ಹೇಳಿದರು.
ಒಂದು ಅವರ ಆರೋಪದ ಮಾತಿನಿಂದ ಅವರನ್ನ ಕಾನೂನಾತ್ಮಕವಾಗಿ ನಡೆಸಿಕೊಂಡರೇ..? ಅಲ್ಲಿ ಇದ್ದಂತಹ ಐಪಿಎಸ್ ಆಫಿಸರ್ ಗೆ ಗೊತ್ತಿಲ್ವಾ..? ಒಬ್ಬ ಎಂಎಲ್ಸಿನಾ ಜನ ಪ್ರತಿನಿಧಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಬೇಕು ಎಂದು..? ಏಕೆ ಅವರು ಬೆಳಗಾಂ ಕೋರ್ಟ್ ಗೆ ಕರೆದುಕೊಂಡು ಹೋದರು…? ಸಂಜೆ 5ರನಂತರ ಕೋರ್ಟ್ ಜಾಮೀನು ಕೊಡುದಿಲ್ಲ ಎಂದು ತೀರ್ಮಾನಿಸಿ ಮೂರು ದಿನ ಜೈಲಿನಲ್ಲಿ ಕೂರಿಸಿಬಿಡೋಣ ಎಂದು, ಬೆಂಗಳೂರಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿ, ಬೆಳಗಾವಿ ಸುತ್ತಾಮುತ್ತಾ ಸುಮಾರು 12ತಾಸು 480ಕಿಮೀ ಸುತ್ತಿ ಸಮಯ ವ್ಯರ್ಥ ಮಾಡಿದ್ದಾರೆ.. ಇದಕ್ಕೆ ಜನ ಹಾಗೂ ಬಿಜೆಪಿ ಕಾರ್ಯಕರ್ತರ ಆಕ್ರೋಶವ್ಯಕ್ತಪಡಿಸಲಾಗುತ್ತಿದೆ. ಘಟನೆಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ದುರುಪಯೋಗಪಡಿಸಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ನವರು ದ್ವೇಷದ ರಾಜಕಾರಣ ಪ್ರಾರಂಭ ಮಾಡಿದ್ದಾರೆ. ನಾನೊಬ್ಬ ಶಾಸಕ ನನ್ನ ಮೇಲೆ ಏಳು ಕೇಸ್ ಹಾಕ್ತಿರಾ. ಕಾಂಗ್ರೆಸ್ ನಾ ಎಂಎಲ್ಎ ಮಗ ಯುವ ಘಟಕದ ಅಧ್ಯಕ್ಷ ಅವನೊಬ್ಬ ರೌಡಿ ಶೀಟರ್ ಅವರ ಮೇಲೆ ಯಾವದೇ ಕೇಸ್ ಬೀಳೋದಿಲ್ಲ ಏಕೆ…? ಈ ಎಲ್ಲಾ ಬೆಳವಣಿಗೆಗಳನ್ನು ಜನ ಸೂಕ್ಷ್ಮವಾಗಿ ಗಮನ ಹರಿಸುತ್ತಿದ್ದಾರೆ. ಇದಕ್ಕೆಲ್ಲಾ ಜನ ತಕ್ಕ ಪಾಠ ಕಲಿಸುತ್ತಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆ ಮಾಡಬಾರದೇ, ಪಿಎಸ್ಐ ಹಾಗೂ ಕೆಪಿಎಸ್ಸಿ ಪರೀಕ್ಷೆ ಒಂದೇ ದಿನ ನಡೆಸಿದರೆ ಉದ್ಯೋಗ ಆಕಾಂಕ್ಷಿಗಳಿಗೆ ತೊಂದರೆ ಆಗೋದಿಲ್ಲವೇ ಇದರ ವಿರುದ್ಧ ಪ್ರತಿಭಟನೆ ಮಾಡಬಾರದೇ ಇದಕ್ಕೆ ನಮ್ಮ ಮೇಲೆ ಕೇಸ್ ಹಾಕ್ತೀರಾ ಎಂದು ಪ್ರಶ್ನೆ ಮಾಡಿದರು.
ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಬೇಕೆ ಹೊರೆತು ಅಧಿಕಾರಕ್ಕಾಗಿ ದ್ವೇಷದ ರಾಜಕಾರಣ ಮಾಡಬಾರದು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಿದ್ಧಾಂತವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಲ್ಲರೂ ಕಲಿಯಬೇಕು ಎಂದು ಹೇಳಿದರು.
ಅಧಿಕಾರವನ್ನು ಹೇಗೆ ದುರುಪಯೋಗಪಡಿಸಿಕೊಳ್ಳಬಹುದು ಎಂದು ನನಗೆ ಅಂದರೆ 32 ವರ್ಷದ ಯುವ ಶಾಸಕನಾದ ನನಗೆ ಕಾಂಗ್ರೆಸ್ ಕಲಿಸಿಕೊಡುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…