ಸರ್ಕಾರ ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಗೆ 10 ರೂ.ಗೆ ಹೆಚ್ಚಿಸಬೇಕು- ರೈತ ಸಂಘ ಒತ್ತಾಯ

ಸರ್ಕಾರ ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಗೆ 10 ರೂಪಾಯಿಗೆ ಹೆಚ್ಚಿಸಿ, ರೈತರಿಂದ ಖರೀದಿ ಮಾಡುವ ಪ್ರತಿ ಲೀಟರ್ ಹಾಲಿಗೆ ಹಾಲಿ ನೀಡುತ್ತಿರುವ 35 ರೂಪಾಯಿಯನ್ನು 50 ರೂಪಾಯಿಗೆ ಹೆಚ್ಚಿಸಬೇಕೆಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತೇಗೌಡ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘದ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬೇಸಿಗೆ ಆರಂಭವಾಗುತ್ತಿದ್ದಂತೆ ಪ್ರತಿ ವರ್ಷ ಬಮೂಲ್ ವತಿಯಿಂದ ಹೆಚ್ಚುವರಿ ಪ್ರತಿ ಲೀಟರ್‌ಗೆ ಸುಮಾರು 3 ರೂಪಾಯಿವರೆಗೂ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಆದರೆ ಈ ಬಾರಿ ಅದನ್ನು ನೀಡಿಲ್ಲ. ಜಾನುವಾರುಗಳ ಆಹಾರದ ಬೆಲೆ ಕೂಡ ಏರಿಕೆಯಾಗಿದೆ. ನಮ್ಮ ಸಮಸ್ಯೆ ಗಳನ್ನು ಯಾಕೆ ಒಕ್ಕೂಟ ಗಣನೆಗೆ ತೆಗೆದುಕೊಳ್ಳುತ್ತಿಲ್ಲ?. ಆಧುನಿಕ ತಂತ್ರಜ್ಞಾನಕ್ಕೆ ನಮ್ಮ ವಿರೋಧವಿಲ್ಲ. ಆದರೆ ಪಾರದರ್ಶಕವಾಗಿ ತಂತ್ರಾಂಶವನ್ನು ಎಲ್ಲಾ ಒಕ್ಕೂಟ ಅಳವಡಿಸಿಕೊಳ್ಳಬೇಕು. ಸರಕಾರ ಪ್ರಣಾಳಿಕೆಯಲ್ಲಿ ಹೇಳಿದಂತೆ ಹಾಲಿನ ಫ್ರೋತ್ಸಾಹ ಧನವನ್ನು 10 ರೂ.ಗೆ ಹೆಚ್ಚಿಸಬೇಕು. ಈಗಾಗಲೇ ಸರಕಾರ ಅಧಿಕಾರಕ್ಕೆ ಬಂದು 2.5 ವರ್ಷ ಕಳೆದಿದೆ. ಯಾವಾಗ ನೀಡುತ್ತೀರಿ. ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಬೇಕು. ಈಗಾಗಲೇ ಹೈನೋದ್ಯಮದಿಂದ ರೈತರು ಹೊರಗುಳಿಯುತ್ತಿದ್ದರೆ. ಹಿಂಡಿ, ಬೂಸ ಬೆಲೆ ಹೆಚ್ಚಾಗಿದೆ. ರೈತರು ಹಾಲು ಕರೆದು ಅಧಿಕಾರಿಗಳು, ಜನಪ್ರತಿನಿಧಿಗಳನ್ನು ಸಾಕುವಂತಾಗಿದೆ ಎಂದು ಕಿಡಿಕಾರಿದರು.

ಬಮೂಲ್ ಅಧಿಕಾರಿಗಳು 1 ರಿಂದ 3 ಲಕ್ಷದವರೆಗೂ ಸಂಬಳ ಪಡೆಯುತ್ತಿದ್ದಾರೆ. ರೈತರಿಂದ ಖರೀದಿಸುವ ದರ ಹಾಗೂ ಗ್ರಾಹಕರಿಗೆ ಮಾರಾಟ ಮಾಡುವ ಹಾಲಿನ ದರದಲ್ಲಿ ಎಲ್ಲೂ 15 ರೂಪಾಯಿ ಅಂತರ ಇಲ್ಲ. ಆದಷ್ಟು ಬೇಗ ಪ್ರೋತ್ಸಾಹ ಧನ ಘೋಷಿಸದಿದ್ದರೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ರೈತ ಸಂಘದ ಜಿಲ್ಲಾಧ್ತಕ್ಷ ಪ್ರಸನ್ನ ಮಾತನಾಡಿ, ಡಾ.ಸ್ವಾಮಿನಾಥನ್ ವರದಿ ನೀಡಿ 20 ವರ್ಷವೇ ಕಳೆದಿದೆ. ರೈತರ ಉತ್ಪಾದನೆಗೆ ಬೆಂಬಲ ಬೆಲೆ ನೀಡಬೇಕು ಎಂದು ವರದಿ ನೀಡಿದ್ದಾರೆ. ಕೇಂದ್ರ ಸರಕಾರ ಕಳೆದ 3 ಅವಧಿಯಲ್ಲೂ ಈ ಬಗ್ಗೆ ಹೇಳಿಕೊಂಡು ಬರುತ್ತಿದೆ. ಆದರೆ ಅದನ್ನು ಜಾರಿ ಮಾಡಿಲ್ಲ. ಈ ಬಾರಿಯ ಬಜೆಟ್‌ನಲ್ಲೂ ಕೂಡ ರೈತರಿಗೆ ಅನುಕೂಲವಾಗುವ ಯೋಜನೆಗಳಿಲ್ಲ. 20 ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ಅದು ಕೂಡ ಪೂರ್ಣವಾಗಿ ಖರೀದಿ ಮಾಡಲು ಸಾಧ್ಯವಾಗಿಲ್ಲ. ಯಾವುದೇ ಉತ್ಪನ್ನ ಖರೀದಿ ಮಾಡಿದರೂ ಅದನ್ನು ಸಂಪೂರ್ಣವಾಗಿ ಖರೀದಿ ಮಾಡಬೇಕು. ಎಲ್ಲಾ ಬೆಳೆಗಳ ನೋಂದಣಿಗೆ ಅವಕಾಶ ನೀಡಬೇಕು ಎಂದರು.

ಜಿಲ್ಲಾಧ್ಯಕ್ಷ ಪ್ರಸನ್ನ. ಉಪಾಧ್ಯಕ್ಷ ಬಚ್ಚೇಗೌಡ, ರೈತ ಮುಖಂಡರಾದ ಮುನಿನಾರಾಯಪ್ಪ, ವಾಸುದೇವ್,
ಬಚ್ಚಹಳ್ಳಿ ಸತೀಶ್, ಶಿವರಾಜು, ತಿಮ್ಮಣ್ಣ, ಕುಮಾರ್, ಮುರುಳಿ, ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ಪ್ರಸನ್ನ ಲಕ್ಷ್ಮಿವೆಂಕಟರಮಣ ರಥೋತ್ಸವ: ಸಹ್ಯಾದ್ರಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ

ದೊಡ್ಡಬಳ್ಳಾಪುರದ ತೇರಿನ ಬೀದಿಯಲ್ಲಿ ಪ್ರಸನ್ನ ಲಕ್ಷ್ಮಿವೆಂಕಟರಮಣ ರಥೋತ್ಸವ ಫೆ.3ರ ಮಂಗಳವಾರ ಅದ್ಧೂರಿಯಾಗಿ ನಡೆಯಿತು. ರಥೋತ್ಸವ ಅಂಗವಾಗಿ ಸಹ್ಯಾದ್ರಿ ಆಸ್ಪತ್ರೆ ವತಿಯಿಂದ…

14 hours ago

ರೈತರಿಗೆ ಗುಡ್ ನ್ಯೂಸ್: ‘ಪಿ’ ನಂಬರ್ ಜಮೀನುಗಳಿಗೆ ಪೋಡಿ ಭಾಗ್ಯ

ರೈತರಿಗೆ ಗುಡ್ ನ್ಯೂಸ್: 'ಪಿ' ನಂಬರ್ ಜಮೀನುಗಳಿಗೆ ಪೋಡಿ ಭಾಗ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಲಾಗಿದೆ. ಬೆಂಗಳೂರು…

15 hours ago

ಭಾರತದ ರಿಪೋರ್ಟ್ ಕಾರ್ಡ್……..

ಇಲ್ಲಿದೆ ನೋಡಿ ಕೆಲವು ಕುತೂಹಲಕರ ಅಂಕಿಅಂಶಗಳು ಮತ್ತು ನಮ್ಮ ದೇಶದ ರಿಪೋರ್ಟ್ ಕಾರ್ಡ್..... ಇದು ಪಕ್ಷಾತೀವಾಗಿ ದೇಶದ ವಾಸ್ತವ ಪರಿಸ್ಥಿತಿ......‌.‌‌........…

1 day ago

ಯುವ ಕಾಂಗ್ರೆಸ್ ತಾ.ಪ್ರ.ಕಾ ಶಿವಕುಮಾರ್ ಆರ್.ವಿ ಅವರ ಜನ್ಮದಿನಾಚರಣೆ: ಹೂಮಾಲೆ ಹಾಕಿ ಹುಟ್ಟುಹಬ್ಬದ ಶುಭಕೋರಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ

ಯುವ ಕಾಂಗ್ರೆಸ್ ಸಮಿತಿಯ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್.ವಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್,…

2 days ago

ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರ ಜನ್ಮದಿನಾಚರಣೆ: ಹೂಮಾಲೆ ಹಾಕಿ  ಹುಟ್ಟುಹಬ್ಬದ ಶುಭಕೋರಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ

ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್, ಮುಖಂಡರು, ಕಾರ್ಯಕರ್ತರು,…

2 days ago

ಡಯಾಲಿಸಿಸ್ ಅಂತಿಮವಲ್ಲ: ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

ಬೆಂಗಳೂರು , ವೈಟ್‌ಫೀಲ್ದ್‌ - 48 ವರ್ಷದ ಉನ್ನಿಕೃಷ್ಣನ್ ಅವರ ಜೀವನ ಹಲವು ವರ್ಷಗಳಿಂದ ಡಯಾಲಿಸಿಸ್‌, ಔಷಧ ಮತ್ತುಬದುಕುವ ನಿರೀಕ್ಷೆಯಲ್ಲೇ…

2 days ago