ಸರ್ವಧರ್ಮ ಸಮನ್ವಯ ಸಾರುವ ನಿಟ್ಟಿನಲ್ಲಿ ಗೌರಿ ಗಣೇಶ ಹಬ್ಬವನ್ನು ಆಚರಿಸಬೇಕು- ಗ್ರಾಮಾಂತರ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಕುಮಾರ್

ಸರ್ವಧರ್ಮ ಸಮನ್ವಯ ಸಾರುವ ನಿಟ್ಟಿನಲ್ಲಿ ಗೌರಿ ಗಣೇಶ ಹಬ್ಬವನ್ನು ಆಚರಿಸಬೇಕು, ಖಾಸಗಿ, ಸರ್ಕಾರಿ ಜಾಗದಲ್ಲಿ ಪ್ರತಿಷ್ಠಾಪನೆ ಮಾಡಲು ಸಂಬಂಧಿಸಿದ ಇಲಾಖೆಗಳಿಂದ ಪೂರ್ವಾನುಮತಿಯನ್ನು ಪಡೆಯಬೇಕು.‌ ಹಬ್ಬ ಆಚರಣೆಗಳು ಶಾಂತಿ, ಸಹಬಾಳ್ವೆ, ಸೌಹಾರ್ದತೆಯಿಂದ ಒಳಗೊಂಡಿರಬೇಕು. ಯಾರೂ ಸಹ ಕಾನೂನಿನ ಎಲ್ಲೆ ಮೀರಬಾರದು. ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವಂತೆ ನಡೆದುಕೊಳ್ಳುವವರ ಮೇಲೆ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಗ್ರಾಮಾಂತರ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಕುಮಾರ್ ಎಚ್ಚರಿಸಿದರು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಗೌರಿ ಗಣೇಶ ಹಬ್ಬದ ಪ್ರಯುಕ್ತ  ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಆಯೋಜನೆ ಮಾಡಲಾಗಿದ್ದ ಶಾಂತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಹಬ್ಬವನ್ನು ಶಾಂತಿ, ಸಂತೋಷವಾಗಿ ಆಚರಣೆ ಮಾಡಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಎಲ್ಲಾ ಧರ್ಮಗಳು ಶಾಂತಿ-ಸುವ್ಯವಸ್ಥೆ, ಅಹಿಂಸೆ, ಸಹಬಾಳ್ವೆ, ಸೌಹಾರ್ದ ಸೇರಿದಂತೆ ಒಳ್ಳೆ ಗುಣಗಳನ್ನು ಹೇಳುತ್ತವೆ. ಅಂತಹ ಒಳ್ಳೆ ಗುಣಗಳನ್ನು ನಾವು ನಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಹೋದರೆ ನಮ್ಮ ಅಭಿವೃದ್ಧಿ ಜೊತೆಗೆ ಸಮಾಜನೂ ಅಭಿವೃದ್ಧಿ ಆಗುತ್ತದೆ ಎಂದರು.

ಯಾವುದೇ ಹಬ್ಬಗಳ ಆಚರಣೆ ವೇಳೆ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡಬಾರದು. ಶಾಂತಿಯುತವಾಗಿ ಆಚರಿಸಿದಾಗ ಮಾತ್ರ ಭಾವೈಕ್ಯ, ಸಹಭಾಳ್ವೆ ಸಾಧ್ಯ. ಹಾಗಾಗಿ ಶಾಂತಿ ಭಂಗ ತರುವ ಯಾವುದೇ ಹೇಳಿಕೆಗಳು, ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಮಾಡುವುದು. ಅದನ್ನು ಫಾರ್ವಡ್ ಮಾಡಿ ಮತ್ತೊಬ್ಬರಿಗೆ ನೋವುಂಟು ಮಾಡುವುದು ಕಾನೂನಿನಲ್ಲಿ ಅಪರಾಧವಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ದ ನಿರ್ದಾಕ್ಷ್ಯಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರಲ್ಲದೆ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ಈಗಾಗಲೇ ಪೊಲೀಸ್ ಇಲಾಖೆ ಕಣ್ಣಿಟ್ಟಿದೆ ಎಂದು ತಿಳಿಸಿದರು.

ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಲು ಇಲಾಖೆಯಿಂದ ಸಂಪೂರ್ಣ ಬೆಂಬಲವಿದೆ ಎಂದರು.

ನಂತರ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರು ಮಾತನಾಡಿ, ಗಣೇಶ ಕೂರಿಸಲು ಅನುಮತಿ ಕಡ್ಡಾಯವಾಗಿರುತ್ತದೆ. ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ಜಾಗದಲ್ಲಿ ಗಣೇಶ ಕೂರಿಸುವಂತಿಲ್ಲ. ಗಣೇಶ ಮೂರ್ತಿ ವಿಸರ್ಜನೆ ವೇಳೆ ಬಹಳ ಎಚ್ಚರಿಕೆಯಿಂದ ಇರಬೇಕು. ಗಣೇಶ ಕೂರಿಸಿರುವ ಸ್ಥಳದಲ್ಲಿ ಸಿಸಿಟಿವಿ ಅಳವಡಿಸಿಕೊಳ್ಳಬೇಕು. ವಿದ್ಯುತ್ ಲೈನ್ ಗೆ ಎಟಕುವಂತೆ ಪೆಂಡಲ್, ಚಪ್ಪರ ಹಾಕಬಾರದು, ಜೊತೆಗೆ ಮೆರವಣಿಗೆ ಸಂದರ್ಭದಲ್ಲಿ ವಿದ್ಯುತ್ ಲೈನ್ ಇರುವುದನ್ನು ಪರಿಶೀಲಕೊಳ್ಳುತ್ತಿರಬೇಕು. ಹಬ್ಬವನ್ನು ಶಾಂತ ರೀತಿಯಿಂದ ಆಚರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

11 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

12 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

13 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

13 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

20 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago