ಸರ್ಕಾರ ದ್ವೇಷ, ಟಾರ್ಗೆಟ್ ರಾಜಕಾರಣ ಮಾಡ್ತಿದೆ: ಇದು ಒಳ್ಳೆದಲ್ಲ- ಯುವ ಶಾಸಕನಿಗೆ ದ್ವೇಷದ ರಾಜಕಾರಣ ಮಾಡೋದು ಹೇಗೆ ಎಂದು ಕಾಂಗ್ರೆಸ್ ಕಲಿಸಿಕೊಡುತ್ತಿದೆ…- ಕಾಂಗ್ರೆಸ್ ವಿರುದ್ಧ ಶಾಸಕ ಧೀರಜ್ ಮುನಿರಾಜ್ ವಾಗ್ದಾಳಿ

ದೊಡ್ಡಬಳ್ಳಾಪುರ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮೇಲೆ ಸಚಿವೆ ಲಕ್ಷೀ ಹೆಬ್ಬಾಳ್ಕರ್ ಮಾಡಿರುವ ಆರೋಪಕ್ಕೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು ತಿರುಗೇಟು ಕೊಟ್ಟಿದ್ದಾರೆ.

ರವಿ ಅಣ್ಣ ಅಲ್ಲಿ ಆ ಮಾತು ಹೇಳಿದ್ದಾರೋ ಬಿಟ್ಟಿದ್ದಾರೋ ಅದನ್ನ ನ್ಯಾಯಾಂಗ ತನಿಖೆ ಮಾಡುತ್ತದೆ. ಅವರು ಅವಹೇಳನಕಾರಿ ಮಾತು ಆಡಿದ್ದರೆ ಅವರಿಗೆ ಶಿಕ್ಷೆ ಆಗುತ್ತದೆ. ಇಲ್ಲ ಸುಳ್ಳು ಆಪಾದನೆ ಮಾಡಿರೋದಿಕ್ಕೆ ಇವರಿಗೆ ಶಿಕ್ಷೆ ಆಗುತ್ತದೆ ಎಂದು ಹೇಳಿದರು.

ಒಂದು ಅವರ ಆರೋಪದ ಮಾತಿನಿಂದ ಅವರನ್ನ ಕಾನೂನಾತ್ಮಕವಾಗಿ ನಡೆಸಿಕೊಂಡರೇ..? ಅಲ್ಲಿ ಇದ್ದಂತಹ ಐಪಿಎಸ್ ಆಫಿಸರ್ ಗೆ ಗೊತ್ತಿಲ್ವಾ..? ಒಬ್ಬ ಎಂಎಲ್ಸಿನಾ ಜನ ಪ್ರತಿನಿಧಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಬೇಕು ಎಂದು..? ಏಕೆ ಅವರು ಬೆಳಗಾಂ ಕೋರ್ಟ್ ಗೆ ಕರೆದುಕೊಂಡು ಹೋದರು…? ಸಂಜೆ 5ರನಂತರ ಕೋರ್ಟ್ ಜಾಮೀನು ಕೊಡುದಿಲ್ಲ ಎಂದು ತೀರ್ಮಾನಿಸಿ ಮೂರು ದಿನ ಜೈಲಿನಲ್ಲಿ ಕೂರಿಸಿಬಿಡೋಣ ಎಂದು, ಬೆಂಗಳೂರಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿ, ಬೆಳಗಾವಿ ಸುತ್ತಾಮುತ್ತಾ ಸುಮಾರು 12ತಾಸು 480ಕಿಮೀ ಸುತ್ತಿ ಸಮಯ ವ್ಯರ್ಥ ಮಾಡಿದ್ದಾರೆ.. ಇದಕ್ಕೆ ಜನ ಹಾಗೂ ಬಿಜೆಪಿ ಕಾರ್ಯಕರ್ತರ ಆಕ್ರೋಶವ್ಯಕ್ತಪಡಿಸಲಾಗುತ್ತಿದೆ. ಘಟನೆಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ದುರುಪಯೋಗಪಡಿಸಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ನವರು ದ್ವೇಷದ ರಾಜಕಾರಣ ಪ್ರಾರಂಭ ಮಾಡಿದ್ದಾರೆ. ನಾನೊಬ್ಬ ಶಾಸಕ ನನ್ನ ಮೇಲೆ ಏಳು ಕೇಸ್ ಹಾಕ್ತಿರಾ. ಕಾಂಗ್ರೆಸ್ ನಾ ಎಂಎಲ್ಎ ಮಗ ಯುವ ಘಟಕದ ಅಧ್ಯಕ್ಷ ಅವನೊಬ್ಬ ರೌಡಿ ಶೀಟರ್ ಅವರ ಮೇಲೆ ಯಾವದೇ ಕೇಸ್ ಬೀಳೋದಿಲ್ಲ ಏಕೆ…? ಈ ಎಲ್ಲಾ ಬೆಳವಣಿಗೆಗಳನ್ನು ಜನ ಸೂಕ್ಷ್ಮವಾಗಿ ಗಮನ ಹರಿಸುತ್ತಿದ್ದಾರೆ. ಇದಕ್ಕೆಲ್ಲಾ ಜನ ತಕ್ಕ ಪಾಠ ಕಲಿಸುತ್ತಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆ ಮಾಡಬಾರದೇ, ಪಿಎಸ್ಐ ಹಾಗೂ ಕೆಪಿಎಸ್ಸಿ ಪರೀಕ್ಷೆ ಒಂದೇ‌ ದಿನ‌ ನಡೆಸಿದರೆ ಉದ್ಯೋಗ‌ ಆಕಾಂಕ್ಷಿಗಳಿಗೆ ತೊಂದರೆ ಆಗೋದಿಲ್ಲವೇ ಇದರ ವಿರುದ್ಧ ಪ್ರತಿಭಟನೆ ಮಾಡಬಾರದೇ ಇದಕ್ಕೆ ನಮ್ಮ ಮೇಲೆ ಕೇಸ್ ಹಾಕ್ತೀರಾ ಎಂದು ಪ್ರಶ್ನೆ ಮಾಡಿದರು.

ರಾಜ್ಯದ ಅಭಿವೃದ್ಧಿ‌ ಕಡೆ ಗಮನ ಹರಿಸಬೇಕೆ ಹೊರೆತು ಅಧಿಕಾರಕ್ಕಾಗಿ ದ್ವೇಷದ ರಾಜಕಾರಣ ಮಾಡಬಾರದು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಿದ್ಧಾಂತವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಲ್ಲರೂ ಕಲಿಯಬೇಕು ಎಂದು ಹೇಳಿದರು.

ಅಧಿಕಾರವನ್ನು ಹೇಗೆ ದುರುಪಯೋಗಪಡಿಸಿಕೊಳ್ಳಬಹುದು ಎಂದು ನನಗೆ ಅಂದರೆ 32 ವರ್ಷದ ಯುವ ಶಾಸಕನಾದ ನನಗೆ ಕಾಂಗ್ರೆಸ್ ಕಲಿಸಿಕೊಡುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 day ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago