Categories: ಕೋಲಾರ

ಸರ್ವೇ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ಲಕ್ಷಾಂತರ ಅರ್ಜಿಗಳ ಮುಕ್ತಿಗೆ ರೈತ ಸಂಘದಿಂದ ಮನವಿ

ಕೋಲಾರ: ಜಿಲ್ಲಾದ್ಯಂತ ಸರ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಇಲಾಖೆಗಳ ಟೇಬಲ್ ಮೇಲೆ ದೂಳು ಹಿಡಿಯುತ್ತಿರುವ ಲಕ್ಷಾಂತರ ಅರ್ಜಿಗಳಿಗೆ ಮುಕ್ತಿ ನೀಡಬೇಕೆಂದು ರೈತ ಸಂಘದಿಂದ ಸರ್ವೇ ಇಲಾಖೆ ಉಪ ನಿರ್ದೇಶಕ ಸಂಜಯ್ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.

ಕೋಲಾರ ಜಿಲ್ಲೆಯ ಸರ್ವೇ ಇಲಾಖೆಗೆ ಅಧಿಕಾರಿಗಳು ಬರಬೇಕಾದರೆ ಭಯಬೀತರಾಗಿದ್ದಾರೆ. ಕಾರಣ ಗೊತ್ತಾಗುತ್ತಿಲ್ಲ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ದೂಳು ಹಿಡಿಯುತ್ತಿರುವ ಲಕ್ಷಾಂತರ ಅರ್ಜಿಗಳನ್ನು ವಿಲೇವಾರಿ ಮಾಡಿ 30 ದಿನಗಳೊಳಗೆ ಸಮಸ್ಯೆಯನ್ನು ಬಗೆ ಹರಿಸಬೇಕೆಂದು ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಒತ್ತಾಯಿಸಿದರು.

ಇ-ಆಸ್ತಿ ಖಾತೆ ಬದಲಾವಣೆ ಆಸ್ತಿ ವರ್ಗಾವಣೆಗೆ ಸರ್ವೇಸ್ಕೆಚ್ ಕಡ್ಡಾಯವಾಗಿದೆ. ಸಕಾಲದಲ್ಲಿ ಸರ್ವೆಕಾರ್ಯ ನಡೆಯದ ಕಾರಣ ರೈತರಿಗೆ ಅಗತ್ಯ ದಾಖಲೆಗಳು ದೊರೆಯದಾಗಿವೆ. ಜೊತೆಗೆ ನಕ್ಷೆ ಹದ್ದುಬಸ್ತು ಗುರುತಿಸುವಿಕೆ ಜಮೀನು ಖರೀದಿ ಮಾರಾಟ ದಾನ ನೀಡಿಕೆ ಪೋಡಿ ಪ್ರಕ್ರಿಯೆ ಪ್ರಮಾಣ ಕಡಿಮೆಯಾಗಿದೆ. ಹಿಸ್ಸಾ ಪ್ರಕ್ರಿಯೆ ಹಕ್ಕು ಬದಲಾವಣೆಗೂ ತೊಂದರೆಗಳಾಗುತ್ತಿದ್ದು ರೈತರು ತೊಂದರೆ ಅನುಭವಿಸುತ್ತಿದ್ದಾರೆ.

ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ರೈತರು ಸಲ್ಲಿಸಿರುವ ಸಾವಿರಾರು ಅರ್ಜಿಗಳು ಬಾಕಿ ಉಳಿದಿವೆ. ಸರ್ವೆಸ್ಕೆಚ್‌ಗೆ ಹೆಚ್ಚಿನ ರೈತರು ಅರ್ಜಿ ಸಲ್ಲಿಸಿದ್ದು, ಮೇಲ್ವಿಚಾರಕರ ಟೇಬಲ್‌ನಲ್ಲಿಯೇ ದೂಳು ಹಿಡಿಯುತ್ತಿದೆ. ಆರ್.ಟಿ.ಸಿ. ಹಾಗೂ ಪಿ ನಂಬರ್ ದುರಸ್ಥಿಗೆ ಸಾವಿರಾರು ರೈತರು ಅರ್ಜಿ ಸಲ್ಲಿಸಿ, ತಹಸೀಲ್ದಾರ್ ರವರ ಕಚೇರಿ ಬಳಿ ಜಾತಕ ಪಕ್ಷಗಳಂತೆ ಕಾದು ಸಾಕಾಗಿದೆ ಎಂದು ಅಧಿಕಾರಿಗಳ ವಿರುದ್ದ ಆರೋಪ ಮಾಡಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಕೋಟಿ ಕೋಟಿ ಹಣದ ಆದಾಯ ಬರುವ ಪಿನಂಬರ್ ಮುಕ್ತಿಗೊಳಿಸಲು ರಾಜಕಾರಣಿಗಳ ಹಾಗೂ ರಿಯಲ್ ಎಸ್ಟೇಟ್ ಉದ್ದಿಮೆಗಳ ಜಮೀನುಗಳನ್ನು ಸರ್ವೆ ಮಾಡಲು ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದಿಲ್ಲ. ಆದರೆ ಬಡ ರೈತರು ಸಲ್ಲಿಸಿರುವ ಅರ್ಜಿ ವಿಲೇವಾರಿ ಮಾಡಲು ಸಿಬ್ಬಂದಿ ಕೊರತೆ ಹಾಗೂ ನಿಯಮದ ಪ್ರಕಾರ ಆನ್‌ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕಾದ ಪರಿಸ್ಥಿತಿ ಇಲಾಖೆಯಲ್ಲಿದೆ ಎಂದು ಅಸಮದಾನ ವ್ಯಕ್ತಪಡಿಸಿದರು.

ಸರ್ಕಾರಗಳಲ್ಲಿ ಮುಖ್ಯಮಂತ್ರಿಗಳು, ಕಂದಾಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಬದಲಾವಣೆ ಆಗುತ್ತಿರುತ್ತಾರೆ. ಆದರೆ ಜಿಲ್ಲೆಯ ಜನರ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತಿಲ್ಲ. ಪ್ರತಿಯೊಂದು ಸಮಸ್ಯೆಗೂ ಬೀದಿಗೆ ಬಂದು ಹೋರಾಟ ಮಾಡುವ ಪರಿಸ್ಥಿತಿ ಇದೆ. ಅದರಲ್ಲಿ ಪ್ರಮುಖವಾಗಿ ರೈತರ ಒಡನಾಡಿಯಾಗಿರುವ ಸರ್ವೆ ಇಲಾಖೆಯಲ್ಲಿನ ಹತ್ತಾರು ವರ್ಷಗಳಲ್ಲಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತಿಲ್ಲ. ಇತ್ತೀಚೆಗೆ ಇಲಾಖೆಯಲ್ಲಿ ಸಿಬ್ಬಂದಿ ಖಾಲಿ ಇದೆ ಎಂಬ ನೆಪದಲ್ಲಿ ರೈತರು ಮತ್ತು ಜನ ಸಾಮಾನ್ಯರು ಕೃಷಿ ಹಾಗೂ ವಿವಿಧ ಆಸ್ತಿಗಳ ಹದ್ದುಬಸ್ತು ಬಿನ್ ಸೇತ್ಕೀ, ತಾತ್ಕಾಲಿ ಪೋಡಿ ಇ-ಸ್ವತ್ತು ಸೇರಿದಂತೆ ಜಮೀನು ಸರ್ವೆಗಾಗಿ ಸಾವಿರಾರು ಜನ ರೈತರು ಅರ್ಜಿ ಸಲ್ಲಿಸಿ ವರ್ಷಾನುಗಟ್ಟಲೆ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದರೂ ಇದುವರೆಗೂ ಅರ್ಜಿ ವಿಲೇವರಿ ಆಗುತ್ತಿಲ್ಲ. ಅರ್ಜಿದಾರರು ಇಲಾಖೆಗೆ ಅಲೆದಾಡಿ ಸುಸ್ತಾಗಿ ಸರ್ವೇ ಇಲಾಖೆ ಜಿಲ್ಲೆಯ ಜನರ ಪಾಲಿಗೆ ಇಲ್ಲದಂತಾಗಿದೆ ಎಂದು ಇಡೀ ಶಾಪವಾಗುತ್ತಿದ್ದಾರೆ. ಅಧಿಕಾರಿಗಳ ವಿರುದ್ದ ಆಕ್ರೋಷ್ಯ ವ್ಯಕ್ತಪಡಿಸಿದರು.

ರೈತರು ಸರ್ವೆ ಇಲಾಖೆಗೆ ಸಲ್ಲಿಸುವ ಯಾವುದೇ ಅರ್ಜಿ 30 ದಿನಗಳಲ್ಲಿ ವಿಲೆವಾರಿಯಾಗಿ ಅರ್ಜಿಯ ಸಮಸ್ಯೆ ಇತ್ಯರ್ತವಾಗಬೇಕು. ಆದರೆ ಇಲಾಖೆಯಲ್ಲಿನ ಸಿಬ್ಬಂದಿ ಕೊರೆತೆಯಿಂದ ಇರುವ ಸಿಬ್ಬಂದಿಗೆ ಮಾನಸಿಕ ಹಾಗೂ ಕೆಲಸದ ಒತ್ತಡ ಮತ್ತು ಒತ್ತುವರಿಯಾಗಿರುವ ಸರ್ಕಾರಿ ಕೆರೆ, ರಾಜಕಾಲುವೆ, ಗುಂಡುತೋಪು, ಹೈಕೋರ್ಟ್ ಆದೇಶದಂತೆ ಒತ್ತುವರಿ ತೆರವುಗೊಳಿಸಲು ಇರುವ ಸಿಬ್ಬಂದಿ ಸೀಮಿತವಾಗಿದ್ದಾರೆ. ಮತ್ತೊಂದಡೆ ಕೈಗಾರಿಕಾ ಪ್ರದೇಶದ ರಸ್ತೆ ಅಭಿವೃದ್ದಿ ಜಮೀನು ವಿವಾದಗಳು, ಸ್ಮಶಾನ ರಸ್ತೆಗಳ ಒತ್ತುವರಿ ತೆರವುಗೊಳಿಸಲು ಕೆಲವು ಸರ್ವೆ ಇಲಾಖೆ ಅಧಿಕಾರಿಗಳು ಸೀಮಿತವಾಗಿದೆ. ಒಟ್ಟಾರೆಯಾಗಿ ಜಿಲ್ಲಾದ್ಯಂತ ಸರ್ವೇ ಇಲಾಖೆ ಎಂಬುದು ರೈತರ ಹಾಗೂ ಜನ ಸಾಮಾನ್ಯರ ಪಾಲಿಗೆ ಇದ್ದು ಇಲ್ಲದಂತ ಇಲಾಖೆಯಾಗಿ ಮಾರ್ಪಟ್ಟಿದೆ ಕಂದಾಯ ಸಚಿವರು ಜಿಲ್ಲಾದ್ಯಂತ ಖಾಲಿ ಇರುವ ಸರ್ವೇ ಇಲಾಖೆ ಹುದ್ದೆಗಳನ್ನು ಭರ್ತಿ ಮಾಡಿ ಟೇಬಲ್‌ಗಳಲ್ಲಿ ದೂಳು ಹಿಡಿಯುತ್ತಿರುವ ಲಕ್ಷಾಂತರ ಅರ್ಜಿಗಳಿಗೆ ಮುಕ್ತಿ ಕೊಡಿಸಿ ವರ್ಷಾನುಗಟ್ಟಲೆ ರೈತರು ಹಾಗೂ ಜನ ಸಾಮಾನ್ಯರು ಇಲಾಖೆಗೆ ಅಲೆದಾಡುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕೆಂದು ಮಾನ್ಯರಲ್ಲಿ ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪ ನಿರ್ದೇಶಕ ಸಂಜಯ್‌ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ರೈತರ ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಆಗುತ್ತಿಲ್ಲ. ಸರ್ಕಾರಕ್ಕೆ ನಿಮ್ಮ ಮನವಿಯನ್ನು ತಲುಪಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಮನವಿ ನೀಡುವಾಗ ಮಂಗಸಂದ್ರ ತಿಮ್ಮಣ್ಣ, ಸುಪ್ರೀಂ ಚಲ, ಶಿವಾರೆಡ್ಡಿ, ಹರೀಶ್, ಯಲ್ಲಪ್ಪ ಇತರರಿದ್ದರು.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

5 minutes ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

2 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

2 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

4 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

12 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

21 hours ago