ಸರ್ಕಾರ ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಗೆ 10 ರೂ.ಗೆ ಹೆಚ್ಚಿಸಬೇಕು- ರೈತ ಸಂಘ ಒತ್ತಾಯ

ಸರ್ಕಾರ ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಗೆ 10 ರೂಪಾಯಿಗೆ ಹೆಚ್ಚಿಸಿ, ರೈತರಿಂದ ಖರೀದಿ ಮಾಡುವ ಪ್ರತಿ ಲೀಟರ್ ಹಾಲಿಗೆ ಹಾಲಿ ನೀಡುತ್ತಿರುವ 35 ರೂಪಾಯಿಯನ್ನು 50 ರೂಪಾಯಿಗೆ ಹೆಚ್ಚಿಸಬೇಕೆಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತೇಗೌಡ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘದ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬೇಸಿಗೆ ಆರಂಭವಾಗುತ್ತಿದ್ದಂತೆ ಪ್ರತಿ ವರ್ಷ ಬಮೂಲ್ ವತಿಯಿಂದ ಹೆಚ್ಚುವರಿ ಪ್ರತಿ ಲೀಟರ್‌ಗೆ ಸುಮಾರು 3 ರೂಪಾಯಿವರೆಗೂ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಆದರೆ ಈ ಬಾರಿ ಅದನ್ನು ನೀಡಿಲ್ಲ. ಜಾನುವಾರುಗಳ ಆಹಾರದ ಬೆಲೆ ಕೂಡ ಏರಿಕೆಯಾಗಿದೆ. ನಮ್ಮ ಸಮಸ್ಯೆ ಗಳನ್ನು ಯಾಕೆ ಒಕ್ಕೂಟ ಗಣನೆಗೆ ತೆಗೆದುಕೊಳ್ಳುತ್ತಿಲ್ಲ?. ಆಧುನಿಕ ತಂತ್ರಜ್ಞಾನಕ್ಕೆ ನಮ್ಮ ವಿರೋಧವಿಲ್ಲ. ಆದರೆ ಪಾರದರ್ಶಕವಾಗಿ ತಂತ್ರಾಂಶವನ್ನು ಎಲ್ಲಾ ಒಕ್ಕೂಟ ಅಳವಡಿಸಿಕೊಳ್ಳಬೇಕು. ಸರಕಾರ ಪ್ರಣಾಳಿಕೆಯಲ್ಲಿ ಹೇಳಿದಂತೆ ಹಾಲಿನ ಫ್ರೋತ್ಸಾಹ ಧನವನ್ನು 10 ರೂ.ಗೆ ಹೆಚ್ಚಿಸಬೇಕು. ಈಗಾಗಲೇ ಸರಕಾರ ಅಧಿಕಾರಕ್ಕೆ ಬಂದು 2.5 ವರ್ಷ ಕಳೆದಿದೆ. ಯಾವಾಗ ನೀಡುತ್ತೀರಿ. ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಬೇಕು. ಈಗಾಗಲೇ ಹೈನೋದ್ಯಮದಿಂದ ರೈತರು ಹೊರಗುಳಿಯುತ್ತಿದ್ದರೆ. ಹಿಂಡಿ, ಬೂಸ ಬೆಲೆ ಹೆಚ್ಚಾಗಿದೆ. ರೈತರು ಹಾಲು ಕರೆದು ಅಧಿಕಾರಿಗಳು, ಜನಪ್ರತಿನಿಧಿಗಳನ್ನು ಸಾಕುವಂತಾಗಿದೆ ಎಂದು ಕಿಡಿಕಾರಿದರು.

ಬಮೂಲ್ ಅಧಿಕಾರಿಗಳು 1 ರಿಂದ 3 ಲಕ್ಷದವರೆಗೂ ಸಂಬಳ ಪಡೆಯುತ್ತಿದ್ದಾರೆ. ರೈತರಿಂದ ಖರೀದಿಸುವ ದರ ಹಾಗೂ ಗ್ರಾಹಕರಿಗೆ ಮಾರಾಟ ಮಾಡುವ ಹಾಲಿನ ದರದಲ್ಲಿ ಎಲ್ಲೂ 15 ರೂಪಾಯಿ ಅಂತರ ಇಲ್ಲ. ಆದಷ್ಟು ಬೇಗ ಪ್ರೋತ್ಸಾಹ ಧನ ಘೋಷಿಸದಿದ್ದರೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ರೈತ ಸಂಘದ ಜಿಲ್ಲಾಧ್ತಕ್ಷ ಪ್ರಸನ್ನ ಮಾತನಾಡಿ, ಡಾ.ಸ್ವಾಮಿನಾಥನ್ ವರದಿ ನೀಡಿ 20 ವರ್ಷವೇ ಕಳೆದಿದೆ. ರೈತರ ಉತ್ಪಾದನೆಗೆ ಬೆಂಬಲ ಬೆಲೆ ನೀಡಬೇಕು ಎಂದು ವರದಿ ನೀಡಿದ್ದಾರೆ. ಕೇಂದ್ರ ಸರಕಾರ ಕಳೆದ 3 ಅವಧಿಯಲ್ಲೂ ಈ ಬಗ್ಗೆ ಹೇಳಿಕೊಂಡು ಬರುತ್ತಿದೆ. ಆದರೆ ಅದನ್ನು ಜಾರಿ ಮಾಡಿಲ್ಲ. ಈ ಬಾರಿಯ ಬಜೆಟ್‌ನಲ್ಲೂ ಕೂಡ ರೈತರಿಗೆ ಅನುಕೂಲವಾಗುವ ಯೋಜನೆಗಳಿಲ್ಲ. 20 ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ಅದು ಕೂಡ ಪೂರ್ಣವಾಗಿ ಖರೀದಿ ಮಾಡಲು ಸಾಧ್ಯವಾಗಿಲ್ಲ. ಯಾವುದೇ ಉತ್ಪನ್ನ ಖರೀದಿ ಮಾಡಿದರೂ ಅದನ್ನು ಸಂಪೂರ್ಣವಾಗಿ ಖರೀದಿ ಮಾಡಬೇಕು. ಎಲ್ಲಾ ಬೆಳೆಗಳ ನೋಂದಣಿಗೆ ಅವಕಾಶ ನೀಡಬೇಕು ಎಂದರು.

ಜಿಲ್ಲಾಧ್ಯಕ್ಷ ಪ್ರಸನ್ನ. ಉಪಾಧ್ಯಕ್ಷ ಬಚ್ಚೇಗೌಡ, ರೈತ ಮುಖಂಡರಾದ ಮುನಿನಾರಾಯಪ್ಪ, ವಾಸುದೇವ್,
ಬಚ್ಚಹಳ್ಳಿ ಸತೀಶ್, ಶಿವರಾಜು, ತಿಮ್ಮಣ್ಣ, ಕುಮಾರ್, ಮುರುಳಿ, ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

5 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

6 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

7 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

8 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

10 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

16 hours ago