ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ ವಿನಯ್ ಗುರೂಜಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀ ವಿನಯ್ ಗುರೂಜಿ, ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತರು ಸಮೃದ್ಧರಾಗಲಿ, ಬರಪೀಡಿತ ಪ್ರದೇಶಗಳಲ್ಲಿ ಮಳೆ ಸುರಿಯಲಿ ಎಂಬ ಸಂಕಲ್ಪದೊಂದಿಗೆ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದಿದ್ದೇವೆ. ಸುಬ್ರಹ್ಮಣ್ಯ ಎಂದರೆ ಶಕ್ತಿ. ಸ್ಕಂದನನ್ನು ಪ್ರಾರ್ಥಿಸಬೇಕು ಎಂಬ ಭಾವನೆ ಮೂಡಿದ ಕಾರಣ ಶರವಣ ಅವರೊಂದಿಗೆ ಈ ಕ್ಷೇತ್ರಕ್ಕೆ ಬಂದು ಪೂಜೆ ಸಲ್ಲಿಸಿದ್ದೇವೆ. ರೈತರ ಸುಭಿಕ್ಷೆ ಹಾಗೂ ಲೋಕದ ಕಲ್ಯಾಣಕ್ಕಾಗಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ಹೇಳಿದರು.

ರಾಜ್ಯದಲ್ಲಿ ನಡೆಯುತ್ತಿರುವ ರೈತರ ಸಮಸ್ಯೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರ ರೈತರನ್ನು ಕಡೆಗಣಿಸದೆ ಅವರೊಂದಿಗೆ ಕುಳಿತು ಮಾತುಕತೆ ನಡೆಸಬೇಕು. ಎಲ್ಲರ ಸಹಮತ ಪಡೆದು ಮುಂದಿನ ಕ್ರಮ ಕೈಗೊಳ್ಳಬೇಕು. ಶಾಂತಿಯುತ ವಾತಾವರಣದಲ್ಲೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.

Ramesh Babu

Journalist

Recent Posts

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

40 minutes ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

55 minutes ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

1 hour ago

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ  ಟಿ.ಎ. ಶರವಣ ವಾಗ್ದಾಳಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…

2 hours ago

ಅತಿವೇಗ: ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಕಾರು ಡಿಕ್ಕಿ – ಕಾರು ನುಜ್ಜುಗೊಜ್ಜು, ಇಬ್ಬರು ಯುವಕರು ಪವಾಡ ರೀತಿಯಲ್ಲಿ ಪಾರು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ: ಅತಿವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು…

4 hours ago

ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಎಂಎಲ್‌ಸಿ ಟಿ.ಎ. ಶರವಣ, ಅವಧೂತ ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್‌ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…

10 hours ago