Categories: ಕೋಲಾರ

ಸರ್ವೇ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ಲಕ್ಷಾಂತರ ಅರ್ಜಿಗಳ ಮುಕ್ತಿಗೆ ರೈತ ಸಂಘದಿಂದ ಮನವಿ

ಕೋಲಾರ: ಜಿಲ್ಲಾದ್ಯಂತ ಸರ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಇಲಾಖೆಗಳ ಟೇಬಲ್ ಮೇಲೆ ದೂಳು ಹಿಡಿಯುತ್ತಿರುವ ಲಕ್ಷಾಂತರ ಅರ್ಜಿಗಳಿಗೆ ಮುಕ್ತಿ ನೀಡಬೇಕೆಂದು ರೈತ ಸಂಘದಿಂದ ಸರ್ವೇ ಇಲಾಖೆ ಉಪ ನಿರ್ದೇಶಕ ಸಂಜಯ್ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.

ಕೋಲಾರ ಜಿಲ್ಲೆಯ ಸರ್ವೇ ಇಲಾಖೆಗೆ ಅಧಿಕಾರಿಗಳು ಬರಬೇಕಾದರೆ ಭಯಬೀತರಾಗಿದ್ದಾರೆ. ಕಾರಣ ಗೊತ್ತಾಗುತ್ತಿಲ್ಲ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ದೂಳು ಹಿಡಿಯುತ್ತಿರುವ ಲಕ್ಷಾಂತರ ಅರ್ಜಿಗಳನ್ನು ವಿಲೇವಾರಿ ಮಾಡಿ 30 ದಿನಗಳೊಳಗೆ ಸಮಸ್ಯೆಯನ್ನು ಬಗೆ ಹರಿಸಬೇಕೆಂದು ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಒತ್ತಾಯಿಸಿದರು.

ಇ-ಆಸ್ತಿ ಖಾತೆ ಬದಲಾವಣೆ ಆಸ್ತಿ ವರ್ಗಾವಣೆಗೆ ಸರ್ವೇಸ್ಕೆಚ್ ಕಡ್ಡಾಯವಾಗಿದೆ. ಸಕಾಲದಲ್ಲಿ ಸರ್ವೆಕಾರ್ಯ ನಡೆಯದ ಕಾರಣ ರೈತರಿಗೆ ಅಗತ್ಯ ದಾಖಲೆಗಳು ದೊರೆಯದಾಗಿವೆ. ಜೊತೆಗೆ ನಕ್ಷೆ ಹದ್ದುಬಸ್ತು ಗುರುತಿಸುವಿಕೆ ಜಮೀನು ಖರೀದಿ ಮಾರಾಟ ದಾನ ನೀಡಿಕೆ ಪೋಡಿ ಪ್ರಕ್ರಿಯೆ ಪ್ರಮಾಣ ಕಡಿಮೆಯಾಗಿದೆ. ಹಿಸ್ಸಾ ಪ್ರಕ್ರಿಯೆ ಹಕ್ಕು ಬದಲಾವಣೆಗೂ ತೊಂದರೆಗಳಾಗುತ್ತಿದ್ದು ರೈತರು ತೊಂದರೆ ಅನುಭವಿಸುತ್ತಿದ್ದಾರೆ.

ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ರೈತರು ಸಲ್ಲಿಸಿರುವ ಸಾವಿರಾರು ಅರ್ಜಿಗಳು ಬಾಕಿ ಉಳಿದಿವೆ. ಸರ್ವೆಸ್ಕೆಚ್‌ಗೆ ಹೆಚ್ಚಿನ ರೈತರು ಅರ್ಜಿ ಸಲ್ಲಿಸಿದ್ದು, ಮೇಲ್ವಿಚಾರಕರ ಟೇಬಲ್‌ನಲ್ಲಿಯೇ ದೂಳು ಹಿಡಿಯುತ್ತಿದೆ. ಆರ್.ಟಿ.ಸಿ. ಹಾಗೂ ಪಿ ನಂಬರ್ ದುರಸ್ಥಿಗೆ ಸಾವಿರಾರು ರೈತರು ಅರ್ಜಿ ಸಲ್ಲಿಸಿ, ತಹಸೀಲ್ದಾರ್ ರವರ ಕಚೇರಿ ಬಳಿ ಜಾತಕ ಪಕ್ಷಗಳಂತೆ ಕಾದು ಸಾಕಾಗಿದೆ ಎಂದು ಅಧಿಕಾರಿಗಳ ವಿರುದ್ದ ಆರೋಪ ಮಾಡಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಕೋಟಿ ಕೋಟಿ ಹಣದ ಆದಾಯ ಬರುವ ಪಿನಂಬರ್ ಮುಕ್ತಿಗೊಳಿಸಲು ರಾಜಕಾರಣಿಗಳ ಹಾಗೂ ರಿಯಲ್ ಎಸ್ಟೇಟ್ ಉದ್ದಿಮೆಗಳ ಜಮೀನುಗಳನ್ನು ಸರ್ವೆ ಮಾಡಲು ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದಿಲ್ಲ. ಆದರೆ ಬಡ ರೈತರು ಸಲ್ಲಿಸಿರುವ ಅರ್ಜಿ ವಿಲೇವಾರಿ ಮಾಡಲು ಸಿಬ್ಬಂದಿ ಕೊರತೆ ಹಾಗೂ ನಿಯಮದ ಪ್ರಕಾರ ಆನ್‌ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕಾದ ಪರಿಸ್ಥಿತಿ ಇಲಾಖೆಯಲ್ಲಿದೆ ಎಂದು ಅಸಮದಾನ ವ್ಯಕ್ತಪಡಿಸಿದರು.

ಸರ್ಕಾರಗಳಲ್ಲಿ ಮುಖ್ಯಮಂತ್ರಿಗಳು, ಕಂದಾಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಬದಲಾವಣೆ ಆಗುತ್ತಿರುತ್ತಾರೆ. ಆದರೆ ಜಿಲ್ಲೆಯ ಜನರ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತಿಲ್ಲ. ಪ್ರತಿಯೊಂದು ಸಮಸ್ಯೆಗೂ ಬೀದಿಗೆ ಬಂದು ಹೋರಾಟ ಮಾಡುವ ಪರಿಸ್ಥಿತಿ ಇದೆ. ಅದರಲ್ಲಿ ಪ್ರಮುಖವಾಗಿ ರೈತರ ಒಡನಾಡಿಯಾಗಿರುವ ಸರ್ವೆ ಇಲಾಖೆಯಲ್ಲಿನ ಹತ್ತಾರು ವರ್ಷಗಳಲ್ಲಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತಿಲ್ಲ. ಇತ್ತೀಚೆಗೆ ಇಲಾಖೆಯಲ್ಲಿ ಸಿಬ್ಬಂದಿ ಖಾಲಿ ಇದೆ ಎಂಬ ನೆಪದಲ್ಲಿ ರೈತರು ಮತ್ತು ಜನ ಸಾಮಾನ್ಯರು ಕೃಷಿ ಹಾಗೂ ವಿವಿಧ ಆಸ್ತಿಗಳ ಹದ್ದುಬಸ್ತು ಬಿನ್ ಸೇತ್ಕೀ, ತಾತ್ಕಾಲಿ ಪೋಡಿ ಇ-ಸ್ವತ್ತು ಸೇರಿದಂತೆ ಜಮೀನು ಸರ್ವೆಗಾಗಿ ಸಾವಿರಾರು ಜನ ರೈತರು ಅರ್ಜಿ ಸಲ್ಲಿಸಿ ವರ್ಷಾನುಗಟ್ಟಲೆ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದರೂ ಇದುವರೆಗೂ ಅರ್ಜಿ ವಿಲೇವರಿ ಆಗುತ್ತಿಲ್ಲ. ಅರ್ಜಿದಾರರು ಇಲಾಖೆಗೆ ಅಲೆದಾಡಿ ಸುಸ್ತಾಗಿ ಸರ್ವೇ ಇಲಾಖೆ ಜಿಲ್ಲೆಯ ಜನರ ಪಾಲಿಗೆ ಇಲ್ಲದಂತಾಗಿದೆ ಎಂದು ಇಡೀ ಶಾಪವಾಗುತ್ತಿದ್ದಾರೆ. ಅಧಿಕಾರಿಗಳ ವಿರುದ್ದ ಆಕ್ರೋಷ್ಯ ವ್ಯಕ್ತಪಡಿಸಿದರು.

ರೈತರು ಸರ್ವೆ ಇಲಾಖೆಗೆ ಸಲ್ಲಿಸುವ ಯಾವುದೇ ಅರ್ಜಿ 30 ದಿನಗಳಲ್ಲಿ ವಿಲೆವಾರಿಯಾಗಿ ಅರ್ಜಿಯ ಸಮಸ್ಯೆ ಇತ್ಯರ್ತವಾಗಬೇಕು. ಆದರೆ ಇಲಾಖೆಯಲ್ಲಿನ ಸಿಬ್ಬಂದಿ ಕೊರೆತೆಯಿಂದ ಇರುವ ಸಿಬ್ಬಂದಿಗೆ ಮಾನಸಿಕ ಹಾಗೂ ಕೆಲಸದ ಒತ್ತಡ ಮತ್ತು ಒತ್ತುವರಿಯಾಗಿರುವ ಸರ್ಕಾರಿ ಕೆರೆ, ರಾಜಕಾಲುವೆ, ಗುಂಡುತೋಪು, ಹೈಕೋರ್ಟ್ ಆದೇಶದಂತೆ ಒತ್ತುವರಿ ತೆರವುಗೊಳಿಸಲು ಇರುವ ಸಿಬ್ಬಂದಿ ಸೀಮಿತವಾಗಿದ್ದಾರೆ. ಮತ್ತೊಂದಡೆ ಕೈಗಾರಿಕಾ ಪ್ರದೇಶದ ರಸ್ತೆ ಅಭಿವೃದ್ದಿ ಜಮೀನು ವಿವಾದಗಳು, ಸ್ಮಶಾನ ರಸ್ತೆಗಳ ಒತ್ತುವರಿ ತೆರವುಗೊಳಿಸಲು ಕೆಲವು ಸರ್ವೆ ಇಲಾಖೆ ಅಧಿಕಾರಿಗಳು ಸೀಮಿತವಾಗಿದೆ. ಒಟ್ಟಾರೆಯಾಗಿ ಜಿಲ್ಲಾದ್ಯಂತ ಸರ್ವೇ ಇಲಾಖೆ ಎಂಬುದು ರೈತರ ಹಾಗೂ ಜನ ಸಾಮಾನ್ಯರ ಪಾಲಿಗೆ ಇದ್ದು ಇಲ್ಲದಂತ ಇಲಾಖೆಯಾಗಿ ಮಾರ್ಪಟ್ಟಿದೆ ಕಂದಾಯ ಸಚಿವರು ಜಿಲ್ಲಾದ್ಯಂತ ಖಾಲಿ ಇರುವ ಸರ್ವೇ ಇಲಾಖೆ ಹುದ್ದೆಗಳನ್ನು ಭರ್ತಿ ಮಾಡಿ ಟೇಬಲ್‌ಗಳಲ್ಲಿ ದೂಳು ಹಿಡಿಯುತ್ತಿರುವ ಲಕ್ಷಾಂತರ ಅರ್ಜಿಗಳಿಗೆ ಮುಕ್ತಿ ಕೊಡಿಸಿ ವರ್ಷಾನುಗಟ್ಟಲೆ ರೈತರು ಹಾಗೂ ಜನ ಸಾಮಾನ್ಯರು ಇಲಾಖೆಗೆ ಅಲೆದಾಡುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕೆಂದು ಮಾನ್ಯರಲ್ಲಿ ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪ ನಿರ್ದೇಶಕ ಸಂಜಯ್‌ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ರೈತರ ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಆಗುತ್ತಿಲ್ಲ. ಸರ್ಕಾರಕ್ಕೆ ನಿಮ್ಮ ಮನವಿಯನ್ನು ತಲುಪಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಮನವಿ ನೀಡುವಾಗ ಮಂಗಸಂದ್ರ ತಿಮ್ಮಣ್ಣ, ಸುಪ್ರೀಂ ಚಲ, ಶಿವಾರೆಡ್ಡಿ, ಹರೀಶ್, ಯಲ್ಲಪ್ಪ ಇತರರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

18 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago