ಸರ್ಕಾರ ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಗೆ 10 ರೂ.ಗೆ ಹೆಚ್ಚಿಸಬೇಕು- ರೈತ ಸಂಘ ಒತ್ತಾಯ

ಸರ್ಕಾರ ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಗೆ 10 ರೂಪಾಯಿಗೆ ಹೆಚ್ಚಿಸಿ, ರೈತರಿಂದ ಖರೀದಿ ಮಾಡುವ ಪ್ರತಿ ಲೀಟರ್ ಹಾಲಿಗೆ ಹಾಲಿ ನೀಡುತ್ತಿರುವ 35 ರೂಪಾಯಿಯನ್ನು 50 ರೂಪಾಯಿಗೆ ಹೆಚ್ಚಿಸಬೇಕೆಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತೇಗೌಡ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘದ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬೇಸಿಗೆ ಆರಂಭವಾಗುತ್ತಿದ್ದಂತೆ ಪ್ರತಿ ವರ್ಷ ಬಮೂಲ್ ವತಿಯಿಂದ ಹೆಚ್ಚುವರಿ ಪ್ರತಿ ಲೀಟರ್‌ಗೆ ಸುಮಾರು 3 ರೂಪಾಯಿವರೆಗೂ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಆದರೆ ಈ ಬಾರಿ ಅದನ್ನು ನೀಡಿಲ್ಲ. ಜಾನುವಾರುಗಳ ಆಹಾರದ ಬೆಲೆ ಕೂಡ ಏರಿಕೆಯಾಗಿದೆ. ನಮ್ಮ ಸಮಸ್ಯೆ ಗಳನ್ನು ಯಾಕೆ ಒಕ್ಕೂಟ ಗಣನೆಗೆ ತೆಗೆದುಕೊಳ್ಳುತ್ತಿಲ್ಲ?. ಆಧುನಿಕ ತಂತ್ರಜ್ಞಾನಕ್ಕೆ ನಮ್ಮ ವಿರೋಧವಿಲ್ಲ. ಆದರೆ ಪಾರದರ್ಶಕವಾಗಿ ತಂತ್ರಾಂಶವನ್ನು ಎಲ್ಲಾ ಒಕ್ಕೂಟ ಅಳವಡಿಸಿಕೊಳ್ಳಬೇಕು. ಸರಕಾರ ಪ್ರಣಾಳಿಕೆಯಲ್ಲಿ ಹೇಳಿದಂತೆ ಹಾಲಿನ ಫ್ರೋತ್ಸಾಹ ಧನವನ್ನು 10 ರೂ.ಗೆ ಹೆಚ್ಚಿಸಬೇಕು. ಈಗಾಗಲೇ ಸರಕಾರ ಅಧಿಕಾರಕ್ಕೆ ಬಂದು 2.5 ವರ್ಷ ಕಳೆದಿದೆ. ಯಾವಾಗ ನೀಡುತ್ತೀರಿ. ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಬೇಕು. ಈಗಾಗಲೇ ಹೈನೋದ್ಯಮದಿಂದ ರೈತರು ಹೊರಗುಳಿಯುತ್ತಿದ್ದರೆ. ಹಿಂಡಿ, ಬೂಸ ಬೆಲೆ ಹೆಚ್ಚಾಗಿದೆ. ರೈತರು ಹಾಲು ಕರೆದು ಅಧಿಕಾರಿಗಳು, ಜನಪ್ರತಿನಿಧಿಗಳನ್ನು ಸಾಕುವಂತಾಗಿದೆ ಎಂದು ಕಿಡಿಕಾರಿದರು.

ಬಮೂಲ್ ಅಧಿಕಾರಿಗಳು 1 ರಿಂದ 3 ಲಕ್ಷದವರೆಗೂ ಸಂಬಳ ಪಡೆಯುತ್ತಿದ್ದಾರೆ. ರೈತರಿಂದ ಖರೀದಿಸುವ ದರ ಹಾಗೂ ಗ್ರಾಹಕರಿಗೆ ಮಾರಾಟ ಮಾಡುವ ಹಾಲಿನ ದರದಲ್ಲಿ ಎಲ್ಲೂ 15 ರೂಪಾಯಿ ಅಂತರ ಇಲ್ಲ. ಆದಷ್ಟು ಬೇಗ ಪ್ರೋತ್ಸಾಹ ಧನ ಘೋಷಿಸದಿದ್ದರೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ರೈತ ಸಂಘದ ಜಿಲ್ಲಾಧ್ತಕ್ಷ ಪ್ರಸನ್ನ ಮಾತನಾಡಿ, ಡಾ.ಸ್ವಾಮಿನಾಥನ್ ವರದಿ ನೀಡಿ 20 ವರ್ಷವೇ ಕಳೆದಿದೆ. ರೈತರ ಉತ್ಪಾದನೆಗೆ ಬೆಂಬಲ ಬೆಲೆ ನೀಡಬೇಕು ಎಂದು ವರದಿ ನೀಡಿದ್ದಾರೆ. ಕೇಂದ್ರ ಸರಕಾರ ಕಳೆದ 3 ಅವಧಿಯಲ್ಲೂ ಈ ಬಗ್ಗೆ ಹೇಳಿಕೊಂಡು ಬರುತ್ತಿದೆ. ಆದರೆ ಅದನ್ನು ಜಾರಿ ಮಾಡಿಲ್ಲ. ಈ ಬಾರಿಯ ಬಜೆಟ್‌ನಲ್ಲೂ ಕೂಡ ರೈತರಿಗೆ ಅನುಕೂಲವಾಗುವ ಯೋಜನೆಗಳಿಲ್ಲ. 20 ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ಅದು ಕೂಡ ಪೂರ್ಣವಾಗಿ ಖರೀದಿ ಮಾಡಲು ಸಾಧ್ಯವಾಗಿಲ್ಲ. ಯಾವುದೇ ಉತ್ಪನ್ನ ಖರೀದಿ ಮಾಡಿದರೂ ಅದನ್ನು ಸಂಪೂರ್ಣವಾಗಿ ಖರೀದಿ ಮಾಡಬೇಕು. ಎಲ್ಲಾ ಬೆಳೆಗಳ ನೋಂದಣಿಗೆ ಅವಕಾಶ ನೀಡಬೇಕು ಎಂದರು.

ಜಿಲ್ಲಾಧ್ಯಕ್ಷ ಪ್ರಸನ್ನ. ಉಪಾಧ್ಯಕ್ಷ ಬಚ್ಚೇಗೌಡ, ರೈತ ಮುಖಂಡರಾದ ಮುನಿನಾರಾಯಪ್ಪ, ವಾಸುದೇವ್,
ಬಚ್ಚಹಳ್ಳಿ ಸತೀಶ್, ಶಿವರಾಜು, ತಿಮ್ಮಣ್ಣ, ಕುಮಾರ್, ಮುರುಳಿ, ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

6 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

6 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

11 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago