ಸರ್ಕಾರ ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಗೆ 10 ರೂ.ಗೆ ಹೆಚ್ಚಿಸಬೇಕು- ರೈತ ಸಂಘ ಒತ್ತಾಯ

ಸರ್ಕಾರ ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಗೆ 10 ರೂಪಾಯಿಗೆ ಹೆಚ್ಚಿಸಿ, ರೈತರಿಂದ ಖರೀದಿ ಮಾಡುವ ಪ್ರತಿ ಲೀಟರ್ ಹಾಲಿಗೆ ಹಾಲಿ ನೀಡುತ್ತಿರುವ 35 ರೂಪಾಯಿಯನ್ನು 50 ರೂಪಾಯಿಗೆ ಹೆಚ್ಚಿಸಬೇಕೆಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತೇಗೌಡ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘದ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬೇಸಿಗೆ ಆರಂಭವಾಗುತ್ತಿದ್ದಂತೆ ಪ್ರತಿ ವರ್ಷ ಬಮೂಲ್ ವತಿಯಿಂದ ಹೆಚ್ಚುವರಿ ಪ್ರತಿ ಲೀಟರ್‌ಗೆ ಸುಮಾರು 3 ರೂಪಾಯಿವರೆಗೂ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಆದರೆ ಈ ಬಾರಿ ಅದನ್ನು ನೀಡಿಲ್ಲ. ಜಾನುವಾರುಗಳ ಆಹಾರದ ಬೆಲೆ ಕೂಡ ಏರಿಕೆಯಾಗಿದೆ. ನಮ್ಮ ಸಮಸ್ಯೆ ಗಳನ್ನು ಯಾಕೆ ಒಕ್ಕೂಟ ಗಣನೆಗೆ ತೆಗೆದುಕೊಳ್ಳುತ್ತಿಲ್ಲ?. ಆಧುನಿಕ ತಂತ್ರಜ್ಞಾನಕ್ಕೆ ನಮ್ಮ ವಿರೋಧವಿಲ್ಲ. ಆದರೆ ಪಾರದರ್ಶಕವಾಗಿ ತಂತ್ರಾಂಶವನ್ನು ಎಲ್ಲಾ ಒಕ್ಕೂಟ ಅಳವಡಿಸಿಕೊಳ್ಳಬೇಕು. ಸರಕಾರ ಪ್ರಣಾಳಿಕೆಯಲ್ಲಿ ಹೇಳಿದಂತೆ ಹಾಲಿನ ಫ್ರೋತ್ಸಾಹ ಧನವನ್ನು 10 ರೂ.ಗೆ ಹೆಚ್ಚಿಸಬೇಕು. ಈಗಾಗಲೇ ಸರಕಾರ ಅಧಿಕಾರಕ್ಕೆ ಬಂದು 2.5 ವರ್ಷ ಕಳೆದಿದೆ. ಯಾವಾಗ ನೀಡುತ್ತೀರಿ. ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಬೇಕು. ಈಗಾಗಲೇ ಹೈನೋದ್ಯಮದಿಂದ ರೈತರು ಹೊರಗುಳಿಯುತ್ತಿದ್ದರೆ. ಹಿಂಡಿ, ಬೂಸ ಬೆಲೆ ಹೆಚ್ಚಾಗಿದೆ. ರೈತರು ಹಾಲು ಕರೆದು ಅಧಿಕಾರಿಗಳು, ಜನಪ್ರತಿನಿಧಿಗಳನ್ನು ಸಾಕುವಂತಾಗಿದೆ ಎಂದು ಕಿಡಿಕಾರಿದರು.

