ಸರ್ ಎಂ.ವಿ ಅವರ ಸಾಧನೆಯನ್ನ ಯುವಪೀಳಿಗೆ ಅರಿತರೆ ಬದುಕು ಪ್ರಜ್ವಲಿಸುತ್ತದೆ-ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ

ಇತಿಹಾಸದಲ್ಲಿಯೇ ವಿಶ್ವೇಶ್ವರಯ್ಯ ಅವರಿಗೆ ಹೋಲಿಸುವ ಮತ್ತೊಬ್ಬ ವ್ಯಕ್ತಿ ಸಿಗಲಾರರು. ಸರ್.ಎಂ. ವಿ. ಅವರ ಬದುಕು ಮತ್ತು ಸಾಧನೆಯನ್ನು ಯುವ ಪೀಳಿಗೆ ಅರಿತಷ್ಟೂ ಬದುಕು ಪ್ರಜ್ವಲಿಸುತ್ತದೆ ಎಂದು ಶ್ರೀ ದೇವರಾಜ ಅರಸ್ ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ ಚಿಕ್ಕಣ್ಣ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪದವಿ ಸಂಜೆ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಎಂಜಿನಿಯರ್ಸ್ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ ಎಂ.ವಿ. ಕನ್ನಡ ಅಕಾಡೆಮಿ ಅಥವಾ ಇಂದಿನ ಕನ್ನಡ ಸಾಹಿತ್ಯ  ಪರಿಷತ್ತಿನ ಮೂಲ ಪ್ರೇರಕಶಕ್ತಿ ಹಾಗೂ ಕಾರಣಕರ್ತರು, ಆ  ಮೂಲಕ ಕನ್ನಡಿಗರ ಒಕ್ಕೂಟ, ಶಿಕ್ಷಣ ಮತ್ತು  ಬೆಳವಣಿಗೆಯಲ್ಲಿ ಕೂಡಾ ವಿಶ್ವೇಶ್ವರಯ್ಯನವರ ಬೆಂಬಲ ಅಗಾಧವಾದದ್ದು ಎಂದರು.

ವಿಶ್ವೇಶ್ವರಯ್ಯನವರು ಶಿಕ್ಷಣ, ತಾಂತ್ರಿಕ ವಿದ್ಯಾಭ್ಯಾಸ, ಕೈಗಾರಿಕಾ ವಿಕಾಸಕ್ಕೆ ಭದ್ರ ಬುನಾದಿ ಹಾಕಿದರು, ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಹಾರಾಣಿ ಕಾಲೇಜು, ಹಲವಾರು  ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್ ಸೌಲಭ್ಯಗಳು, ಮೈಸೂರು ವಿಶ್ವವಿದ್ಯಾಲಯ, ವಿವಿಧ ರೀತಿಯ ಕೈಗಾರಿಕೆಗಳು, ಸಾರ್ವಜನಿಕ ಗ್ರಂಥಾಲಯಗಳು ಇವೆಲ್ಲಾ ವಿಶ್ವೇಶ್ವರಯ್ಯನವರ ಸಮಗ್ರ ಕೊಡುಗೆಗಳು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್.ನಾಗರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು. ಬುದ್ಧ, ಬಸವಣ್ಣನವರ ಕಾಲದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ನೆಲದಲ್ಲಿ ರೂಪುಗೊಂಡಿದೆ, ತಾರತಮ್ಯವನ್ನು ಹೋಗಲಾಡಿಸುವಲ್ಲಿ ಸಂವಿಧಾನ ಸಹಕಾರಿಯಾಗಿದೆ ಎಂದರು.

ಸಂವಿಧಾನ ಕೇವಲ ಭಾರತಕ್ಕೆ ಸೀಮಿತಗೊಳ್ಳದೆ ವಿಶ್ವದ ಹಲವು ದೇಶಗಳು ಸಂವಿಧಾನವನ್ನು ರೂಢಿಸಿಕೊಂಡಿವೆ, ಪ್ರಜೆಗಳಿಂದ, ಪ್ರಜೆಗಳಿಗಾಗಿ,ಪ್ರಜೆಗಳಿಗೋಸ್ಕರ ಇರುವ ಈ ವ್ಯವಸ್ಥೆ ಪ್ರಜಾಪ್ರಭುತ್ವ ವ್ಯವಸ್ಥೆ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ನಾವು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಸರ್.ಎಂ.ವಿಶ್ವೇಶ್ವರಯ್ಯ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ನೆನೆಯಲೇ ಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಕೆ.ದಕ್ಷಿಣಮೂರ್ತಿ, ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಪಿ.ಚೈತ್ರ, ಐ.ಐ.ಕ್ಯೂ.ಎ ಸಂಯೋಜಕರಾದ ದಿವ್ಯ, ಪ್ರಾಧ್ಯಾಪಕರಾದ ಡಾ.ತಾವರೇನಾಯ್ಕ, ಕಲ್ಪನಾ, ಕಿರಣ್, ಶೈಲಜ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

4 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

11 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

14 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

14 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago