ಇತಿಹಾಸದಲ್ಲಿಯೇ ವಿಶ್ವೇಶ್ವರಯ್ಯ ಅವರಿಗೆ ಹೋಲಿಸುವ ಮತ್ತೊಬ್ಬ ವ್ಯಕ್ತಿ ಸಿಗಲಾರರು. ಸರ್.ಎಂ. ವಿ. ಅವರ ಬದುಕು ಮತ್ತು ಸಾಧನೆಯನ್ನು ಯುವ ಪೀಳಿಗೆ ಅರಿತಷ್ಟೂ ಬದುಕು ಪ್ರಜ್ವಲಿಸುತ್ತದೆ ಎಂದು ಶ್ರೀ ದೇವರಾಜ ಅರಸ್ ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ ಚಿಕ್ಕಣ್ಣ ಹೇಳಿದರು.
ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪದವಿ ಸಂಜೆ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಎಂಜಿನಿಯರ್ಸ್ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ ಎಂ.ವಿ. ಕನ್ನಡ ಅಕಾಡೆಮಿ ಅಥವಾ ಇಂದಿನ ಕನ್ನಡ ಸಾಹಿತ್ಯ ಪರಿಷತ್ತಿನ ಮೂಲ ಪ್ರೇರಕಶಕ್ತಿ ಹಾಗೂ ಕಾರಣಕರ್ತರು, ಆ ಮೂಲಕ ಕನ್ನಡಿಗರ ಒಕ್ಕೂಟ, ಶಿಕ್ಷಣ ಮತ್ತು ಬೆಳವಣಿಗೆಯಲ್ಲಿ ಕೂಡಾ ವಿಶ್ವೇಶ್ವರಯ್ಯನವರ ಬೆಂಬಲ ಅಗಾಧವಾದದ್ದು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್.ನಾಗರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು. ಬುದ್ಧ, ಬಸವಣ್ಣನವರ ಕಾಲದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ನೆಲದಲ್ಲಿ ರೂಪುಗೊಂಡಿದೆ, ತಾರತಮ್ಯವನ್ನು ಹೋಗಲಾಡಿಸುವಲ್ಲಿ ಸಂವಿಧಾನ ಸಹಕಾರಿಯಾಗಿದೆ ಎಂದರು.
ಸಂವಿಧಾನ ಕೇವಲ ಭಾರತಕ್ಕೆ ಸೀಮಿತಗೊಳ್ಳದೆ ವಿಶ್ವದ ಹಲವು ದೇಶಗಳು ಸಂವಿಧಾನವನ್ನು ರೂಢಿಸಿಕೊಂಡಿವೆ, ಪ್ರಜೆಗಳಿಂದ, ಪ್ರಜೆಗಳಿಗಾಗಿ,ಪ್ರಜೆಗಳಿಗೋಸ್ಕರ ಇರುವ ಈ ವ್ಯವಸ್ಥೆ ಪ್ರಜಾಪ್ರಭುತ್ವ ವ್ಯವಸ್ಥೆ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ನಾವು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಸರ್.ಎಂ.ವಿಶ್ವೇಶ್ವರಯ್ಯ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ನೆನೆಯಲೇ ಬೇಕು ಎಂದರು.
ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಕೆ.ದಕ್ಷಿಣಮೂರ್ತಿ, ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಪಿ.ಚೈತ್ರ, ಐ.ಐ.ಕ್ಯೂ.ಎ ಸಂಯೋಜಕರಾದ ದಿವ್ಯ, ಪ್ರಾಧ್ಯಾಪಕರಾದ ಡಾ.ತಾವರೇನಾಯ್ಕ, ಕಲ್ಪನಾ, ಕಿರಣ್, ಶೈಲಜ ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…