ಬಮೂಲ್ ಅಧಿಕಾರಿಗಳು 1 ರಿಂದ 3 ಲಕ್ಷದವರೆಗೂ ಸಂಬಳ ಪಡೆಯುತ್ತಿದ್ದಾರೆ. ರೈತರಿಂದ ಖರೀದಿಸುವ ದರ ಹಾಗೂ ಗ್ರಾಹಕರಿಗೆ ಮಾರಾಟ ಮಾಡುವ ಹಾಲಿನ ದರದಲ್ಲಿ ಎಲ್ಲೂ 15 ರೂಪಾಯಿ ಅಂತರ ಇಲ್ಲ. ಆದಷ್ಟು ಬೇಗ ಪ್ರೋತ್ಸಾಹ ಧನ ಘೋಷಿಸದಿದ್ದರೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ರೈತ ಸಂಘದ ಜಿಲ್ಲಾಧ್ತಕ್ಷ ಪ್ರಸನ್ನ ಮಾತನಾಡಿ, ಡಾ.ಸ್ವಾಮಿನಾಥನ್ ವರದಿ ನೀಡಿ 20 ವರ್ಷವೇ ಕಳೆದಿದೆ. ರೈತರ ಉತ್ಪಾದನೆಗೆ ಬೆಂಬಲ ಬೆಲೆ ನೀಡಬೇಕು ಎಂದು ವರದಿ ನೀಡಿದ್ದಾರೆ. ಕೇಂದ್ರ ಸರಕಾರ ಕಳೆದ 3 ಅವಧಿಯಲ್ಲೂ ಈ ಬಗ್ಗೆ ಹೇಳಿಕೊಂಡು ಬರುತ್ತಿದೆ. ಆದರೆ ಅದನ್ನು ಜಾರಿ ಮಾಡಿಲ್ಲ. ಈ ಬಾರಿಯ ಬಜೆಟ್‌ನಲ್ಲೂ ಕೂಡ ರೈತರಿಗೆ ಅನುಕೂಲವಾಗುವ ಯೋಜನೆಗಳಿಲ್ಲ. 20 ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ಅದು ಕೂಡ ಪೂರ್ಣವಾಗಿ ಖರೀದಿ ಮಾಡಲು ಸಾಧ್ಯವಾಗಿಲ್ಲ. ಯಾವುದೇ ಉತ್ಪನ್ನ ಖರೀದಿ ಮಾಡಿದರೂ ಅದನ್ನು ಸಂಪೂರ್ಣವಾಗಿ ಖರೀದಿ ಮಾಡಬೇಕು. ಎಲ್ಲಾ ಬೆಳೆಗಳ ನೋಂದಣಿಗೆ ಅವಕಾಶ ನೀಡಬೇಕು ಎಂದರು.

ಜಿಲ್ಲಾಧ್ಯಕ್ಷ ಪ್ರಸನ್ನ. ಉಪಾಧ್ಯಕ್ಷ ಬಚ್ಚೇಗೌಡ, ರೈತ ಮುಖಂಡರಾದ ಮುನಿನಾರಾಯಪ್ಪ, ವಾಸುದೇವ್,
ಬಚ್ಚಹಳ್ಳಿ ಸತೀಶ್, ಶಿವರಾಜು, ತಿಮ್ಮಣ್ಣ, ಕುಮಾರ್, ಮುರುಳಿ, ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ಲಾರಿ–ಕಾರು ನಡುವೆ ಅಪಘಾತ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಲಾರಿ ಹಾಗೂ ಕಾರು ನಡುವೆ…

5 hours ago

ಮಳೆಗಾಗಿ ಕಾದ ರೈತರಿಗೆ ಹೊಸ ಸಂಕಷ್ಟ: ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದ ಬಿತ್ತನೆ ಸ್ಥಗಿತ: ಬರದ ಭೀತಿ ಬಳಿಕ ಅತಿವೃಷ್ಟಿ ಕಾಟ: ಹೊಲಗಳಲ್ಲಿ ನೀರು ನಿಂತು ಕೃಷಿ ಚಟುವಟಿಕೆ ಅಸ್ತವ್ಯಸ್ತ

ತಿಂಗಳುಗಳ ಕಾಲ ಮಳೆಗಾಗಿ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ರೈತರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಇಷ್ಟು ದಿನ ಸಮರ್ಪಕ…

1 day ago

ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ

ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…

2 days ago

ಬೈಕ್‌–ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ತ್ರಿಬಲ್‌ ರೈಡಿಂಗ್‌ನಲ್ಲಿ ತೆರಳುತ್ತಿದ್ದ ಬೈಕ್‌ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…

2 days ago

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

2 days ago

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

3 days ago