ಸರ್ಕಾರ ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಗೆ 10 ರೂಪಾಯಿಗೆ ಹೆಚ್ಚಿಸಿ, ರೈತರಿಂದ ಖರೀದಿ ಮಾಡುವ ಪ್ರತಿ ಲೀಟರ್ ಹಾಲಿಗೆ ಹಾಲಿ ನೀಡುತ್ತಿರುವ 35 ರೂಪಾಯಿಯನ್ನು 50 ರೂಪಾಯಿಗೆ ಹೆಚ್ಚಿಸಬೇಕೆಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತೇಗೌಡ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘದ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಬೇಸಿಗೆ ಆರಂಭವಾಗುತ್ತಿದ್ದಂತೆ ಪ್ರತಿ ವರ್ಷ ಬಮೂಲ್ ವತಿಯಿಂದ ಹೆಚ್ಚುವರಿ ಪ್ರತಿ ಲೀಟರ್ಗೆ ಸುಮಾರು 3 ರೂಪಾಯಿವರೆಗೂ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಆದರೆ ಈ ಬಾರಿ ಅದನ್ನು ನೀಡಿಲ್ಲ. ಜಾನುವಾರುಗಳ ಆಹಾರದ ಬೆಲೆ ಕೂಡ ಏರಿಕೆಯಾಗಿದೆ. ನಮ್ಮ ಸಮಸ್ಯೆ ಗಳನ್ನು ಯಾಕೆ ಒಕ್ಕೂಟ ಗಣನೆಗೆ ತೆಗೆದುಕೊಳ್ಳುತ್ತಿಲ್ಲ?. ಆಧುನಿಕ ತಂತ್ರಜ್ಞಾನಕ್ಕೆ ನಮ್ಮ ವಿರೋಧವಿಲ್ಲ. ಆದರೆ ಪಾರದರ್ಶಕವಾಗಿ ತಂತ್ರಾಂಶವನ್ನು ಎಲ್ಲಾ ಒಕ್ಕೂಟ ಅಳವಡಿಸಿಕೊಳ್ಳಬೇಕು. ಸರಕಾರ ಪ್ರಣಾಳಿಕೆಯಲ್ಲಿ ಹೇಳಿದಂತೆ ಹಾಲಿನ ಫ್ರೋತ್ಸಾಹ ಧನವನ್ನು 10 ರೂ.ಗೆ ಹೆಚ್ಚಿಸಬೇಕು. ಈಗಾಗಲೇ ಸರಕಾರ ಅಧಿಕಾರಕ್ಕೆ ಬಂದು 2.5 ವರ್ಷ ಕಳೆದಿದೆ. ಯಾವಾಗ ನೀಡುತ್ತೀರಿ. ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಬೇಕು. ಈಗಾಗಲೇ ಹೈನೋದ್ಯಮದಿಂದ ರೈತರು ಹೊರಗುಳಿಯುತ್ತಿದ್ದರೆ. ಹಿಂಡಿ, ಬೂಸ ಬೆಲೆ ಹೆಚ್ಚಾಗಿದೆ. ರೈತರು ಹಾಲು ಕರೆದು ಅಧಿಕಾರಿಗಳು, ಜನಪ್ರತಿನಿಧಿಗಳನ್ನು ಸಾಕುವಂತಾಗಿದೆ ಎಂದು ಕಿಡಿಕಾರಿದರು.
ಬಮೂಲ್ ಅಧಿಕಾರಿಗಳು 1 ರಿಂದ 3 ಲಕ್ಷದವರೆಗೂ ಸಂಬಳ ಪಡೆಯುತ್ತಿದ್ದಾರೆ. ರೈತರಿಂದ ಖರೀದಿಸುವ ದರ ಹಾಗೂ ಗ್ರಾಹಕರಿಗೆ ಮಾರಾಟ ಮಾಡುವ ಹಾಲಿನ ದರದಲ್ಲಿ ಎಲ್ಲೂ 15 ರೂಪಾಯಿ ಅಂತರ ಇಲ್ಲ. ಆದಷ್ಟು ಬೇಗ ಪ್ರೋತ್ಸಾಹ ಧನ ಘೋಷಿಸದಿದ್ದರೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ರೈತ ಸಂಘದ ಜಿಲ್ಲಾಧ್ತಕ್ಷ ಪ್ರಸನ್ನ ಮಾತನಾಡಿ, ಡಾ.ಸ್ವಾಮಿನಾಥನ್ ವರದಿ ನೀಡಿ 20 ವರ್ಷವೇ ಕಳೆದಿದೆ. ರೈತರ ಉತ್ಪಾದನೆಗೆ ಬೆಂಬಲ ಬೆಲೆ ನೀಡಬೇಕು ಎಂದು ವರದಿ ನೀಡಿದ್ದಾರೆ. ಕೇಂದ್ರ ಸರಕಾರ ಕಳೆದ 3 ಅವಧಿಯಲ್ಲೂ ಈ ಬಗ್ಗೆ ಹೇಳಿಕೊಂಡು ಬರುತ್ತಿದೆ. ಆದರೆ ಅದನ್ನು ಜಾರಿ ಮಾಡಿಲ್ಲ. ಈ ಬಾರಿಯ ಬಜೆಟ್ನಲ್ಲೂ ಕೂಡ ರೈತರಿಗೆ ಅನುಕೂಲವಾಗುವ ಯೋಜನೆಗಳಿಲ್ಲ. 20 ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ಅದು ಕೂಡ ಪೂರ್ಣವಾಗಿ ಖರೀದಿ ಮಾಡಲು ಸಾಧ್ಯವಾಗಿಲ್ಲ. ಯಾವುದೇ ಉತ್ಪನ್ನ ಖರೀದಿ ಮಾಡಿದರೂ ಅದನ್ನು ಸಂಪೂರ್ಣವಾಗಿ ಖರೀದಿ ಮಾಡಬೇಕು. ಎಲ್ಲಾ ಬೆಳೆಗಳ ನೋಂದಣಿಗೆ ಅವಕಾಶ ನೀಡಬೇಕು ಎಂದರು.
ಜಿಲ್ಲಾಧ್ಯಕ್ಷ ಪ್ರಸನ್ನ. ಉಪಾಧ್ಯಕ್ಷ ಬಚ್ಚೇಗೌಡ, ರೈತ ಮುಖಂಡರಾದ ಮುನಿನಾರಾಯಪ್ಪ, ವಾಸುದೇವ್,
ಬಚ್ಚಹಳ್ಳಿ ಸತೀಶ್, ಶಿವರಾಜು, ತಿಮ್ಮಣ್ಣ, ಕುಮಾರ್, ಮುರುಳಿ, ಸೇರಿದಂತೆ ಅನೇಕರು ಹಾಜರಿದ್ದರು.
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ (85) ಅವರು ಶನಿವಾರ ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಭ ನಾಗರಾಜ್ ಅವರಿಗೆ ಗಣ್ಯರು…
ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…