ಸರ್ ಎಂ.ವಿ ಅವರ ಸಾಧನೆಯನ್ನ ಯುವಪೀಳಿಗೆ ಅರಿತರೆ ಬದುಕು ಪ್ರಜ್ವಲಿಸುತ್ತದೆ-ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ

ಇತಿಹಾಸದಲ್ಲಿಯೇ ವಿಶ್ವೇಶ್ವರಯ್ಯ ಅವರಿಗೆ ಹೋಲಿಸುವ ಮತ್ತೊಬ್ಬ ವ್ಯಕ್ತಿ ಸಿಗಲಾರರು. ಸರ್.ಎಂ. ವಿ. ಅವರ ಬದುಕು ಮತ್ತು ಸಾಧನೆಯನ್ನು ಯುವ ಪೀಳಿಗೆ ಅರಿತಷ್ಟೂ ಬದುಕು ಪ್ರಜ್ವಲಿಸುತ್ತದೆ ಎಂದು ಶ್ರೀ ದೇವರಾಜ ಅರಸ್ ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ ಚಿಕ್ಕಣ್ಣ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪದವಿ ಸಂಜೆ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಎಂಜಿನಿಯರ್ಸ್ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ ಎಂ.ವಿ. ಕನ್ನಡ ಅಕಾಡೆಮಿ ಅಥವಾ ಇಂದಿನ ಕನ್ನಡ ಸಾಹಿತ್ಯ  ಪರಿಷತ್ತಿನ ಮೂಲ ಪ್ರೇರಕಶಕ್ತಿ ಹಾಗೂ ಕಾರಣಕರ್ತರು, ಆ  ಮೂಲಕ ಕನ್ನಡಿಗರ ಒಕ್ಕೂಟ, ಶಿಕ್ಷಣ ಮತ್ತು  ಬೆಳವಣಿಗೆಯಲ್ಲಿ ಕೂಡಾ ವಿಶ್ವೇಶ್ವರಯ್ಯನವರ ಬೆಂಬಲ ಅಗಾಧವಾದದ್ದು ಎಂದರು.

ವಿಶ್ವೇಶ್ವರಯ್ಯನವರು ಶಿಕ್ಷಣ, ತಾಂತ್ರಿಕ ವಿದ್ಯಾಭ್ಯಾಸ, ಕೈಗಾರಿಕಾ ವಿಕಾಸಕ್ಕೆ ಭದ್ರ ಬುನಾದಿ ಹಾಕಿದರು, ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಹಾರಾಣಿ ಕಾಲೇಜು, ಹಲವಾರು  ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್ ಸೌಲಭ್ಯಗಳು, ಮೈಸೂರು ವಿಶ್ವವಿದ್ಯಾಲಯ, ವಿವಿಧ ರೀತಿಯ ಕೈಗಾರಿಕೆಗಳು, ಸಾರ್ವಜನಿಕ ಗ್ರಂಥಾಲಯಗಳು ಇವೆಲ್ಲಾ ವಿಶ್ವೇಶ್ವರಯ್ಯನವರ ಸಮಗ್ರ ಕೊಡುಗೆಗಳು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್.ನಾಗರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು. ಬುದ್ಧ, ಬಸವಣ್ಣನವರ ಕಾಲದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ನೆಲದಲ್ಲಿ ರೂಪುಗೊಂಡಿದೆ, ತಾರತಮ್ಯವನ್ನು ಹೋಗಲಾಡಿಸುವಲ್ಲಿ ಸಂವಿಧಾನ ಸಹಕಾರಿಯಾಗಿದೆ ಎಂದರು.

ಸಂವಿಧಾನ ಕೇವಲ ಭಾರತಕ್ಕೆ ಸೀಮಿತಗೊಳ್ಳದೆ ವಿಶ್ವದ ಹಲವು ದೇಶಗಳು ಸಂವಿಧಾನವನ್ನು ರೂಢಿಸಿಕೊಂಡಿವೆ, ಪ್ರಜೆಗಳಿಂದ, ಪ್ರಜೆಗಳಿಗಾಗಿ,ಪ್ರಜೆಗಳಿಗೋಸ್ಕರ ಇರುವ ಈ ವ್ಯವಸ್ಥೆ ಪ್ರಜಾಪ್ರಭುತ್ವ ವ್ಯವಸ್ಥೆ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ನಾವು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಸರ್.ಎಂ.ವಿಶ್ವೇಶ್ವರಯ್ಯ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ನೆನೆಯಲೇ ಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಕೆ.ದಕ್ಷಿಣಮೂರ್ತಿ, ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಪಿ.ಚೈತ್ರ, ಐ.ಐ.ಕ್ಯೂ.ಎ ಸಂಯೋಜಕರಾದ ದಿವ್ಯ, ಪ್ರಾಧ್ಯಾಪಕರಾದ ಡಾ.ತಾವರೇನಾಯ್ಕ, ಕಲ್ಪನಾ, ಕಿರಣ್, ಶೈಲಜ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

7 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

8 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

9 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

9 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

13 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

15 hours ago