Categories: ಕೋಲಾರ

ಸರ್ವೇ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ಲಕ್ಷಾಂತರ ಅರ್ಜಿಗಳ ಮುಕ್ತಿಗೆ ರೈತ ಸಂಘದಿಂದ ಮನವಿ

ಕೋಲಾರ: ಜಿಲ್ಲಾದ್ಯಂತ ಸರ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಇಲಾಖೆಗಳ ಟೇಬಲ್ ಮೇಲೆ ದೂಳು ಹಿಡಿಯುತ್ತಿರುವ ಲಕ್ಷಾಂತರ ಅರ್ಜಿಗಳಿಗೆ ಮುಕ್ತಿ ನೀಡಬೇಕೆಂದು ರೈತ ಸಂಘದಿಂದ ಸರ್ವೇ ಇಲಾಖೆ ಉಪ ನಿರ್ದೇಶಕ ಸಂಜಯ್ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.

ಕೋಲಾರ ಜಿಲ್ಲೆಯ ಸರ್ವೇ ಇಲಾಖೆಗೆ ಅಧಿಕಾರಿಗಳು ಬರಬೇಕಾದರೆ ಭಯಬೀತರಾಗಿದ್ದಾರೆ. ಕಾರಣ ಗೊತ್ತಾಗುತ್ತಿಲ್ಲ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ದೂಳು ಹಿಡಿಯುತ್ತಿರುವ ಲಕ್ಷಾಂತರ ಅರ್ಜಿಗಳನ್ನು ವಿಲೇವಾರಿ ಮಾಡಿ 30 ದಿನಗಳೊಳಗೆ ಸಮಸ್ಯೆಯನ್ನು ಬಗೆ ಹರಿಸಬೇಕೆಂದು ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಒತ್ತಾಯಿಸಿದರು.

ಇ-ಆಸ್ತಿ ಖಾತೆ ಬದಲಾವಣೆ ಆಸ್ತಿ ವರ್ಗಾವಣೆಗೆ ಸರ್ವೇಸ್ಕೆಚ್ ಕಡ್ಡಾಯವಾಗಿದೆ. ಸಕಾಲದಲ್ಲಿ ಸರ್ವೆಕಾರ್ಯ ನಡೆಯದ ಕಾರಣ ರೈತರಿಗೆ ಅಗತ್ಯ ದಾಖಲೆಗಳು ದೊರೆಯದಾಗಿವೆ. ಜೊತೆಗೆ ನಕ್ಷೆ ಹದ್ದುಬಸ್ತು ಗುರುತಿಸುವಿಕೆ ಜಮೀನು ಖರೀದಿ ಮಾರಾಟ ದಾನ ನೀಡಿಕೆ ಪೋಡಿ ಪ್ರಕ್ರಿಯೆ ಪ್ರಮಾಣ ಕಡಿಮೆಯಾಗಿದೆ. ಹಿಸ್ಸಾ ಪ್ರಕ್ರಿಯೆ ಹಕ್ಕು ಬದಲಾವಣೆಗೂ ತೊಂದರೆಗಳಾಗುತ್ತಿದ್ದು ರೈತರು ತೊಂದರೆ ಅನುಭವಿಸುತ್ತಿದ್ದಾರೆ.

ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ರೈತರು ಸಲ್ಲಿಸಿರುವ ಸಾವಿರಾರು ಅರ್ಜಿಗಳು ಬಾಕಿ ಉಳಿದಿವೆ. ಸರ್ವೆಸ್ಕೆಚ್‌ಗೆ ಹೆಚ್ಚಿನ ರೈತರು ಅರ್ಜಿ ಸಲ್ಲಿಸಿದ್ದು, ಮೇಲ್ವಿಚಾರಕರ ಟೇಬಲ್‌ನಲ್ಲಿಯೇ ದೂಳು ಹಿಡಿಯುತ್ತಿದೆ. ಆರ್.ಟಿ.ಸಿ. ಹಾಗೂ ಪಿ ನಂಬರ್ ದುರಸ್ಥಿಗೆ ಸಾವಿರಾರು ರೈತರು ಅರ್ಜಿ ಸಲ್ಲಿಸಿ, ತಹಸೀಲ್ದಾರ್ ರವರ ಕಚೇರಿ ಬಳಿ ಜಾತಕ ಪಕ್ಷಗಳಂತೆ ಕಾದು ಸಾಕಾಗಿದೆ ಎಂದು ಅಧಿಕಾರಿಗಳ ವಿರುದ್ದ ಆರೋಪ ಮಾಡಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಕೋಟಿ ಕೋಟಿ ಹಣದ ಆದಾಯ ಬರುವ ಪಿನಂಬರ್ ಮುಕ್ತಿಗೊಳಿಸಲು ರಾಜಕಾರಣಿಗಳ ಹಾಗೂ ರಿಯಲ್ ಎಸ್ಟೇಟ್ ಉದ್ದಿಮೆಗಳ ಜಮೀನುಗಳನ್ನು ಸರ್ವೆ ಮಾಡಲು ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದಿಲ್ಲ. ಆದರೆ ಬಡ ರೈತರು ಸಲ್ಲಿಸಿರುವ ಅರ್ಜಿ ವಿಲೇವಾರಿ ಮಾಡಲು ಸಿಬ್ಬಂದಿ ಕೊರತೆ ಹಾಗೂ ನಿಯಮದ ಪ್ರಕಾರ ಆನ್‌ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕಾದ ಪರಿಸ್ಥಿತಿ ಇಲಾಖೆಯಲ್ಲಿದೆ ಎಂದು ಅಸಮದಾನ ವ್ಯಕ್ತಪಡಿಸಿದರು.

ಸರ್ಕಾರಗಳಲ್ಲಿ ಮುಖ್ಯಮಂತ್ರಿಗಳು, ಕಂದಾಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಬದಲಾವಣೆ ಆಗುತ್ತಿರುತ್ತಾರೆ. ಆದರೆ ಜಿಲ್ಲೆಯ ಜನರ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತಿಲ್ಲ. ಪ್ರತಿಯೊಂದು ಸಮಸ್ಯೆಗೂ ಬೀದಿಗೆ ಬಂದು ಹೋರಾಟ ಮಾಡುವ ಪರಿಸ್ಥಿತಿ ಇದೆ. ಅದರಲ್ಲಿ ಪ್ರಮುಖವಾಗಿ ರೈತರ ಒಡನಾಡಿಯಾಗಿರುವ ಸರ್ವೆ ಇಲಾಖೆಯಲ್ಲಿನ ಹತ್ತಾರು ವರ್ಷಗಳಲ್ಲಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತಿಲ್ಲ. ಇತ್ತೀಚೆಗೆ ಇಲಾಖೆಯಲ್ಲಿ ಸಿಬ್ಬಂದಿ ಖಾಲಿ ಇದೆ ಎಂಬ ನೆಪದಲ್ಲಿ ರೈತರು ಮತ್ತು ಜನ ಸಾಮಾನ್ಯರು ಕೃಷಿ ಹಾಗೂ ವಿವಿಧ ಆಸ್ತಿಗಳ ಹದ್ದುಬಸ್ತು ಬಿನ್ ಸೇತ್ಕೀ, ತಾತ್ಕಾಲಿ ಪೋಡಿ ಇ-ಸ್ವತ್ತು ಸೇರಿದಂತೆ ಜಮೀನು ಸರ್ವೆಗಾಗಿ ಸಾವಿರಾರು ಜನ ರೈತರು ಅರ್ಜಿ ಸಲ್ಲಿಸಿ ವರ್ಷಾನುಗಟ್ಟಲೆ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದರೂ ಇದುವರೆಗೂ ಅರ್ಜಿ ವಿಲೇವರಿ ಆಗುತ್ತಿಲ್ಲ. ಅರ್ಜಿದಾರರು ಇಲಾಖೆಗೆ ಅಲೆದಾಡಿ ಸುಸ್ತಾಗಿ ಸರ್ವೇ ಇಲಾಖೆ ಜಿಲ್ಲೆಯ ಜನರ ಪಾಲಿಗೆ ಇಲ್ಲದಂತಾಗಿದೆ ಎಂದು ಇಡೀ ಶಾಪವಾಗುತ್ತಿದ್ದಾರೆ. ಅಧಿಕಾರಿಗಳ ವಿರುದ್ದ ಆಕ್ರೋಷ್ಯ ವ್ಯಕ್ತಪಡಿಸಿದರು.

ರೈತರು ಸರ್ವೆ ಇಲಾಖೆಗೆ ಸಲ್ಲಿಸುವ ಯಾವುದೇ ಅರ್ಜಿ 30 ದಿನಗಳಲ್ಲಿ ವಿಲೆವಾರಿಯಾಗಿ ಅರ್ಜಿಯ ಸಮಸ್ಯೆ ಇತ್ಯರ್ತವಾಗಬೇಕು. ಆದರೆ ಇಲಾಖೆಯಲ್ಲಿನ ಸಿಬ್ಬಂದಿ ಕೊರೆತೆಯಿಂದ ಇರುವ ಸಿಬ್ಬಂದಿಗೆ ಮಾನಸಿಕ ಹಾಗೂ ಕೆಲಸದ ಒತ್ತಡ ಮತ್ತು ಒತ್ತುವರಿಯಾಗಿರುವ ಸರ್ಕಾರಿ ಕೆರೆ, ರಾಜಕಾಲುವೆ, ಗುಂಡುತೋಪು, ಹೈಕೋರ್ಟ್ ಆದೇಶದಂತೆ ಒತ್ತುವರಿ ತೆರವುಗೊಳಿಸಲು ಇರುವ ಸಿಬ್ಬಂದಿ ಸೀಮಿತವಾಗಿದ್ದಾರೆ. ಮತ್ತೊಂದಡೆ ಕೈಗಾರಿಕಾ ಪ್ರದೇಶದ ರಸ್ತೆ ಅಭಿವೃದ್ದಿ ಜಮೀನು ವಿವಾದಗಳು, ಸ್ಮಶಾನ ರಸ್ತೆಗಳ ಒತ್ತುವರಿ ತೆರವುಗೊಳಿಸಲು ಕೆಲವು ಸರ್ವೆ ಇಲಾಖೆ ಅಧಿಕಾರಿಗಳು ಸೀಮಿತವಾಗಿದೆ. ಒಟ್ಟಾರೆಯಾಗಿ ಜಿಲ್ಲಾದ್ಯಂತ ಸರ್ವೇ ಇಲಾಖೆ ಎಂಬುದು ರೈತರ ಹಾಗೂ ಜನ ಸಾಮಾನ್ಯರ ಪಾಲಿಗೆ ಇದ್ದು ಇಲ್ಲದಂತ ಇಲಾಖೆಯಾಗಿ ಮಾರ್ಪಟ್ಟಿದೆ ಕಂದಾಯ ಸಚಿವರು ಜಿಲ್ಲಾದ್ಯಂತ ಖಾಲಿ ಇರುವ ಸರ್ವೇ ಇಲಾಖೆ ಹುದ್ದೆಗಳನ್ನು ಭರ್ತಿ ಮಾಡಿ ಟೇಬಲ್‌ಗಳಲ್ಲಿ ದೂಳು ಹಿಡಿಯುತ್ತಿರುವ ಲಕ್ಷಾಂತರ ಅರ್ಜಿಗಳಿಗೆ ಮುಕ್ತಿ ಕೊಡಿಸಿ ವರ್ಷಾನುಗಟ್ಟಲೆ ರೈತರು ಹಾಗೂ ಜನ ಸಾಮಾನ್ಯರು ಇಲಾಖೆಗೆ ಅಲೆದಾಡುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕೆಂದು ಮಾನ್ಯರಲ್ಲಿ ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪ ನಿರ್ದೇಶಕ ಸಂಜಯ್‌ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ರೈತರ ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಆಗುತ್ತಿಲ್ಲ. ಸರ್ಕಾರಕ್ಕೆ ನಿಮ್ಮ ಮನವಿಯನ್ನು ತಲುಪಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಮನವಿ ನೀಡುವಾಗ ಮಂಗಸಂದ್ರ ತಿಮ್ಮಣ್ಣ, ಸುಪ್ರೀಂ ಚಲ, ಶಿವಾರೆಡ್ಡಿ, ಹರೀಶ್, ಯಲ್ಲಪ್ಪ ಇತರರಿದ್ದರು.

Ramesh Babu

Journalist

Share
Published by
Ramesh Babu

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

2 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

18 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago