ಸರ್ ಎಂ.ವಿ ಅವರ ಸಾಧನೆಯನ್ನ ಯುವಪೀಳಿಗೆ ಅರಿತರೆ ಬದುಕು ಪ್ರಜ್ವಲಿಸುತ್ತದೆ-ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ

ಇತಿಹಾಸದಲ್ಲಿಯೇ ವಿಶ್ವೇಶ್ವರಯ್ಯ ಅವರಿಗೆ ಹೋಲಿಸುವ ಮತ್ತೊಬ್ಬ ವ್ಯಕ್ತಿ ಸಿಗಲಾರರು. ಸರ್.ಎಂ. ವಿ. ಅವರ ಬದುಕು ಮತ್ತು ಸಾಧನೆಯನ್ನು ಯುವ ಪೀಳಿಗೆ ಅರಿತಷ್ಟೂ ಬದುಕು ಪ್ರಜ್ವಲಿಸುತ್ತದೆ ಎಂದು ಶ್ರೀ ದೇವರಾಜ ಅರಸ್ ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ ಚಿಕ್ಕಣ್ಣ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪದವಿ ಸಂಜೆ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಎಂಜಿನಿಯರ್ಸ್ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ ಎಂ.ವಿ. ಕನ್ನಡ ಅಕಾಡೆಮಿ ಅಥವಾ ಇಂದಿನ ಕನ್ನಡ ಸಾಹಿತ್ಯ  ಪರಿಷತ್ತಿನ ಮೂಲ ಪ್ರೇರಕಶಕ್ತಿ ಹಾಗೂ ಕಾರಣಕರ್ತರು, ಆ  ಮೂಲಕ ಕನ್ನಡಿಗರ ಒಕ್ಕೂಟ, ಶಿಕ್ಷಣ ಮತ್ತು  ಬೆಳವಣಿಗೆಯಲ್ಲಿ ಕೂಡಾ ವಿಶ್ವೇಶ್ವರಯ್ಯನವರ ಬೆಂಬಲ ಅಗಾಧವಾದದ್ದು ಎಂದರು.

ವಿಶ್ವೇಶ್ವರಯ್ಯನವರು ಶಿಕ್ಷಣ, ತಾಂತ್ರಿಕ ವಿದ್ಯಾಭ್ಯಾಸ, ಕೈಗಾರಿಕಾ ವಿಕಾಸಕ್ಕೆ ಭದ್ರ ಬುನಾದಿ ಹಾಕಿದರು, ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಹಾರಾಣಿ ಕಾಲೇಜು, ಹಲವಾರು  ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್ ಸೌಲಭ್ಯಗಳು, ಮೈಸೂರು ವಿಶ್ವವಿದ್ಯಾಲಯ, ವಿವಿಧ ರೀತಿಯ ಕೈಗಾರಿಕೆಗಳು, ಸಾರ್ವಜನಿಕ ಗ್ರಂಥಾಲಯಗಳು ಇವೆಲ್ಲಾ ವಿಶ್ವೇಶ್ವರಯ್ಯನವರ ಸಮಗ್ರ ಕೊಡುಗೆಗಳು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್.ನಾಗರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು. ಬುದ್ಧ, ಬಸವಣ್ಣನವರ ಕಾಲದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ನೆಲದಲ್ಲಿ ರೂಪುಗೊಂಡಿದೆ, ತಾರತಮ್ಯವನ್ನು ಹೋಗಲಾಡಿಸುವಲ್ಲಿ ಸಂವಿಧಾನ ಸಹಕಾರಿಯಾಗಿದೆ ಎಂದರು.

ಸಂವಿಧಾನ ಕೇವಲ ಭಾರತಕ್ಕೆ ಸೀಮಿತಗೊಳ್ಳದೆ ವಿಶ್ವದ ಹಲವು ದೇಶಗಳು ಸಂವಿಧಾನವನ್ನು ರೂಢಿಸಿಕೊಂಡಿವೆ, ಪ್ರಜೆಗಳಿಂದ, ಪ್ರಜೆಗಳಿಗಾಗಿ,ಪ್ರಜೆಗಳಿಗೋಸ್ಕರ ಇರುವ ಈ ವ್ಯವಸ್ಥೆ ಪ್ರಜಾಪ್ರಭುತ್ವ ವ್ಯವಸ್ಥೆ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ನಾವು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಸರ್.ಎಂ.ವಿಶ್ವೇಶ್ವರಯ್ಯ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ನೆನೆಯಲೇ ಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಕೆ.ದಕ್ಷಿಣಮೂರ್ತಿ, ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಪಿ.ಚೈತ್ರ, ಐ.ಐ.ಕ್ಯೂ.ಎ ಸಂಯೋಜಕರಾದ ದಿವ್ಯ, ಪ್ರಾಧ್ಯಾಪಕರಾದ ಡಾ.ತಾವರೇನಾಯ್ಕ, ಕಲ್ಪನಾ, ಕಿರಣ್, ಶೈಲಜ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

41 minutes ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

2 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

3 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

6 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

9 hours ago

ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ಕಟ್ಟುನಿಟ್ಟಿನ ಕ್ರಮ

ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…

21 hours ago