ಸರ್ವ ಧರ್ಮ ಸಮನ್ವಯ ವಾತಾವರಣ ಕಲ್ಪಿಸಿದ ನ್ಯಾಷನಲ್ ಪ್ರೈಡ್ ಸ್ಕೂಲ್: ಶಾಲೆಯಲ್ಲಿ ಸಾಮೂಹಿಕ ಅಕ್ಷರಾಭ್ಯಾಸ

ವಿದ್ಯಾರ್ಜನೆಗಾಗಿ ಕಾದಿರುವ ಪುಟಾಣಿಗಳಿಗೆ ಶಾಲೆಯ ಬಾಗಿಲು ತೆಗೆದಿದೆ, ತೊದಲು ನುಡಿಯುತ್ತಿದ್ದ ಮಕ್ಕಳು ಅಕ್ಷರಗಳ ಉಚ್ಛಾರಣೆ, ಬರೆಯಲು ಪ್ರಾರಂಭಸಿದ್ದಾರೆ.

ನಗರದ ನ್ಯಾಷನಲ್ ಪ್ರೈಡ್ ಶಾಲೆಯ ಮೊದಲ ದಿನವಾದ ಇಂದು ಶಾಸ್ತ್ರಬದ್ದವಾಗಿಯೇ ಆರಂಭಿಸಲಾಗಿದೆ, ಶಾಸ್ತ್ರಿಗಳ ಸಮ್ಮುಖದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು, ಹಿಂದೂ,ಮುಸ್ಲಿಂ ಮತ್ತು ಕ್ರಿಶ್ಚಿಯನ್ ಮಕ್ಕಳು ಸಹ ಸಾಮೂಹಿಕ ಅಕ್ಷರಾಭ್ಯಾಸದಲ್ಲಿ ಭಾಗವಹಿಸುವ ಮೂಲಕ ಭಾವಕೈತೆ ಸಾರಿದರು.

ಜ್ಞಾನದ ದೇವತೆ ಸ್ವರತಿಯ ಅಶೀರ್ವಾದದೊಂದಿಗೆ ವಿದ್ಯೆ ಕಲಿಕೆಯನ್ನ ಆರಂಭಿಸುವ ಧಾರ್ಮಿಕ ಆಚರಣೆಯೇ ಅಕ್ಷರಾಭ್ಯಾಸ. ಸಾಮಾನ್ಯವಾಗಿ ಶೃಂಗೇರಿಯ ಶಾರದಾಂಬೆಯ ಸನ್ನಿಧಿಯಲ್ಲಿ ತಮ್ಮ ಮಕ್ಕಳ ಅಕ್ಷರಾಭ್ಯಾಸವನ್ನ ಮಾಡುತ್ತಾರೆ, ಈ ಪರಂಪರೆಯನ್ನೇ ಈ ಶಾಲೆಯಲ್ಲಿ ಪ್ರತಿಯೊಂದು ಮಗುವಿನ ಅಕ್ಷರಾಭ್ಯಾಸವನ್ನ ಸಾಮೂಹಿಕವಾಗಿ ಮಾಡಲಾಗಿತು.

ಮಕ್ಕಳ ಜೊತೆ ಕುಳಿತ ಪೋಷಕರು ಸ್ಲೇಟ್ ನಲ್ಲಿ ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು, ಮೊದಲ ಅಕ್ಷರವಾಗಿ ಮಕ್ಕಳು ಕನ್ನಡ ವರ್ಣಮಾಲೆಯ ಅ ಆ ಇ ಈ ನ್ನ ಸ್ಲೇಟ್ ನಲ್ಲಿ ಬರೆದು ಶಾಸ್ತ್ರೋಕ್ತವಾಗಿ ಮೊದಲ ದಿನ ಆರಂಭಿಸಿದರು.

ದೊಡ್ಡಬಳ್ಳಾಪುರ ನಗರದಲ್ಲಿ ಇದೇ ಮೊದಲ ಬಾರಿಗೆ ಅಕ್ಷರಾಭ್ಯಾಸ ಆಚರಣೆಯನ್ನ ಪ್ರಾರಂಭಿಸಲಾಗಿದೆ, ಈ ಕುರಿತು ಮಾತನಾಡಿದ ಶಾಲೆಯ ಕಾರ್ಯದರ್ಶಿಗಳಾದ ಸತೀಶ್, ನಮ್ಮದು ಸರ್ವ ಧರ್ಮ ಸಮನ್ವಯ ಶಾಲೆಯಾಗಿದೆ. ಇಲ್ಲಿ ಮುಸ್ಲಿಂ ಮಕ್ಕಳು ಶ್ಲೋಕವನ್ನ ಕಲಿತ್ತಾರೆ, ಹಿಂದೂ ಮಕ್ಕಳು ದುವಾ ಕಲಿತ್ತಾರೆ ಹಾಗೇಯೇ ಕ್ರಿಶ್ಚಿಯನ್ ಧರ್ಮದ ಬೈಬಲ್ ನಲ್ಲಿರುವ ಪ್ರಾರ್ಥನೆಯನ್ನು ಮಕ್ಕಳಿಗೆ ಹೇಳಿ ಕೊಡಲಾಗುತ್ತಿದೆ ಎಂದರು.

ಶಾಲೆಗೆ ಬಂದ ಮಕ್ಕಳು ಮೊದಲ ಬಾರಿಗೆ ತರಗತಿಯೊಳಗೆ ಹೆಜ್ಜೆ ಇಡುತ್ತಿದ್ದಾರೆ, ಈ ದಿನವನ್ನ ಪೋಷಕರಿಗೆ ಸದಾ ನೆನೆಪಿನ ದಿನವನ್ನಾಗಿ ಮಾಡಲು ನ್ಯಾಷನಲ್ ಪ್ರೈಡ್ ಶಾಲೆ ಮುಂದಾಗಿದೆ, ಮಕ್ಕಳು ತರಗತಿಯೊಳಗೆ ಇಡುತ್ತಿರುವ ಮೊದಲ ಹೆಜ್ಜೆಯ ಫೂಟ್ ಪ್ರಿಂಟ್ ತೆಗದುಕೊಂಡು ತರತಿಯಲ್ಲಿ ದಾಖಲು ಮಾಡಲಾಗುತ್ತಿದೆ, ಶಾಲೆಯ ಮೊದಲ ದಿನವಾದ ಇಂದು ಮಕ್ಕಳ ಜೊತೆಯಲ್ಲಿ ಬಂದ ಪೋಷಕರು ಅಕ್ಷರಭ್ಯಾಸದಲ್ಲಿ ಭಾಗಿಯಾಗಿದ್ದರ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

11 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

11 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

16 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

18 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

21 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

22 hours ago